ರಾಮಮಂದಿರದ ಯಶಸ್ಸಿನ ಪಾಲು ಪಡೆಯಲು ಕಾಂಗ್ರೆಸ್‌ ಯತ್ನ: ಪ್ರಲ್ಹಾದ್‌ ಜೋಶಿ ಲೇವಡಿ

Published : Jan 12, 2024, 01:30 AM IST
ರಾಮಮಂದಿರದ ಯಶಸ್ಸಿನ ಪಾಲು ಪಡೆಯಲು ಕಾಂಗ್ರೆಸ್‌ ಯತ್ನ: ಪ್ರಲ್ಹಾದ್‌ ಜೋಶಿ ಲೇವಡಿ

ಸಾರಾಂಶ

ರಾಮನ ಅಸ್ತಿತ್ವವನ್ನು ಪ್ರಶ್ನಿಸಿದ್ದ, ಶ್ರೀರಾಮಜನ್ಮಭೂಮಿ ಕುರಿತು ಯಾವುದೇ ನಿರ್ಣಯ ಕೈಗೊಳ್ಳಬಾರದು ಎಂದು ನ್ಯಾಯಾಲಯದಲ್ಲಿ ದಾವೆ ಹೂಡಿದ್ದ ಕಾಂಗ್ರೆಸ್ಸಿನವರು ಇಂದು ರಾಮ ಮಂದಿರದ ಯಶಸ್ಸಿನ ಪಾಲು ಪಡೆಯಲು ಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಲೇವಡಿ ಮಾಡಿದರು.

ಹುಬ್ಬಳ್ಳಿ (ಜ.12): ರಾಮನ ಅಸ್ತಿತ್ವವನ್ನು ಪ್ರಶ್ನಿಸಿದ್ದ, ಶ್ರೀರಾಮಜನ್ಮಭೂಮಿ ಕುರಿತು ಯಾವುದೇ ನಿರ್ಣಯ ಕೈಗೊಳ್ಳಬಾರದು ಎಂದು ನ್ಯಾಯಾಲಯದಲ್ಲಿ ದಾವೆ ಹೂಡಿದ್ದ ಕಾಂಗ್ರೆಸ್ಸಿನವರು ಇಂದು ರಾಮ ಮಂದಿರದ ಯಶಸ್ಸಿನ ಪಾಲು ಪಡೆಯಲು ಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಲೇವಡಿ ಮಾಡಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀರಾಮಮಂದಿರ ಉದ್ಘಾಟನೆ ಆಹ್ವಾನ ಪತ್ರಿಕೆ ಜತೆ ನೀಡುತ್ತಿರುವ ಮಂತ್ರಾಕ್ಷತೆ ರಾಜ್ಯ ಸರಕಾರದ ಅನ್ನಭಾಗ್ಯದ ಅಕ್ಕಿ ಎಂದು ಹೇಳುತ್ತಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರಕಾರ ಈ ವರೆಗೆ ಒಂದೇ ಒಂದು ಅಕ್ಕಿ ಕಾಳನ್ನು ಕೊಟ್ಟಿಲ್ಲ. ಚುನಾವಣೆ ವೇಳೆ ಘೋಷಿಸಿರುವ 10 ಕೆಜಿ ಅಕ್ಕಿಯನ್ನು ಸಹ ನೀಡಿಲ್ಲ. ಈಗ ಮಂತ್ರಾಕ್ಷತೆಗೆ ರಾಜ್ಯ ಸರಕಾರದ ಯೋಜನೆ ಅಕ್ಕಿ ಬಳಸಲಾಗುತ್ತದೆ ಎಂದು ಹೇಳುತ್ತಿದ್ದಾರೆ ಎಂದು ಕಾಂಗ್ರೆಸ್ಸಿಗರಿಗೆ ತಿರುಗೇಟು ನೀಡಿದರು.

ಕಾಂಗ್ರೆಸ್ಸಿಗರು ಸನಾತನ ಧರ್ಮ ವಿರೋಧಿಗಳು: ಕೇಂದ್ರ ಸಚಿವ ಕ್ರಿಶನ್ ಪಾಲ್

ಈ ಹಿಂದೆ ಶ್ರೀರಾಮ ಕಾಲ್ಪನಿಕ, ರಾಮಾಯಣ ನಡೆದ ಬಗ್ಗೆ ಪುರಾವೆ ಇಲ್ಲ ಎಂದು ಹೇಳುತ್ತಿದ್ದವರು, ಇದೀಗ ನಾವು ರಾಮನ ಭಕ್ತರು, ನಮ್ಮ ಯೋಜನೆ ಅಕ್ಕಿಯೇ ಮಂತ್ರಾಕ್ಷತೆಗೆ ಬಳಸುತ್ತಿದ್ದಾರೆ ಎಂದು ಕ್ರೆಡಿಟ್‌ ಪಡೆಯಲು ಮುಂದಾಗುವ ಮೂಲಕ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಜನರು ಬುದ್ಧಿವಂತರಿದ್ದು, ಎಲ್ಲವನ್ನು ಸೂಕ್ಷ್ಮವಾಗಿಯೇ ಗಮನಿಸುತ್ತಿದ್ದಾರೆ. ಸರಿಯಾದ ಸಮಯದಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಸಿದ್ದು ಗೇಮ್‌ ಪ್ಲ್ಯಾನ್‌: ರಾಜ್ಯ ಸರ್ಕಾರದಲ್ಲಿ ಹೊಸ ಡಿಸಿಎಂ ಸೃಷ್ಟಿ ಬಗ್ಗೆ ನಡೆಯುತ್ತಿರುವ ಚರ್ಚೆ ಬಗ್ಗೆ ಪ್ರತಿಕ್ರಿಯೆನೀಡಿದ ಅವರು, ಇದೆಲ್ಲವೂ ಸಿದ್ದರಾಮಯ್ಯ ಗೇಮ್‌ ಪ್ಲ್ಯಾನ್‌ ಅಷ್ಟೇ. ಡಿ.ಕೆ.ಶಿವಕುಮಾರ ಅವರನ್ನು ಸೈಡ್‌ಲೈನ್‌ ಮಾಡುವ ಉದ್ದೇಶದಿಂದ ಈ ರೀತಿ ಮಾಡಲಾಗುತ್ತಿದೆ. ವ್ಯವಸ್ಥಿತವಾಗಿ ಬಲೆ ಹೆಣೆದು ಡಿ.ಕೆ.ಶಿವಕುಮಾರ ಅವರನ್ನು ಮಟ್ಟಹಾಕುವ ಉದ್ದೇಶ ಸಿದ್ದರಾಮಯ್ಯ ಅವರದ್ದು ಎಂದರು. ಎರಡೂವರೆ ವರ್ಷದ ಪವರ್‌ ಶೇರಿಂಗ್‌ ಬಗ್ಗೆ ನಮಗೂ ಕಾಂಗ್ರೆಸ್ಸಿಗರಿಂದ ಮಾಹಿತಿ ಬಂದಿದೆ. ಈ ಅಧಿಕಾರ ಹಂಚಿಕೆ ವಿಚಾರವನ್ನು ಈಗಲೇ ಹತ್ತಿಕ್ಕುವ ಉದ್ದೇಶದಿಂದ ಈ ರೀತಿ ವಿವಾದ ಸೃಷ್ಟಿ ಮಾಡಲಾಗುತ್ತಿದೆ ಎಂದರು.

ಬದುಕು ನರಕವಾಗಿಸುವ ನಶೆಗಳಿಂದ ದೂರವಿರಿ: ನಟಿ ಪೂಜಾಗಾಂಧಿ

ಈಗಲೂ ಬದ್ಧ: ರಾಜ್ಯ ಸರ್ಕಾರ ಐಸಿಸ್ ಆಡಳಿತ ನಡೆಸುತ್ತಿದೆ ಎನ್ನುವ ತಮ್ಮ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ಸರ್ಕಾರ ಅವರದೇ ಇದೆ. ಮತ್ತೇಕೆ ಪ್ರತಿಭಟನೆ ನಡೆಸಬೇಕು. ಮೊನ್ನೆಯಷ್ಟೇ ಬಿಜೆಪಿ ನಾಯಕರ ಮೇಲೆ ಎಫ್‌ಐಆರ್ ದಾಖಲು ಮಾಡಿದ್ದಾರೆ. ಹಿಂದೂಗಳನ್ನು ವಿನಾಕಾರಣ ಬಂಧಿಸುವ ಮೂಲಕ ಕಾಂಗ್ರೆಸ್‌ ಇಂತಹ ಆಡಳಿತ ನಡೆಸುತ್ತಿದೆ. ಹೀಗಾಗಿ ಇದು ಐಸಿಸ್‌ ಸರ್ಕಾರ ಎಂದು ಕಿಡಿಕಾರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ