ದೇಶಕ್ಕೆಲ್ಲ ಉಪದೇಶ ಮಾಡೋ ಖರ್ಗೆ ಮಗನಿಗೆ ಕೆಐಎಡಿಬಿ ಜಾಗವೇ ಬೇಕಿತ್ತಾ? ಕೇಂದ್ರ ಸಚಿವ ಹೆಚ್‌ಡಿಕೆ ವಾಗ್ದಾಳಿ

Published : Aug 29, 2024, 09:21 AM IST
ದೇಶಕ್ಕೆಲ್ಲ ಉಪದೇಶ ಮಾಡೋ ಖರ್ಗೆ ಮಗನಿಗೆ ಕೆಐಎಡಿಬಿ ಜಾಗವೇ ಬೇಕಿತ್ತಾ? ಕೇಂದ್ರ ಸಚಿವ ಹೆಚ್‌ಡಿಕೆ ವಾಗ್ದಾಳಿ

ಸಾರಾಂಶ

ಖರ್ಗೆ ದೇಶಕ್ಕೆಲ್ಲಾ ಬುದ್ಧಿ ಹೇಳುತ್ತಾರೆ. ಆ ರೀತಿ ಉಪದೇಶ ಮಾಡುವವರಿಗೆ ಕೆಐಎಡಿಬಿ ಜಾಗವೇ ಬೇಕಿತ್ತಾ? ದುಡ್ಡು ಕೊಟ್ಟು ಖಾಸಗಿ ಜಮೀನು ಖರೀದಿಸಬಹುದಾಗಿತ್ತು. ಇದು ಅಧಿಕಾರ ದುರುಪಯೋಗವಲ್ಲದೆ ಮತ್ತೇನು? ದೇಶಕ್ಕೆ ಉತ್ತರ ಹೇಳುವವರು ಇದಕ್ಕೆ ಉತ್ತರ ನೀಡಬೇಕು ಎಂದು ಸಂಸದ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಖಾರವಾಗಿ ಹೇಳಿದರು.

ಮಂಡ್ಯ (ಆ.29): ಖರ್ಗೆ ದೇಶಕ್ಕೆಲ್ಲಾ ಬುದ್ಧಿ ಹೇಳುತ್ತಾರೆ. ಆ ರೀತಿ ಉಪದೇಶ ಮಾಡುವವರಿಗೆ ಕೆಐಎಡಿಬಿ ಜಾಗವೇ ಬೇಕಿತ್ತಾ? ದುಡ್ಡು ಕೊಟ್ಟು ಖಾಸಗಿ ಜಮೀನು ಖರೀದಿಸಬಹುದಾಗಿತ್ತು. ಇದು ಅಧಿಕಾರ ದುರುಪಯೋಗವಲ್ಲದೆ ಮತ್ತೇನು? ದೇಶಕ್ಕೆ ಉತ್ತರ ಹೇಳುವವರು ಇದಕ್ಕೆ ಉತ್ತರ ನೀಡಬೇಕು ಎಂದು ಸಂಸದ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಖಾರವಾಗಿ ಹೇಳಿದರು.

ಖರ್ಗೆ ಪುತ್ರನಿಗೆ ಜಮೀನು ನೀಡಿರುವ ವಿಚಾರ:

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹೀಗೆ ಯಾರೋ ಒಬ್ಬರಿಗಲ್ಲ. ಹಲವಾರು ಜನರಿಗೆ ಕೊಟ್ಟಿದ್ದಾರೆ, ಬೇಕಾದಷ್ಟು ಇಂತಹ ಪ್ರಕರಣಗಳು ನಡೆದಿವೆ. ಇದೆಲ್ಲಾ ಅಕ್ರಮ ಎನ್ನುವುದು ಸರ್ಕಾರಕ್ಕೆ ಗೊತ್ತಾಗುವುದಿಲ್ಲವೇ ಎಂದು ಟೀಕಿಸಿದರು.

ಕಾಂಗ್ರೆಸ್‌ನವರು ರಾಜಭವನ ಚಲೋ ನಡೆಸುವ ಬಗ್ಗೆ ಕೇಳಿದಾಗ, ಬಹಳ ಸಂತೋಷ, ರಾಜಭವನದ ಜೊತೆಗೆ ರಾಷ್ಟ್ರಪತಿ ಭವನ ಚಲೋ ಕೂಡ ಮಾಡಲಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮನೆಗೂ ಹೋಗಲಿ. ಸತ್ತಿರುವ ವಿಚಾರ ಇಟ್ಟುಕೊಂಡು ನನ್ನ ಬಗ್ಗೆ ಮಾತನಾಡುತ್ತಿದ್ದಾರೆ. ಮಹಾನ್ ಅಪರಾಧ ಮಾಡಿದ್ದೇನೆ ಎನ್ನುತ್ತಿದ್ದಾರೆ. ನಾನೇ ಕೈ ಜೋಡಿಸಿ ಮನವಿ ಮಾಡುತ್ತೇನೆ. ಎಲ್ಲ ಅನುಮತಿ ಪಡೆದು ತನಿಖೆ ಮಾಡಲಿ ಎಂದು ಸವಾಲು ಹಾಕಿದರು.

ದಲಿತರಿಗೆ ಸಿಗಬೇಕಾದ ಭೂಮಿ ಕಿತ್ತುಕೊಂಡು, ಅಭಿವೃದ್ಧಿ ಬಗ್ಗೆ ಮಾತಾಡ್ತಾರೆ: ಖರ್ಗೆ ವಿರುದ್ಧ ಪಿ ರಾಜೀವ್ ಕಿಡಿ

ಕುಮಾರಸ್ವಾಮಿ(HD Kumaraswamy) ಕುರಿತಂತೆ ಡಿ.ಕೆ.ಶಿವಕುಮಾರ್(DK Shivakumar) ಆಡಿರುವ ಮಾತುಗಳ ಬಗ್ಗೆ ಪ್ರಶ್ನಿಸಿದಾಗ, ಚರ್ಚೆ ಮಾಡಲು ಬಹಳ ವಿಚಾರಗಳು ಇವೆ. ಪಾಪ ನಮ್ಮನ್ನ ಕೆಣಕಿದ್ದಾರೆ. ನಿನ್ನೆ ಅಸಲಿ- ನಕಲಿ ಎಂದೆಲ್ಲಾ ಹೇಳಿದ್ದಾರೆ. ಅಧಿಕಾರ ದುರುಪಯೋಗಪಡಿಸಿಕೊಂಡು ಸತ್ತವರ ಹೆಸರಲ್ಲಿ ಭೂಮಿ ಖರೀದಿ ಮಾಡಿದ್ದಾರೆ. ಡಿನೋಟಿಫಿಷನ್ ಮಾಡಿಕೊಂಡು ಜೀವನ ಮಾಡುವವರು ಇವರು, ಕುಮಾರಸ್ವಾಮಿ ಬಗ್ಗೆ ಮಾತನಾಡುವ ನೈತಿಕತೆ ಇದೆಯಾ ಎಂದು ಕಿಡಿಕಾರಿದರು.

ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿರುವ ಸ್ನೇಹಮಯಿ ಕೃಷ್ಣ ಒಬ್ಬ ರೌಡಿಶೀಟರ್: ಎಂ ಲಕ್ಷ್ಮಣ್

ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ(Nikhil kumaraswamy), ಮನ್‌ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರ, ಉಪಾಧ್ಯಕ್ಷ ಎಂ.ಎಸ್.ರಘುನಂದನ್, ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ, ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ಬೇಲೂರು ಶಶಿಧರ್ ಇತರರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್