ಬಿಜೆಪಿ ಮುಖಂಡ ದಿಢೀರ್ ರಾಜೀನಾಮೆ : ಶೀಘ್ರ ಕೈ ಸೇರ್ಪಡೆ..?

Published : Jan 19, 2019, 01:15 PM IST
ಬಿಜೆಪಿ ಮುಖಂಡ ದಿಢೀರ್ ರಾಜೀನಾಮೆ : ಶೀಘ್ರ ಕೈ ಸೇರ್ಪಡೆ..?

ಸಾರಾಂಶ

ಬಿಜೆಪಿ ನಾಯಕರ ಮೇಲಿನ ಅಸಮಾಧಾನದಿಂದ ಪಕ್ಷ ತೊರೆಯುವುದಾಗಿ ಮಾಜಿ ಸಂಸದ ಘೋಷಿಸಿದ್ದಾರೆ. 

ಪಾಟ್ನಾ : ಬಿಜೆಪಿ ಮಾಜಿ ಸಂಸದ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಬಿಹಾರದ ಪುರ್ನಿಯಾ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಉದಯ್ ಸಿಂಗ್ ಶುಕ್ರವಾರ ಬಿಜೆಪಿ ತೊರೆಯುತ್ತಿದ್ದು, ಇದಕ್ಕೆ ಪಕ್ಷದ ನಾಯಕರ ಮೇಲಿನ ಅಸಮಾಧಾನವೇ ಕಾರಣ ಎಂದು ಹೇಳಿದ್ದಾರೆ. 

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಅಧಿಕಾರ ಹಂಚಿಕೆ ಮಾಡಿಕೊಂಡಿರುವುದೇ ತಮ್ಮ ಅಸಮಾಧಾನಕ್ಕೆ ಕಾರಣ ಎಂದಿದ್ದಾರೆ. 

ನಿತೀಶ್ ಕುಮಾರ್ ನೇತೃತ್ವದ ರಾಜ್ಯ ಸರ್ಕಾರ ಒಳ್ಳೆಯ ಆಡಳಿತ ನೀಡುವಲ್ಲಿ ವಿಫಲವಾಗಿದೆ. ಆದ್ದರಿಂದ ಬಿಜೆಪಿಯೂ ಕೂಡ ಇಲ್ಲಿ ಸೇರಿ ಸಂಪೂರ್ಣ ಸ್ಥಿತಿ ಹದಗೆಟ್ಟಿದೆ ಎಂದು ಸಿಂಗ್ ಆರೋಪಿಸಿದ್ದಾರೆ. 

‘ಬಿಜೆಪಿಯಿಂದ ಮಂತ್ರಿಗಿರಿಯೊಂದಿಗೆ 100 ಕೋಟಿ ಆಫರ್?’

ಅಲ್ಲದೇ ಲೋಕಸಭಾ ಸೀಟು ಹಂಚಿಕೆ ಬಗ್ಗೆಯೂ ಕೂಡ ಅಸಮಾಧಾನಗೊಂಡಿದ್ದು, ತಮ್ಮ ಮುಂದಿನ ನಡೆ ಬಗ್ಗೆ ಯಾವುದೇ ರೀತಿಯ ಸುಳಿವನ್ನೂ ಕೂಡ ನೀಡಿಲ್ಲ. 

ಕೇಂದ್ರ ಸಚಿವರೊಂದಿಗೆ ಕಾಣಿಸಿಕೊಂಡ ರಾಜ್ಯ ಕಾಂಗ್ರೆಸ್ ಮುಖಂಡ

ಆದರೆ ಕಾಂಗ್ರೆಸ್ ಬಗ್ಗೆ ಅತ್ಯಂತ ಮೃದು ಮನಸ್ಥಿತಿ ಹೊಂದಿದ್ದು, ಮಹಾಘಟ ಬಂಧನ್ ಸೇರುವ ಲಕ್ಷಣಗಳು ಕಂಡು ಬಂದಿವೆ. 

ಅಲ್ಲದೇ ಇದೇ ವೇಳೆ ಸಿಂಗ್ ರಾಹುಲ್ ಗಾಂಧಿ ಅವರನ್ನು ಹೊಗಳಿದ್ದು, ದಿನದಿಂದ ದಿನಕ್ಕೆ ರಾಹುಲ್ ಪ್ರಸಿದ್ಧಿ ಹೆಚ್ಚುತ್ತಲೇ ಇದೆ ಎಂದಿದ್ದಾರೆ. ಅಲ್ಲದೇ ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣ ಎಂಬ ಹೇಳಿಕೆಯನ್ನೂ ಕೂಡ ತಾವು ಒಪ್ಪುವುದಿಲ್ಲ ಎಂದಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
ಅನುದಾನ ಬೇಕಾದ್ರೆ ನಾಟಿ ಕೋಳಿ ಅಡುಗೆ ಮಾಡಬೇಕಾ? ರಾಜ್ಯ ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆ