
ಜೈಪುರ (ಜೂ.28): ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವ ಭಗೀರಥ್ ಚೌಧರಿ ರಾಜಸ್ಥಾನದಲ್ಲಿರುವ ತಮ್ಮ ಜಮೀನಿನ ಸೌತೆಕಾಯಿ ಬೆಳೆಗಾಗಿ ತಮ್ಮದೇ ಸಚಿವಾಲಯದಿಂದ 99.60 ಲಕ್ಷ ರು. ಸಹಾಯಧನ ಪಡೆದ ವಿಷಯ ಬೆಳಕಿಗೆ ಬಂದಿದೆ. ವಿಶೇಷವೆಂದರೆ, ಈ ಸಬ್ಸಿಡಿಗೆ ಅನುಮೋದನೆ ನೀಡಿರುವ ರಾಷ್ಟ್ರೀಯ ತೋಟಗಾರಿಕಾ ಮಂಡಳಿಯ (ಎನ್ಎಚ್ಬಿ) ಉಪಾಧ್ಯಕ್ಷರೂ ಚೌಧರಿ ಅವರೇ ಆಗಿದ್ದಾರೆ.
ರಾಜಸ್ಥಾನದ ದೀದ್ವಾನಾ-ಕುಚಾಮನ್ ಜಿಲ್ಲೆಯ ಪೀಹ್ ಗ್ರಾಮದಲ್ಲಿ ಚೌಧರಿ 4 ದೊಡ್ಡ ಪಾಲಿಹೌಸ್ಗಳಿರುವ 16,592 ಚದರ ಮೀ. ವಿಸ್ತೀರ್ಣದ ಜಮೀನು ಹೊಂದಿದ್ದಾರೆ. ಇಲ್ಲಿ ನಾಮಫಲಕವೊಂದನ್ನು ಅಳವಡಿಸಲಾಗಿದೆ. ಅದರಲ್ಲಿ ‘ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ರಾಷ್ಟ್ರೀಯ ತೋಟಗಾರಿಕಾ ಮಂಡಳಿಯಿಂದ 99,60,000 ರು. ಸಬ್ಸಿಡಿ ಮೊತ್ತ ಪಡೆದಿದೆ’ ಎಂದು ಬರೆಯಲಾಗಿದೆ. ಅನುಮೋದನೆ ಪಡೆದ ಕೇವಲ 467 ಮಂದಿ ಫಲಾನುಭವಿಗಳಲ್ಲಿ ಚೌಧರಿ ಕೂಡ ಒಬ್ಬರಾಗಿದ್ದಾರೆ.
ಆದರೆ ವಿಚಾರಗಳು ವರದಿಯಾಗುತ್ತಿದ್ದಂತೆ ಎಎನ್ಐಗೆ ಪ್ರತಿಕ್ರಿಯಿಸಿರುವ ಸಚಿವರು. ನಾನು ಏನು ಮರೆಮಾಚಿಲ್ಲ. ದೇಶದ ಸಾವಿರಾರು ರೈತರಂತೆ ನಾನೂ ಸಬ್ಸಿಡಿ ಪಡೆದಿದ್ದೇನೆ. ಇದರಲ್ಲಿ ಏನನ್ನೂ ಮುಚ್ಚಿಟ್ಟಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಾನು ಕೇಂದ್ರ ಸಚಿವನಾಗಿರಬಹುದು. ಆದರೆ ಮೂಲತಃ ನಾನೊಬ್ಬ ರೈತ. ನನ್ನ ಬಾಲ್ಯದ ದಿನಗಳಿಂದಲೂ ಕೃಷಿಯಲ್ಲಿದ್ದೇನೆ.. ನಾನು ಏನನ್ನೂ ಮರೆಮಾಡಿಲ್ಲ. ಸಾವಿರಾರು ರೈತರು ಪಾಲಿಹೌಸ್ಗಳನ್ನು ಬಳಸುತ್ತಾರೆ ಮತ್ತು ಸಬ್ಸಿಡಿಗಳನ್ನು ಪಡೆಯುತ್ತಾರೆ. ಹಾಗಾಗಿ, ನಾನು ಕೂಡ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.
#WATCH | Ajmer, Rajasthan: On a media report that his own ministry gave him Rs 99-lakh subsidy, under a scheme, for his cucumber farm, MoS Agriculture Bhagirath Choudhary says, "I am a farmer and have been in agriculture since my childhood days...I have not hidden anything.… pic.twitter.com/c8dk0f3D7h
— ANI (@ANI) June 27, 2026
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.