ಕಾಂಗ್ರೆಸ್ ಸರ್ಕಾರಕ್ಕೆ ಹಿಂದುಗಳ ಧ್ವನಿ ಹತ್ತಿಕ್ಕಲು ಸಾಧ್ಯವಾಗದು: ಡಾ.ಭರತ್‌ ಶೆಟ್ಟಿ

Published : Aug 07, 2023, 11:49 AM ISTUpdated : Aug 07, 2023, 11:50 AM IST
ಕಾಂಗ್ರೆಸ್ ಸರ್ಕಾರಕ್ಕೆ ಹಿಂದುಗಳ ಧ್ವನಿ ಹತ್ತಿಕ್ಕಲು ಸಾಧ್ಯವಾಗದು: ಡಾ.ಭರತ್‌ ಶೆಟ್ಟಿ

ಸಾರಾಂಶ

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅನ್ಯಾಯದ ವಿರುದ್ಧ ಹೋರಾಟ ನಡೆಸುತ್ತಿರುವ ಹಿಂದೂ ಸಂಘಟನೆಗಳ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಲೇ ಬಂದಿದ್ದು, ಇದು ಸಾಧ್ಯವಾಗದ ವಿಚಾರ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್‌ ಶೆಟ್ಟಿ ಹೇಳಿದರು

ಮಂಗಳೂರು (ಆ.7) :  ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅನ್ಯಾಯದ ವಿರುದ್ಧ ಹೋರಾಟ ನಡೆಸುತ್ತಿರುವ ಹಿಂದೂ ಸಂಘಟನೆಗಳ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಲೇ ಬಂದಿದ್ದು, ಇದು ಸಾಧ್ಯವಾಗದ ವಿಚಾರ. ಅನ್ಯಾಯ, ದೌರ್ಜನ್ಯದ ವಿರುದ್ಧ ಹಿಂದೂ ಸಮಾಜ ಎದ್ದು ನಿಂತರೆ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಯ ವಾರಂಟಿ ಶೀಘ್ರ ಕೊನೆಗೊಂಡರೂ ಅಚ್ಚರಿಯಿಲ್ಲ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್‌ ಶೆಟ್ಟಿ ಹೇಳಿದರು

ಉಡುಪಿಯ ಪ್ಯಾರಾ ಮೆಡಿಕಲ್‌ ಕಾಲೇಜಿನ ಶೌಚಾಲಯದಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಮೂವರು ವಿದ್ಯಾರ್ಥಿನಿಯರು ಮೊಬೈಲ್‌ ಕ್ಯಾಮರಾ ಅಳವಡಿಸಿ ವೀಡಿಯೋ ಚಿತ್ರೀಕರಣ ಮಾಡುವ ಗಂಭೀರ ಅಪರಾಧವನ್ನು ಮಾಡಿ ಸಿಕ್ಕಿಹಾಕಿಕೊಂಡಿದ್ದಾರೆ. ಇದರ ವಿರುದ್ಧ ಧ್ವನಿ ಎತ್ತಿರುವ ಹಿಂದೂ ಸಮಾಜದ ಮುಖಂಡ ಶರಣ್‌ ಪಂಪ್‌ವೆಲ…, ದಿನೇಶ್‌ ಮೆಂಡನ್‌, ವೀಣಾ ಶೆಟ್ಟಿಸೇರಿದಂತೆ ಹಲವರ ಮೇಲೆ ಪೊಲೀಸ್‌ ಇಲಾಖೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.

ಉಡುಪಿ ವಿಡಿಯೋ ವಿವಾದ: ತನಿಖೆಯಲ್ಲೂ ಹೇಳಿಕೆಗೆ ಬದ್ಧವಾಗಿರುವ ಮುಸ್ಲಿಂ ವಿದ್ಯಾರ್ಥಿನಿಯರು

ಉಡುಪಿ ಘಟನೆಯ ವಿವರಗಳನ್ನು ದಾಖಲೆ ಸಮೇತ ರಾಜ್ಯದ ರಾಜ್ಯಪಾಲರಿಗೆ ಕರಾವಳಿ ಬಿಜೆಪಿ ಶಾಸಕರ ನಿಯೋಗ ಹಸ್ತಾಂತರಿಸಿದೆ. ಪ್ರಕರಣದ ತನಿಖೆಯನ್ನು ಸೂಕ್ತ ರೀತಿಯಲ್ಲಿ ನಡೆಸುವಂತೆ ಸರ್ಕಾರಕ್ಕೆ ಸೂಚಿಸುವಂತೆ ಒತ್ತಾಯಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಅಪ್ರಾಪ್ತ ಬಾಲಕಿ ಗ್ಯಾಂಗ್‌ರೇಪ್‌ ಬಗ್ಗೆ ಬಿಜೆಪಿ ಪ್ರತಿಭಟನೆ ಏಕಿಲ್ಲ: ಕೃಪಾ ಆಳ್ವ

ಉಡುಪಿಯ ವಿಡಿಯೊ ಪ್ರಕರಣದಲ್ಲಿ ಭಾರೀ ಪ್ರತಿಭಟನೆ ನಡೆಸುವ ಕರಾವಳಿಯ ಬಿಜೆಪಿ ಶಾಸಕರು, ಸಂಸದರು ವಿಟ್ಲದಲ್ಲಿ ಅಪ್ರಾಪ್ತ ದಲಿತ ಬಾಲಕಿ ಮೇಲೆ ಗ್ಯಾಂಗ್‌ ರೇಪ್‌ ನಡೆದಾಗ ಏಕೆ ಪ್ರತಿಭಟನೆ ಮಾಡಿಲ್ಲ ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷೆ ಕೃಪಾ ಅಮರ್‌ ಆಳ್ವ ಪ್ರಶ್ನಿಸಿದ್ದಾರೆ. ಅಲ್ಲದೆ, ಸಂತ್ರಸ್ತ ಬಾಲಕಿಯ ಶಿಕ್ಷಣ ಮುಂದುವರಿಕೆ, ಸರ್ಕಾರದಿಂದ ಮನೆ ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸುವುದಾಗಿಯೂ ಭರವಸೆ ನೀಡಿದರು.

ಮಡಿಕೇರಿಯಿಂದ ನಾಪತ್ರೆಯಾಗಿದ್ದ ಇಬ್ಬರು ಯುವತಿಯರು ಮಲ್ಪೆ ಸಮುದ್ರ ಪಾಲು!

ಗ್ಯಾಂಗ್‌ ರೇಪ್‌ಗೆ ಒಳಗಾದ ವಿಟ್ಲದ ಬಾಲಕಿಯ ಮನೆಗೆ ಶನಿವಾರ ಬೆಳಗ್ಗೆ ಭೇಟಿ ನೀಡಿ ಸಾಂತ್ವನ ನೀಡಿದ ಅವರು ಬಳಿಕ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಮೂಲ್ಕಿ ಠಾಣಾ ವ್ಯಾಪ್ತಿಯಲ್ಲಿ ಮಹಿಳೆ ಸ್ನಾನ ಮಾಡುವಾಗ ವಿಡಿಯೊ ಮಾಡಿದ ಪ್ರಕರಣವೂ ನಡೆದಿದೆ. ಈ ವಿಚಾರದಲ್ಲೂ ಬಿಜೆಪಿ, ಸಂಘ ಪರಿವಾರದವರು ಮಾತನಾಡುತ್ತಿಲ್ಲ. ಆರೋಪಿ ಹಿಂದೂ ಆಗಿರುವುದರಿಂದಲೇ ಬಾಯಿಮುಚ್ಚಿ ಕೂತಿದ್ದಾರೆ. ಈಗ ರಾಜಕೀಯ ಮಾಡುವವರು ಯಾರು ಎನ್ನುವುದು ಎಲ್ಲರಿಗೆ ಗೊತ್ತಾಗಿದೆ ಎಂದರು.

ಕಾಂಗ್ರೆಸ್‌ ಮುಖಂಡರಾದ ಕೋಡಿಜಾಲ್‌ ಇಬ್ರಾಹಿಂ, ಶುಭೋದಯ ಆಳ್ವ, ಉಬೈದು ವಿಟ್ಲ, ನಝೀರ್‌ ಬಜಾಲ್‌ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಡಾ ಜಿ ಪರಮೇಶ್ವರ ರಾಜ್ಯದ ಸಿಎಂ ಆಗಬೇಕು, ರಾಜಕೀಯದಲ್ಲಿ ಸಂಚಲನ ಮೂಡಿಸೋ ಹೇಳಿಕೆ ಕೊಟ್ಟ ಕೇಂದ್ರ ಸಚಿವ ವಿ. ಸೋಮಣ್ಣ!
ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!