ರಾಜ್ಯ ಸರ್ಕಾರ ದಿವಾಳಿಯಾಗಿದ್ದು, 2000 ಕೊಟ್ಟು 4000 ಕಿತ್ಕೊತಿದ್ದಾರೆ: ಪ್ರಹ್ಲಾದ್ ಜೋಶಿ ಕಿಡಿ

Published : Jun 16, 2024, 01:49 PM IST
ರಾಜ್ಯ ಸರ್ಕಾರ ದಿವಾಳಿಯಾಗಿದ್ದು, 2000 ಕೊಟ್ಟು 4000 ಕಿತ್ಕೊತಿದ್ದಾರೆ: ಪ್ರಹ್ಲಾದ್ ಜೋಶಿ ಕಿಡಿ

ಸಾರಾಂಶ

ರಾಜ್ಯ ಸರ್ಕಾರ ದಿವಾಳಿಯಾಗಿದೆ. ಕಾಂಗ್ರೆಸ್ ಪಕ್ಷ ಬೆಲೆ ಏರಿಕೆ ಎಂದು ಟ್ವೀಟ್ ಮಾಡತ್ತೆ. ಬೆಲೆ ಏರಿಕೆ ವಿಚಾರ ಇಟ್ಕೊಂಡು ಇವರು ರಾಜಕಾರಣ ಮಾಡಿದ್ರು. ಇವತ್ತು 3 ರೂಪಾಯಿ ಹೆಚ್ಚು ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ 

ಹುಬ್ಬಳ್ಳಿ(ಜೂ.16):  ರಾಜ್ಯವನ್ನ ದಿವಾಳಿಯತ್ತ ನಿಲ್ಲಿಸೋದು ಖಚಿತ. ರಾಜ್ಯದಲ್ಲಿ ಬೆಲೆ ಏರಿಕೆ ಉಚಿತ, ಅಪರಾಧ, ಹಿಂದೂ ವಿರೋಧಿ ನೀತಿ ಖಚಿತ ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೇವಡಿ ಮಾಡಿದ್ದಾರೆ. 

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಇಂದು(ಭಾನುವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ರಾಜ್ಯ ಸರ್ಕಾರ ದಿವಾಳಿಯಾಗಿದೆ. ಕಾಂಗ್ರೆಸ್ ಪಕ್ಷ ಬೆಲೆ ಏರಿಕೆ ಎಂದು ಟ್ವೀಟ್ ಮಾಡತ್ತೆ. ಬೆಲೆ ಏರಿಕೆ ವಿಚಾರ ಇಟ್ಕೊಂಡು ಇವರು ರಾಜಕಾರಣ ಮಾಡಿದ್ರು. ಇವತ್ತು 3 ರೂಪಾಯಿ ಹೆಚ್ಚು ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಬಿಎಸ್‌ವೈ ವಿರುದ್ಧ ಸೇಡಿನ ರಾಜಕಾರಣ; ಸರ್ಕಾರ, ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ ಜೋಶಿ

ಟಕಾ.. ಟಕಾ.. ಅಂತಾ ಪ್ರಣಾಳಿಕೆ ಮಾಡಿದ್ರು, ಇದಕ್ಕೆ ಯಾವುದೇ ಪ್ಲಾನ್ ಇರಲಿಲ್ಲ. ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ದಿವಾಳಿಯಾಗಿದೆ.  ಹೀಗಾಗಿ ಜನರ ಮೇಲೆ ಬರೆ ಹಾಕಿದ್ದಾರೆ. ಟ್ರಾನ್ಸ್‌ಫೋರ್ಟ್ ಮೇಲೂ ಇದರ ಪರಿಣಾಮ‌ ಆಗತ್ತದೆ.  ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯನ್ನು ಸರ್ಕಾರ ತಕ್ಷಣ ಹಿಂಪಡೆಯಬೇಕು. ಒಂದು ಕೈಲಿ ಕೊಟ್ಟು ಮತ್ತೊಂದು ಕೈಲಿ ಕಿತ್ತುಕೊಳ್ಳೋ ಕೆಲಸ ಆಗ್ತಿದೆ‌. ಇನ್ಮೇಲೆ ಬಸ್ ದರವೂ ಹೆಚ್ಚಾಗತ್ತೆ. 2000 ಕೊಟ್ಟು 4000 ಕಿತ್ತುಕೊಂಡ ಹೋಗ್ತಾರೆ ಎಂದು ಕಿಡಿ ಕಾರಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕೇಂದ್ರದ ಒಪ್ಪಿಗೆ ಸಿಕ್ರೆ ಕೃಷ್ಣ ಮೇಲ್ದಂಡೆ 3ನೇ ಹಂತದ ಪೂರ್ಣಕ್ಕೆ ಬದ್ಧ: ಡಿ.ಕೆ.ಶಿವಕುಮಾರ್‌
ಗ್ರೇಟರ್‌ ಬೆಂಗಳೂರು.. ವೈಜ್ಞಾನಿಕವಾಗಿ ಕಸ ಸಂಸ್ಕರಣೆ, ಆತಂಕ ಬೇಡ: ಡಿ.ಕೆ.ಶಿವಕುಮಾರ್‌