
ಹುಬ್ಬಳ್ಳಿ(ಮಾ.18): ಪಾಕಿಸ್ತಾನದಿಂದ ಭಾರತಕ್ಕೆ ಬಂದಿರುವ ದುಡ್ಡು ಕಾಂಗ್ರೆಸ್ಗೆ ಬಂದಿರಬೇಕು. ಅದು ಬಿಜೆಪಿಗೆ ಬಂದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಾಂಗ್ರೆಸ್ ಆರೋಪದ ವಿರುದ್ಧ ಕಿಡಿ ಕಾರಿದರು.
ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಪಾಕಿಸ್ತಾನದಿಂದ ಬಿಜೆಪಿಗೆ ಹಣ ಬಂದಿದೆ ಎಂಬ ಆರೋಪಕ್ಕೆ ಕಿಡಿಕಿಡಿಯಾದರು. ಕಾಂಗ್ರೆಸಿಗೆ ಹಣ ಬಂದಿದೆ. ಬಿಜೆಪಿಗೆ ಇಂತಹ ಹಣದ ಅವಶ್ಯಕತೆ ಇಲ್ಲ ಎಂದರು.
ಧಾರವಾಡದಲ್ಲಿ ಯಾರಿಗೆ ಗೆಲುವಿನ ‘ಪೇಡಾ’? ಕೇಂದ್ರ ಸಚಿವ ಜೋಶಿ ವಿರುದ್ಧ ಯಾರಾಗ್ತಾರೆ ಕಾಂಗ್ರೆಸ್ ಕಲಿ?
ಈಗಾಗಲೇ ಚುನಾವಣೆ ದಿನಾಂಕ ನಿಗದಿಯಾಗಿದೆ. ಕ್ಯಾಲೆಂಡರ್ ಆಫ್ ದಿ ಇವೆಂಟ್ ಕೂಡ ಬಂದಿದೆ. ಈ ನಿಟ್ಟಿನಲ್ಲಿ ಚುನಾವಣೆಗೆ ನಾವು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು. ಎರಡು ಅವಧಿಯ ಮೋದಿ ನೇತೃತ್ವದ ಸರ್ಕಾರದ ನಿಯತ್ತನ್ನು ನೋಡಿ ಈ ಬಾರಿ ಆಶೀರ್ವಾದ ಮಾಡುತ್ತಾರೆ. ಈ ಬಾರಿ ಬಹುದೊಡ್ಡ ಗೆಲುವಿನೊಂದಿಗೆ ಮತ್ತೊಮ್ಮೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಸರ್ಕಾರದ ನಿಯತ್ತನ್ನು ಜನರು ನೋಡಿದ್ದಾರೆ. ಅವರೇ ಈ ಚುನಾವಣೆ ಮೂಲಕ ಉತ್ತರ ಕೊಡುತ್ತಾರೆ ಎಂದು ಅವರು ಹೇಳಿದರು.
ಮೋದಿ ಅವರ ವಿರುದ್ಧ ಸುಳ್ಳು ಸುಳ್ಳು ಮಾತನಾಡಿ ಆರೋಪ ಮಾಡಿದ್ದವರಿಗೆ ಈ ಬಾರಿ ಚುನಾವಣೆ ತಕ್ಕ ಉತ್ತರ ಕೊಡಲಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.