ಸಿಡಿ ಬ್ರದರ್ಸ್‌ಗಳಿಗೆ ಸಿಡಿ, ವಿಡಿಯೋ, ಆಡಿಯೋ ಮಾಡೋದೆ ಕೆಲಸ: ಕುಮಾರಸ್ವಾಮಿ ವಾಗ್ದಾಳಿ

Published : Nov 07, 2024, 12:16 PM IST
ಸಿಡಿ ಬ್ರದರ್ಸ್‌ಗಳಿಗೆ ಸಿಡಿ, ವಿಡಿಯೋ, ಆಡಿಯೋ ಮಾಡೋದೆ ಕೆಲಸ: ಕುಮಾರಸ್ವಾಮಿ ವಾಗ್ದಾಳಿ

ಸಾರಾಂಶ

ಸಿಡಿ ಆಡಿಯೋ, ವಿಡಿಯೋ ಬಿಡುವುದಲ್ಲಿ ಡಿಕೆ ಸಹೋದರರು ನಿಪುಣರು. ಅವರು ಇಂಥ ದಂಧೆಗಳನ್ನೇ ಮಾಡಿಕೊಂಡು ಬರುತ್ತಿದ್ದಾರೆ. ಇಷ್ಟಕ್ಕೂ ಆ ಆಡಿಯೋ ಹಳೆಯದು. ನಾನು ವಿಧಾನಸಭೆಯಲ್ಲಿ ಮಾತನಾಡಿದ್ದು. ಒಂದು ವಾರದಿಂದ ಅದನ್ನು ಕತ್ತರಿಸಿ ಹಂಚುತ್ತಿದ್ದಾರೆ. ವಾಸ್ತವ ಪರಿಸ್ಥಿತಿ ಬಗ್ಗೆ ಮಾತನಾಡಿದ್ದೆ. ಪಕ್ಕದ ಮದ್ದೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಚಾರವಾಗಿ ಹೇಳಿದ್ದ ಆಡಿಯೋ ಅದು: ಕೇಂದ್ರ ಸಚಿವ ಕುಮಾರಸ್ವಾಮಿ

ಚನ್ನಪಟ್ಟಣ(ನ.07): ಸಿಡಿ ಬ್ರದರ್ಸ್‌ಗಳಿಗೆ ಸಿಡಿ, ವಿಡಿಯೋ, ಆಡಿಯೋ ಮಾಡುವುದೇ ಕೆಲಸ. ಹಾಸನದಲ್ಲಿ ಇಂಥದ್ದೇ ಷಡ್ಯಂತ್ರ ಮಾಡಿದರು. ಚನ್ನಪಟ್ಟಣದಲ್ಲಿಯೂ ಅದನ್ನೇ ಮಾಡುತ್ತಿದ್ದಾರೆ ಎಂದು ಡಿಕೆ ಸಹೋದರರ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. 

ಚುನಾವಣಾ ಪ್ರಚಾರದ ನಡುವೆ ಚನ್ನಪಟ್ಟಣದ ಸೋಗಾಲಪಾಳ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ವಿಧಾನಸೌಧದಲ್ಲಿ ಮಾತಾಡಿರುವ ಆಡಿಯೋವನ್ನು ಅವರು ಎಲ್ಲಾ ಸಭೆಗಳಲ್ಲಿ ಕೇಳಿಸುತ್ತಿದ್ದಾರೆ. ಅವರಿಗೆ ಎಷ್ಟು ಹತಾಶೆ, ಸೋಲಿನ ಭೀತಿ ಕಾಡುತ್ತಿದೆ ಎನ್ನುವುದಕ್ಕೆ ಇದೇ ಸಾಕ್ಷಿ. ಕೇವಲ ಒಂದು ತುಣುಕು ಕತ್ತರಿಸಿ ಬಿಡುವುದಲ್ಲ, ಪೂರ್ಣ ಆಡಿಯೋ ಬಿಡಲಿ, ಆಗ ಅವರ ಮರ್ಯಾದೆ ಏನು ಎನ್ನುವುದು ಗೊತ್ತಾಗುತ್ತದೆ ಎಂದು ಕಿಡಿಕಾರಿದರು. 

ಅಧಿಕಾರದ ತೆವಲಿಗಾಗಿ ಕುಮಾರಸ್ವಾಮಿಯಿಂದ ಕ್ಷೇತ್ರ ಬದಲಾವಣೆ: ಸಚಿವ ಚಲುವರಾಯಸ್ವಾಮಿ

ಸಿಡಿ ಆಡಿಯೋ, ವಿಡಿಯೋ ಬಿಡುವುದಲ್ಲಿ ಡಿಕೆ ಸಹೋದರರು ನಿಪುಣರು. ಅವರು ಇಂಥ ದಂಧೆಗಳನ್ನೇ ಮಾಡಿಕೊಂಡು ಬರುತ್ತಿದ್ದಾರೆ. ಇಷ್ಟಕ್ಕೂ ಆ ಆಡಿಯೋ ಹಳೆಯದು. ನಾನು ವಿಧಾನಸಭೆಯಲ್ಲಿ ಮಾತನಾಡಿದ್ದು. ಒಂದು ವಾರದಿಂದ ಅದನ್ನು ಕತ್ತರಿಸಿ ಹಂಚುತ್ತಿದ್ದಾರೆ. ವಾಸ್ತವ ಪರಿಸ್ಥಿತಿ ಬಗ್ಗೆ ಮಾತನಾಡಿದ್ದೆ. ಪಕ್ಕದ ಮದ್ದೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಚಾರವಾಗಿ ಹೇಳಿದ್ದ ಆಡಿಯೋ ಅದು. ಇಸ್ಪೀಟ್, ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುವವರು ಐದು ವರ್ಷ ಅವರು ಕೆಲಸ ಮಾಡಲಿ. ನಾನು ಎರಡು ದಿನದಲ್ಲಿ ಬದಲಾವಣೆ ಮಾಡುತ್ತೇನೆ ಎಂದು ನಾನು ಹೇಳಿದ್ದೆ. ಅದನ್ನೇ ಇವರು ಚನ್ನಪಟ್ಟಣಕ್ಕೆ ತಂದು ಕೇಳಿಸುತ್ತಿದ್ದಾರೆ. ಆ ಆಡಿಯೋವನ್ನು ಪೂರ್ತಿ ಹಾಕಿ ಕೇಳಿಸಿದರೆ ಇವರ ಬಂಡವಾಳ, ಯೋಗ್ಯತೆ ಗೊತ್ತಾಗುತ್ತದೆ ಎಂದು ತಿರುಗೇಟು ನೀಡಿದರು. 

ಹಾಸನದಲ್ಲೂ ಇದಕ್ಕಿಂತ ಕೆಟ್ಟದಾಗಿ ಮಾಡಿದರು. ನನ್ನ ಮೇಲೆ ಹೇಳಲು ಇವರಿಗೆ ಏನೂ ಇಲ್ಲವಲ್ಲ, ಅದಕ್ಕಾಗಿ ಇಂಥ ಕೆಟ್ಟ ಚೇಷ್ಟೆ ಮಾಡುತ್ತಿದ್ದಾರೆ. ಯೋಗೇಶ್ವರ ಅವರ ಸಂಸ್ಕೃತಿ ಏನು ಎಂಬುದು ಎಲ್ಲರಿಗೂ ಗೊತ್ತಿದೆ. ಇವರೆಲ್ಲಾ ಸಿಡಿ ಪ್ರೈಯರ್ಸ್. ಆ ಸಂತತಿಯಲ್ಲಿ ಬಂದವರು. ಇದಕ್ಕೆಲ್ಲಾ ನಮ್ಮ ಜನ ಬೆಲೆ ಕೊಡುತ್ತಾರಾ? ನಾನು ಅಭಿವೃದ್ಧಿ ವಿಚಾರ ಇಟ್ಟುಕೊಂಡು ಹೊರಟಿದ್ದೇನೆ. ಅವರು ಏನೇ ಮಾತನಾಡಿದರೂ ಚನ್ನಪಟ್ಟಣದ ಜನ ನವೆಂಬರ್13ಕ್ಕೆ ಉತ್ತರ ಕೊಡುತ್ತಾರೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ