
ಚನ್ನಪಟ್ಟಣ(ನ.12): ರಾಜಕೀಯದಲ್ಲಿ ನನಗೆ ಹೆಸರು ಬರಲು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪಾತ್ರವೂ ಇದೆ ಎಂದು ಮಾಜಿ ಸಿಎಂ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಸೋಮವಾರ ಪಟ್ಟಣದಲ್ಲಿ ಎನ್ಡಿಎ ಅಭ್ಯರ್ಥಿ ನಿಖಿಲ್ ಪರ ಪ್ರಚಾರದ ವೇಳೆ ಮಾತನಾಡಿದ ಅವರು (2005-06) ಯಡಿಯೂರಪ್ಪ ಅವರಿಗೆ ಅಧಿಕಾರ ಹಸ್ತಾಂತರ ಮಾಡಲು ನಾನು ಪ್ರಾಮಾಣಿಕವಾಗಿ ತೀರ್ಮಾನ ಮಾಡಿದ್ದೆ. ಅಧಿಕಾರ ನೀಡಿದ್ದರೆ ಅಂದೇ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ವನಾಶ ಆಗುತ್ತಿತು. ಆದರೆ, ವಿಧಿ ಆಟದ ಮುಂದೆ ನಮ್ಮದೇನು ನಡೆಯಲಿಲ್ಲ. ಆದರೆ, ಕೆಲವರು ಮಾಡಿದ ಕೃತ್ಯದಿಂದ ನಾನು 14 ವರ್ಷಗಳ ಕಾಲ ವನವಾಸ ಅನುಭವಿಸಿದೆ ಎಂದು ಭಾವುಕರಾದರು.
ಬೊಂಬೆನಾಡಲ್ಲಿ ಸೂತ್ರದಾರರ ಪ್ರತಿಷ್ಠೆ ಪಣಕ್ಕೆ: ಇಬ್ಬರೂ ಅಭ್ಯರ್ಥಿಗಳಿಗೆ ಸಿನಿಮಾ ನಂಟು
ಮತ್ತೆ ಬಿಜೆಪಿ-ದಳ ಸರ್ಕಾರ:
ರಾಜ್ಯದಲ್ಲಿ ಮುಂದೆ ಬಿಜೆಪಿ- ಜೆಡಿಎಸ್ ಒಟ್ಟಾಗಿ ಮತ್ತೊಮ್ಮೆ ಸರ್ಕಾರ ರಚನೆ ಮಾಡುತ್ತೇವೆ. ನಮ್ಮ ಮೈತ್ರಿ ಹಾಲು ಜೇನಿನಂತೆ ಬೆರೆತು ಹೋಗಿದ್ದು, ಅದನ್ನು ಸಹಿಸಲು ಕಾಂಗ್ರೆಸ್ಗೆ ಆಗುತ್ತಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.