ರಾಜ್ಯ ಸರ್ಕಾರದಲ್ಲಿ ಎಲ್ಲರಿಂದಲೂ ವರ್ಗಾವಣೆ ದಂಧೆ: ಮಾಜಿ ಸಚಿವ ಅಶ್ವತ್ಥನಾರಾಯಣ

Published : Aug 06, 2023, 02:30 AM IST
ರಾಜ್ಯ ಸರ್ಕಾರದಲ್ಲಿ ಎಲ್ಲರಿಂದಲೂ ವರ್ಗಾವಣೆ ದಂಧೆ: ಮಾಜಿ ಸಚಿವ ಅಶ್ವತ್ಥನಾರಾಯಣ

ಸಾರಾಂಶ

ಗೃಹ ಇಲಾಖೆಯಲ್ಲಿ ಹಸ್ತಕ್ಷೇಪ ಇರಬಾರದು ಎಂದು ಸುಪ್ರೀಂಕೋರ್ಟ್‌ ಆದೇಶ ಇದೆ. ಆದರೆ, ಎಲ್ಲಾ ಕಾನೂನುಗಳಿಗೆ ತೂರಲಾಗಿದೆ. ಸರ್ಕಾರದಿಂದ ನ್ಯಾಯ ಪಡೆಯುವುದು ಕಷ್ಟವಾಗಿದೆ. ಕಾನೂನು ಸುವ್ಯವಸ್ಥೆ ಕುಸಿದಿದೆ: ಮಾಜಿ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ 

ಬೆಂಗಳೂರು(ಆ.06):  ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಒಬ್ಬ ವ್ಯಕ್ತಿ ಮಾತ್ರವಲ್ಲ, ಎಲ್ಲರೂ ವರ್ಗಾವಣೆ ದಂಧೆ, ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಮಾಜಿ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಆರೋಪಿಸಿದ್ದಾರೆ. 

ಶನಿವಾರ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು, ಸಚಿವರು ಹಸ್ತಕ್ಷೇಪ ಮಾಡಬಾರದು ಎಂದೇ ಪೊಲೀಸ್‌ ಎಸ್ಟಾಬ್ಲಿಷ್‌ಮೆಂಟ್‌ ಬೋರ್ಡ್‌ ಸ್ಥಾಪನೆಯಾಗಿದೆ. ಒಮ್ಮೆ ಮಂಡಳಿಯಲ್ಲಿ ತೀರ್ಮಾನಿಸಿ ವರ್ಗಾವಣೆ ಮಾಡಿದರೆ ತಡೆಹಿಡಿಯಲು ಅವಕಾಶ ಇಲ್ಲ. ಆದರೆ, ಮಂಡಳಿಯಲ್ಲಿ ಕಾನೂನು ಮೀರಿ ಹಸ್ತಕ್ಷೇಪ ಮಾಡಲಾಗುತ್ತಿದೆ. ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ತಡೆ ಹಿಡಿದು ಭಂಡತನ ತೋರುತ್ತಿರುವ ಸರ್ಕಾರದಿಂದಲೇ ಕಾನೂನು ಉಲ್ಲಂಘನೆಯಾಗುತ್ತಿದೆ ಎಂದು ಕಿಡಿಕಾರಿದರು. 

ಸರ್ಕಾರಕ್ಕೆ ಒಳಗಿನಿಂದಲೇ ಏನೋ ಆಗುತ್ತಿರುವಂತಿದೆ: ಅಶ್ವತ್ಥನಾರಾಯಣ

ಗೃಹ ಇಲಾಖೆಯಲ್ಲಿ ಹಸ್ತಕ್ಷೇಪ ಇರಬಾರದು ಎಂದು ಸುಪ್ರೀಂಕೋರ್ಟ್‌ ಆದೇಶ ಇದೆ. ಆದರೆ, ಎಲ್ಲಾ ಕಾನೂನುಗಳಿಗೆ ತೂರಲಾಗಿದೆ. ಸರ್ಕಾರದಿಂದ ನ್ಯಾಯ ಪಡೆಯುವುದು ಕಷ್ಟವಾಗಿದೆ. ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಹೇಳಿದ ಅವರು, ಜೆಡಿಎಸ್‌ ಸಹ ಪ್ರತಿಪಕ್ಷವಾಗಿದ್ದು, ಜೆಡಿಎಸ್‌, ಬಿಜೆಪಿ ಜನರ ಧ್ವನಿಯಾಗಿವೆ. ನಾವು ಸಹ ಸರ್ಕಾರದ ಕಿವಿ ಹಿಂಡಿರುವ ಕೆಲಸ ಮಾಡುತೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!