ಕಾಂಗ್ರೆಸ್ಸಿನದ್ದು ವಿಕೃತ ಮನಸ್ಥಿತಿ: ಪ್ರ ಧಾನಿ ಮೋದಿ ಬಗ್ಗೆ ಖರ್ಗೆ, ರಾಹುಲ್ ಹೇಳಿಕೆಗೆ ಕೇಂದ್ರ ಸಚಿವ ಜೋಶಿ ಗರಂ

Kannadaprabha News   | Kannada Prabha
Published : Apr 22, 2026, 09:18 AM IST
Union minister pralhad joshi slams kharge rahul gandhi at hubballi

ಸಾರಾಂಶ

ಪ್ರಧಾನಿ ಮೋದಿಯವರನ್ನು 'ಭಯೋತ್ಪಾದಕ' ಎಂದು ಕರೆದಿದ್ದಾರೆ ಎನ್ನಲಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಅಸಭ್ಯ ಹೇಳಿಕೆ ನೀಡಿದ್ದಾರೆನ್ನಲಾದ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರ ಈ ನಡವಳಿಕೆಯು ಅವರ ‘ವಿಕೃತ ಮನಸ್ಥಿತಿ ಎಂದು ಕಿಡಿ

ಹುಬ್ಬಳ್ಳಿ (ಏ.22): ತಮಿಳುನಾಡು ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಭಯೋತ್ಪಾದಕ’ ಎಂದು ಕರೆದಿರುವ ಹಾಗೂ ರಾಹುಲ್ ಗಾಂಧಿ ಅವರು ಅಸಭ್ಯ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ನಾಯಕರ ಇಂತಹ ನಡವಳಿಕೆಯು ಅವರ ‘ವಿಕೃತ ಮನಸ್ಥಿತಿ’ ಮತ್ತು ‘ಸೋಲಿನ ಹತಾಶೆ’ಯನ್ನು ಪ್ರತಿಬಿಂಬಿಸುತ್ತದೆ ಎಂದು ಗುಡುಗಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಖಂಡಿಸಿರುವ ಜೋಶಿ, ‘ನಕಲಿ ಗಾಂಧಿ ಕುಟುಂಬದ ಓಲೈಕೆಗಾಗಿ ದಶಕಗಳ ಕಾಲ ದುರಾಡಳಿತ ನಡೆಸಿದ ಮಲ್ಲಿಕಾರ್ಜುನ ಖರ್ಗೆಯವರು, ತಮ್ಮ ಸ್ವಕ್ಷೇತ್ರವನ್ನೇ ಅಭಿವೃದ್ಧಿಪಡಿಸದೆ ಜನರಿಗೆ ದ್ರೋಹ ಬಗೆದಿದ್ದಾರೆ. ಈಗ ದೇಶದ ಹೆಮ್ಮೆಯ ಪ್ರಧಾನಿಯನ್ನು ಭಯೋತ್ಪಾದಕ ಎಂದು ಕರೆಯುವ ಮೂಲಕ ತಮ್ಮ ಕೆಳಮಟ್ಟದ ರಾಜಕಾರಣವನ್ನು ಪ್ರದರ್ಶಿಸಿದ್ದಾರೆ’ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧವೂ ವಾಗ್ದಾಳಿ ನಡೆಸಿದ್ದು, ‘ಇದು ರಾಹುಲ್ ಗಾಂಧಿಯವರ ದುರಹಂಕಾರದ ಪರಮಾವಧಿ. ಸಾರ್ವಜನಿಕ ಬದುಕಿನಲ್ಲಿ ಘನತೆ ಮತ್ತು ಸಂಸ್ಕಾರ ಬಹುಮುಖ್ಯ. ಆದರೆ ರಾಹುಲ್ ಗಾಂಧಿಯವರ ಅಸಡ್ಡೆ ಹಾಗೂ ಅನಾಗರಿಕ ಮಾತುಗಳು ಅವರ ನೈಜತೆಯನ್ನು ಬಯಲು ಮಾಡಿದೆ’ ಎಂದು ಕುಟುಕಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಈಗ ಕಾಂಪ್ರಮೈಸ್ ರಾಜಕಾರಣ ಮಾಡುತ್ತಿದ್ದಾರೆ: ಸಿದ್ದರಾಮಯ್ಯರ ರಾಜಕೀಯದ ಅನಿವಾರ್ಯತೆ ಬಗ್ಗೆ ಜಾರಕಿಹೊಳಿ ಹೇಳಿದ್ದೇನು?
Karnataka News Live: ಕಾಂಗ್ರೆಸ್ಸಿನದ್ದು ವಿಕೃತ ಮನಸ್ಥಿತಿ - ಪ್ರ ಧಾನಿ ಮೋದಿ ಬಗ್ಗೆ ಖರ್ಗೆ, ರಾಹುಲ್ ಹೇಳಿಕೆಗೆ ಕೇಂದ್ರ ಸಚಿವ ಜೋಶಿ ಗರಂ