ಸಿಎಂ ಅವರನ್ನು ಯಾರಾದ್ರು ಮುಟ್ಟೋಕೆ ಆಗುತ್ತಾ?: ಕೇಂದ್ರ ‌ಸಚಿವ ಸೋಮಣ್ಣ

Published : Nov 14, 2024, 11:36 AM ISTUpdated : Nov 14, 2024, 11:37 AM IST
ಸಿಎಂ ಅವರನ್ನು ಯಾರಾದ್ರು ಮುಟ್ಟೋಕೆ ಆಗುತ್ತಾ?: ಕೇಂದ್ರ ‌ಸಚಿವ ಸೋಮಣ್ಣ

ಸಾರಾಂಶ

ಬೆಳಗಾವಿ- ಧಾರವಾಡ ನೇರ ರೈಲು ದಿ. ಸುರೇಶ್ ಅಂಗಡಿ ಕನಸಾಗಿದೆ.  ಇಂದು ಸಭೆ ಮಾಡಿ ತೀರ್ಮಾನ ಮಾಡುತ್ತೇನೆ. ಸುರೇಶ್ ಅಂಗಡಿ ಕನಸು ಈ ಅವಧಿಯಲ್ಲಿ ಮುಗಿಸುವ ಪ್ರಯತ್ನ ಮಾಡುತ್ತೇವೆ. ಭೂ ಸ್ವಾಧೀನ ಪ್ರಕ್ರಿಯೆ ಸಮಸ್ಯೆಯಾಗಿದೆ.  ಸಮಸ್ಯೆ ಬಗ್ಗೆ ಇಂದು ಚರ್ಚೆ ಮಾಡಿ ಸರಿ ಮಾಡುತ್ತೇವೆ.  ಪ್ರಧಾನಿ ನರೇಂದ್ರ ಮೋದಿಯವರು ಸಹ ಈ ಅವಧಿಯಲ್ಲಿ ಮುಗಿಸಲು ನಿರ್ಧರಿಸಿದ್ದಾರೆ: ಕೇಂದ್ರ ‌ಸಚಿವ ವಿ. ಸೋಮಣ್ಣ 

ಬೆಳಗಾವಿ(ನ.14):  ಯಾರಾದ್ರು ಸಿಎಂ ಮುಟ್ಟಿದ್ರೆ ಪೊಲೀಸರು ಕೇಸ್ ಹಾಕ್ತಾರೆ. ಆ ಅರ್ಥದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿರಬಹುದು. ಸಿದ್ದರಾಮಯ್ಯ ಅನುಭವಿ ರಾಜಕಾರಣಿ, ಅವರು ಏನು ಮಾತಾಡ್ತಾರೆ ಎನ್ನುವುದು ಅವರಿಗೆ ಬಿಡುತ್ತೇನೆ. ಸಾಮಾನ್ಯ ಜನರ ಭಾವನೆಗೆ ತದ್ವಿರುದ್ಧವಾಗಿ ಮಾತನಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು  ಕೇಂದ್ರ ‌ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. 

ನನ್ನನ್ನು ಮುಟ್ಟಿದ್ರೆ ರಾಜ್ಯದ ಜನ ಸುಮ್ನೆ ಬಿಡಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಗುರುವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ‌ಸಚಿವ ವಿ. ಸೋಮಣ್ಣ, ಸಿಎಂ ಅವರನ್ನು ಯಾರಾದ್ರು ಮುಟ್ಟೋಕೆ  ಆಗುತ್ತಾ ಎಂದು ವ್ಯಂಗ್ಯವಾಡಿದ್ದಾರೆ. 

16.73 ಕೋಟಿ ವೆಚ್ಚದಲ್ಲಿ ಗುಬ್ಬಿ ರೈಲ್ವೆ ನಿಲ್ದಾಣ ಅಭಿವೃದ್ಧಿ: ವಿ.ಸೋಮಣ್ಣ

ಬೆಳಗಾವಿ- ಧಾರವಾಡ ನೇರ ರೈಲು ದಿ. ಸುರೇಶ್ ಅಂಗಡಿ ಕನಸಾಗಿದೆ.  ಇಂದು ಸಭೆ ಮಾಡಿ ತೀರ್ಮಾನ ಮಾಡುತ್ತೇನೆ. ಸುರೇಶ್ ಅಂಗಡಿ ಕನಸು ಈ ಅವಧಿಯಲ್ಲಿ ಮುಗಿಸುವ ಪ್ರಯತ್ನ ಮಾಡುತ್ತೇವೆ. ಭೂ ಸ್ವಾಧೀನ ಪ್ರಕ್ರಿಯೆ ಸಮಸ್ಯೆಯಾಗಿದೆ.  ಸಮಸ್ಯೆ ಬಗ್ಗೆ ಇಂದು ಚರ್ಚೆ ಮಾಡಿ ಸರಿ ಮಾಡುತ್ತೇವೆ.  ಪ್ರಧಾನಿ ನರೇಂದ್ರ ಮೋದಿಯವರು ಸಹ ಈ ಅವಧಿಯಲ್ಲಿ ಮುಗಿಸಲು ನಿರ್ಧರಿಸಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ತುಂಬ ಗಂಭೀರವಾಗಿ ಪರಿಗಣಿಸಿದ್ದಾರೆ. ಧಾರವಾಡ ಜಿಲ್ಲಾಧಿಕಾರಿ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡುತ್ತೇನೆ ಎಂದು ಹೇಳಿದ್ದಾರೆ. 

ಲೋಕಾಪುರ- ಧಾರವಾಡ ರೈಲಿನ ಬಗ್ಗೆ ನಾನು ಆಮೇಲೆ ಮಾತನಾಡುತ್ತೇನೆ. ಅದರ ಬಗ್ಗೆ ನಾನು ಗಮನ ಹರಿಸುತ್ತೇನೆ. ಮುಂದಿನ ತಿಂಗಳು ಸ್ಲೀಪರ್‌ ಕೋಚ್ ವಂದೇ ಭಾರತ್ ಬರಲಿದೆ. ಬೆಳಗಾವಿ- ಬೆಂಗಳೂರು ಮಧ್ಯೆ ಮುಂದಿನ ತಿಂಗಳು ರೈಲು ಓಡಲಿದೆ ಎಂದು ತಿಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ