
ಬೆಂಗಳೂರು(ಆ.29): ‘ಆಪರೇಷನ್ ಹಸ್ತ ಮಾಡುವ ಅನಿವಾರ್ಯ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಇಲ್ಲ. ನಮ್ಮ ತತ್ವ ಸಿದ್ಧಾಂತವನ್ನು ಯಾರು ಒಪ್ಪಿಕೊಳ್ಳುತ್ತಾರೋ ಅಂತಹವರಿಗೆ ಸ್ವಾಗತವಿದೆ. ಸ್ಥಳೀಯ ಮಟ್ಟದಲ್ಲಿ ಯಾರಿಗೆ ವಿರೋಧ ಇಲ್ಲವೋ ಅಂತಹವರನ್ನು ಸೇರಿಸಿಕೊಳ್ಳುತ್ತೇವೆ’ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.
ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್ಗೌಡ ಭೇಟಿ ಬಗ್ಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ‘ಸುರೇಶ್ ಗೌಡ ಬಿಜೆಪಿಯ ಶಾಸಕರು. ನಾವು ಯಾರನ್ನೂ ಪಕ್ಷಕ್ಕೆ ಸೆಳೆಯುವ ಪ್ರಯತ್ನ ಮಾಡ್ತಿಲ್ಲ. ಎಲ್ಲ ಪಕ್ಷಗಳಲ್ಲೂ ನನಗೆ ಸ್ನೇಹಿತರಿದ್ದಾರೆ. ನಾವು ಸೇರಿದಾಗ ರಾಜಕೀಯ ಮಾತ್ರವೇ ಚರ್ಚೆಯಾಗಿದೆ ಎಂದಲ್ಲ. ಅಧಿಕಾರದಲ್ಲಿದ್ದಾಗ ಹೆಚ್ಚು ಆಸಕ್ತಿ ತೋರುತ್ತಾರೆ. ಎಲ್ಲಿ ನಮ್ಮ ಪಕ್ಷ ದುರ್ಬಲವಾಗಿದೆಯೋ ಅಲ್ಲಿ ಸಂಘಟನೆ ಗಟ್ಟಿಮಾಡಬೇಕು ಎಂಬುದು ನಮ್ಮ ನಿಲುವು’ ಎಂದು ಕುತೂಹಲಕಾರಿ ಹೇಳಿಕೆ ನೀಡಿದರು.
ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಜಾರಿಗೆ ಬಿಜೆಪಿ ನಾಯಕನ ಸಿದ್ಧತೆ..?
‘ಪಕ್ಷ ಸಂಘಟನೆ ನಮಗೆ ಆದ್ಯತೆ. ಎಲ್ಲಿ ನಮಗೆ ಸೋಲಾಗಿದೆ, ಕಾರ್ಯಕರ್ತರಿಗೆ ಸಮಸ್ಯೆ ಆಗಿದೆ ಎಂಬುದನ್ನು ಪರಿಶೀಲಿಸಿ ಅಲ್ಲಿ ನಾವು ಸಂಘಟನೆ ಕೆಲಸ ಮಾಡುತ್ತೇವೆ. ಸದ್ಯ ಲೋಕಸಭೆಗೆ ಅಭ್ಯರ್ಥಿಗಳ ಕೊರತೆ ಏನೂ ಕಾಣುತ್ತಿಲ್ಲ. ಆಪರೇಷನ್ ಹಸ್ತ ಎಂಬ ಪದವೂ ಅಪ್ರಸ್ತುತ. ಅಧಿಕಾರ ಬೇಕು ಎಂದರೆ ಆಪರೇಷನ್ ಹಸ್ತ ಬೇಕಾಗುತ್ತದೆ. ನಾವು ಸ್ವಂತ ಬಲದಿಂದಲೇ ಅಧಿಕಾರಕ್ಕೆ ಬಂದಿದ್ದೇವೆ’ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.