ಶೀಘ್ರ ಕಾಂಗ್ರೆಸ್‌ನ ಇನ್ನೆರಡು ಗ್ಯಾರಂಟಿ ಆರಂಭ: ಸಚಿವ ಎಂ.ಬಿ. ಪಾಟೀಲ

Published : Aug 06, 2023, 11:30 PM IST
ಶೀಘ್ರ ಕಾಂಗ್ರೆಸ್‌ನ ಇನ್ನೆರಡು ಗ್ಯಾರಂಟಿ ಆರಂಭ: ಸಚಿವ ಎಂ.ಬಿ. ಪಾಟೀಲ

ಸಾರಾಂಶ

ನಮ್ಮ ಸರ್ಕಾರ ಜನರಿಗೆ ನೀಡಿರುವ 5 ಗ್ಯಾರಂಟಿಗಳ ಪೈಕಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ, ಅನ್ನಭಾಗ್ಯ ಯೋಜನೆ ಅನುಷ್ಠಾನಗೊಳಿಸಲಾಗಿದೆ. ಇದೀಗ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಲಾಗಿದೆ. ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ನೀಡುವ ಗೃಹಲಕ್ಷಿ ಯೋಜನೆಯನ್ನು ಆ. 15ರಿಂದ ಆರಂಭಿಸಲಾಗುವುದು. ಯುವ ನಿಧಿ ಯೋಜನೆಗೆ ಇನ್ನಾರು ತಿಂಗಳಲ್ಲಿ ಚಾಲನೆ ನೀಡಲಾಗುವುದು: ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ 

ವಿಜಯಪುರ(ಆ.06):  ನಮ್ಮ ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆಯುವ ಸರ್ಕಾರವಾಗಿದೆ. ಐದು ಗ್ಯಾರಂಟಿಗಳಲ್ಲಿ ಈಗಾಗಲೇ ಮೂರು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲಾಗಿದೆ. ಇನ್ನು ಎರಡು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

ನಗರದ ಕಂದಗಲ್‌ ಶ್ರೀಹನುಮಂತರಾಯ ರಂಗಮಂದಿರದಲ್ಲಿ ಶನಿವಾರ ಸರ್ಕಾರದ ಗ್ಯಾರಂಟಿ ಯೋಜನೆಯಾಗಿರುವ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಫಲಾನುಭವಿಗಳಿಗೆ ಶೂನ್ಯ ವಿದ್ಯುತ್‌ ಬಿಲ್‌ ವಿತರಿಸಿ ಅವರು ಮಾತನಾಡಿದರು.

ಕಾಂಗ್ರೆಸ್‌ ಸರ್ಕಾರ ಸ್ಥಿರ, ಸುಭದ್ರ: ಸಚಿವ ಶಿವಾನಂದ ಪಾಟೀಲ

ನಮ್ಮ ಸರ್ಕಾರ ಜನರಿಗೆ ನೀಡಿರುವ 5 ಗ್ಯಾರಂಟಿಗಳ ಪೈಕಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ, ಅನ್ನಭಾಗ್ಯ ಯೋಜನೆ ಅನುಷ್ಠಾನಗೊಳಿಸಲಾಗಿದೆ. ಇದೀಗ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಲಾಗಿದೆ. ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ನೀಡುವ ಗೃಹಲಕ್ಷಿ ಯೋಜನೆಯನ್ನು ಆ. 15ರಿಂದ ಆರಂಭಿಸಲಾಗುವುದು. ಯುವ ನಿಧಿ ಯೋಜನೆಗೆ ಇನ್ನಾರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ಹೇಳಿದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Imran Masood: ಮೋದಿಗೆ ಟ್ರಂಪ್ ಅಂದ್ರೆ ಭಯ, ತಮ್ಮವರ ಮೇಲೆಯೇ ದಾಳಿ: ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಕಿಡಿ
Mani Shankar Aiyar: ರಾಹುಲ್ ಗಾಂಧಿಗೆ INDIA ಒಕ್ಕೂಟದ ಹಿರಿತನ ಬೇಡ, ಮಮತಾ ಬ್ಯಾನರ್ಜಿ ನಾಯಕಿಯಾಗಲಿ ಎಂದ ಹಿರಿಯ ನಾಯಕ!