ಪರಿಹಾರ ಬಿಡುಗಡೆ ವಿಳಂಬಕ್ಕೆ ಸಚಿವ ಈಶ್ವರ ಖಂಡ್ರೆ ನಿರ್ಲಕ್ಷವೇ ಕಾರಣ: ಭಗವಂತ ಖೂಬಾ

Published : Feb 05, 2024, 11:03 PM IST
ಪರಿಹಾರ ಬಿಡುಗಡೆ ವಿಳಂಬಕ್ಕೆ ಸಚಿವ ಈಶ್ವರ ಖಂಡ್ರೆ ನಿರ್ಲಕ್ಷವೇ ಕಾರಣ: ಭಗವಂತ ಖೂಬಾ

ಸಾರಾಂಶ

ಫಸಲ್‌ ಭೀಮಾ ಯೋಜನೆಯ ಪರಿಹಾರ ಬಿಡುಗಡೆಯಲ್ಲಿ ರಾಜ್ಯದ ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷತನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅನಗತ್ಯ ಹಸ್ತಕ್ಷೇಪ ಕಾರಣ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಭರವಸೆ ವ್ಯಕ್ತಪಡಿಸಿದರು. 

ಬೀದರ್‌ (ಫೆ.05): ಫಸಲ್‌ ಭೀಮಾ ಯೋಜನೆಯ ಪರಿಹಾರ ಬಿಡುಗಡೆಯಲ್ಲಿ ರಾಜ್ಯದ ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷತನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅನಗತ್ಯ ಹಸ್ತಕ್ಷೇಪ ಕಾರಣ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಭರವಸೆ ವ್ಯಕ್ತಪಡಿಸಿದರು. ಅವರು ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಫಸಲ್‌ ಭೀಮಾ ಯೋಜನೆಯ ಪರಿಹಾರ ಧನ ಕುರಿತಾದ ರಾಜ್ಯ ಸರ್ಕಾರದ ಅಧಿಕಾರಿಗಳು ಭೀಮಾ ಅಧಿಕಾರಿಗಳಿಗೆ ಅಂತಿಮ ವರದಿ ಸಲ್ಲಿಸಬೇಕು.

ಅದು ಆಗಿಲ್ಲ ಅಷ್ಟೇ ಅಲ್ಲ ಅಧಿಕಾರಿಗಳು ಭೀಮಾ ಯೋಜನೆಯತ್ತ ನಿರ್ಲಕ್ಷವಹಿಸುತ್ತಿರುವದು ರೈತರಿಗೆ ಭೀಮಾ ಪರಿಹಾರ ಸಿಗುವಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರವೇ ಭೀಮಾ ಕಂಪನಿಗಳ ನೇಮಕಾತಿಯ ಅಧಿಕಾರ ಹೊಂದಿದ್ದು, ಅವುಗಳ ಮೇಲೆ ಹಿಡಿತಹೊಂದಿದೆ. ಅದನ್ನು ಬಿಗಿಗೊಳಿಸಿ ರೈತರಿಗೆ ಪರಿಹಾರ ವಿತರಣೆಗೆ ರಾಜ್ಯ ಸರ್ಕಾರ ಕ್ರಮಕೈಗೊಳ್ಳಬೇಕು, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮುತುವರ್ಜಿ ವಹಿಸಬೇಕು ಎಂದು ಹೇಳಿದರು.

ಬಿಜೆಪಿಯಿಂದ ಧರ್ಮದ ಹೆಸರಿನಲ್ಲಿ ಜನರ ಮಧ್ಯೆ ವಿಷಬೀಜ ಬಿತ್ತುವ ರಾಜಕಾರಣ: ಸಚಿವ ಮಹದೇವಪ್ಪ

ಭೀಮಾ ಕುರಿತಾಗಿ ಸತತ ಅಪಪ್ರಚಾರವೇ ಮೂಲ ಕಾರಣ: ಸಚಿವ ಖಂಡ್ರೆ ಅವರು ಮೊದಲಿನಿಂದಲೂ ಈ ಯೋಜನೆ ಬಗ್ಗೆ ಅಪಪ್ರಚಾರ ಮಾಡಿದ್ದಾರೆ. ಅವರಿಗೆ ಹೊಟ್ಟೆ ಕಿಚ್ಚು. ರಾಜ್ಯದಲ್ಲಿ ಬರಗಾಲ ಘೋಷಿಸಿ 5 ತಿಂಗಳಾಯಿತು ರೈತರಿಗೆ ನಯಾ ಪೈಸೆ ಬಂದಿಲ್ಲ ಇದರ ಸಂಪೂರ್ಣ ಜವಾಬ್ದಾರಿ ರಾಜ್ಯ ಸರ್ಕಾರದದ್ದಾಗಿದೆ ವಿನಹ ಕೇಂದ್ರ ಸರ್ಕಾರದ್ದು ಅಲ್ಲ ಎಂದು ಸ್ಪಷ್ಟಪಡಿಸಿದರು.

ಗೊಂದಲ ಬಗೆಹರಿದಿದೆ, ನಾನು 2ಲಕ್ಷ ಮತಗಳಿಂದ ಗೆಲ್ತೇನೆ: ಜಿಲ್ಲೆಯ ಕೆಲ ಶಾಸಕರು ಹಾಗೂ ನನ್ನ ಮಧ್ಯದ ಭಿನ್ನಾಭಿಪ್ರಾಯ, ಗೊಂದಲವನ್ನು ಪಕ್ಷದ ಪ್ರಮುಖರು ಬಹುತೇಕ ಬಗೆಹರಿಸಿದ್ದು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎಲ್ಲರ ಸಹಕಾರದಿಂದ ಸುಮಾರು 2 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲವು ಸಾಧಿಸುತ್ತೇನೆ ಎಂದು ವ್ಯಕ್ತಪಡಿಸಿದರು.

ಬಿಜೆಪಿ ಶಿಸ್ತು ಬದ್ಧ ಪಕ್ಷ. ಏನೇ ಸಮಸ್ಯೆಗಳಿದ್ದರೂ ಬಗೆಹರಿಯುತ್ತವೆ. ನೂತನ ಜಿಲ್ಲಾಧ್ಯಕ್ಷರು ಅನುಭವಸ್ಥರು ಯಾರ ಮುಲಾಜಿಲ್ಲದೆ ಮಾತನಾಡುವವರಿದ್ದಾರೆ. ಹೀಗಾಗಿ ಎಲ್ಲವು ಪಕ್ಷದ ರಾಜ್ಯಾಧ್ಯಕ್ಷರ ಸಮ್ಮುಖದಲ್ಲಿಯೇ ಎಲ್ಲ ಸಮಸ್ಯೆಗಳು ಬಗೆಹರಿದಿದ್ದು ಸಂಧಾನವಾಗಿದೆ ಎಂದರು. ಕಾಂಗ್ರೆಸ್‌ ಪಕ್ಷ ಕಳೆದ 50 ವರ್ಷಗಳಿಂದ ಬಡವರಿಗೆ ಆಸೆ ಆಮೀಷವೊಡ್ಡಿ ಮತಗಳನ್ನು ಪಡೆದಿದ್ದಾರೆ ಈಗ ಜನರ ಒಲವು ಕಡಿಮೆಯಾದ ಮೇಲೆ ಜನರಲ್ಲಿ ಭಯ ಹುಟ್ಟಿಸಿ ಮತ್ತೆ ಮೋದಿ ಪ್ರಧಾನಿಯಾದರೆ ದೇಶದಲ್ಲಿ ಚುನಾವಣೆ ನಡೆಯಲ್ಲ ಎಂಬ ಮಾತುಗಳನ್ನಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ಪಕ್ಷದ ಡಿ.ಕೆ ಸುರೇಶ ಸಂವಿಧಾನದ ಉಲ್ಲಂಘನೆ ಮಾಡಿದ್ದಾರೆ. ಕಾಂಗ್ರೆಸ್‌ನವರಿಗೆ ಸಂವಿದಾನದ ಮೇಲೆ ವಿಶ್ವಾಸ ಇಲ್ಲ ಹೀಗಾಗಿ ದೇಶ ಒಡೆಯುವಂತಹ ಮಾತುಗಳನ್ನಾಡುತ್ತಿದ್ದಾರೆ, ಈಗಾಗಲೇ ಅವರ ವಿರುದ್ದ ಮಂಗಳೂರು ಸೇರಿದಂತೆ ಇನ್ನಿತರ ಕಡೆಗಳಲ್ಲಿ ಪ್ರಕರಣ ದಾಖಲಾಗಿವೆ ಲೋಕಸಭೆಯಲ್ಲಿಯೂ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ ಎಂದರು. ಕಾಂಗ್ರೆಸ್‌ನ ಇಂಡಿಯಾ ಭಾಗವಾದ ಮಮತಾ ಬ್ಯಾನರ್ಜಿ ಖುದ್ದು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ 40 ಸ್ಥಾನ ಗೆಲ್ಲುವುದು ಕಷ್ಟ ಎಂದು ಹೇಳಿದ್ದಾರೆ. ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ಕೂಡ ತಮ್ಮ ಇತಿಮಿತಿ ಕಳೆದುಕೊಂಡು ಮಾತಾಡುತ್ತಿದ್ದಾರೆ ಎಂದು ಸಚಿವ ಖೂಬಾ ವ್ಯಂಗ್ಯವಾಡಿದರು.

ರಾಜ್ಯಗಳ ಶಕ್ತಿ ಕುಂದಿಸುವ ಯತ್ನ ಕೇಂದ್ರ ಸರ್ಕಾರದಿಂದ ಆಗುತ್ತಿದೆ: ಸಚಿವ ಕೃಷ್ಣ ಭೈರೇಗೌಡ ಕಿಡಿ

ಟಿಕೆಟ್‌ ಫಿಕ್ಸ್‌ ಇಲ್ಲ, ಪ್ರತಿ ಕಾರ್ಯಕರ್ತ ಆಕಾಂಕ್ಷಿ ಆಗಬಹುದು: ಪಕ್ಷದ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್‌ ಹುಡಗಿ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿ, ಲೋಕಸಭಾ ಚುನಾವಣೆಗೆ ಟಿಕೆಟ್‌ ನೀಡುವದು ಬಿಡುವದು ಹೈಕಮಾಂಡ್ ನಿರ್ಧರಿಸುತ್ತದೆ. ಅಷ್ಟಕ್ಕೂ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನೂ ಟಿಕೆಟ್‌ ಕೇಳುವ ಅಧಿಕಾರ ಹೊಂದಿದ್ದು ಇದಿಲ್ಲ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ತೋರಿಸುತ್ತದೆ ಎಂದು ಹೇಳುವ ಮೂಲಕ ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೇ ಈ ಬಾರಿಯ ಟಿಕೆಟ್‌ ಎಂಬ ವಾದವನ್ನು ಪರೋಕ್ಷವಾಗಿ ತಳ್ಳಿಹಾಕಿದಂತಾಯಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌
ದಲಿತ ಸಮುದಾಯಕ್ಕೆ ಸಿಎಂ ಹುದ್ದೆ ಕೊಡಿ ಎಂದು ಸಮಯ ಬಂದಾಗ ಕೇಳುವೆ: ಸಚಿವ ಮಹದೇವಪ್ಪ