
ಬೆಂಗಳೂರು (ಮಾ.20) : ಸಚಿವ ಸಂಪುಟದ ಸಹೋದ್ಯೋಗಿ ಮುನಿರತ್ನ ಅವರು ನಿರ್ಮಿಸುತ್ತಿರುವ ‘ಉರಿಗೌಡ- ನಂಜೇಗೌಡ’ ಸಿನಿಮಾದಲ್ಲಿ ನನ್ನ ಪಾತ್ರವೇನೂ ಇಲ್ಲ. ಅದಕ್ಕೆ ನಾನು ಚಿತ್ರಕತೆ ಬರೆಯುತ್ತಿಲ್ಲ ಎಂದು ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ(Dr CN Ashwath Narayan) ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮಗಳಿಗೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಟಿಪ್ಪುವನ್ನು ಕೊಂದ ವೀರ ಸೇನಾನಿಗಳಾದ ಉರಿಗೌಡ ಮತ್ತು ನಂಜೇಗೌಡ(Urigowda-Nanjegowda)ರ ಬಗ್ಗೆ ನನಗೆ ನೈಜ ಅಭಿಮಾನವಿದೆ. ಅವರ ಬಗ್ಗೆ ನಾನು ಇದುವರೆಗೂ ಆಡಿರುವ ಮಾತುಗಳಿಗೆ ನಾನು ಬದ್ಧನಾಗಿದ್ದೇನೆ. ಆದರೆ ನಾನು ಈ ಸಿನಿಮಾದ ಭಾಗವಾಗುತ್ತಿಲ್ಲ ಎಂದು ಹೇಳಿದ್ದಾರೆ.
ಉರಿಗೌಡ ಉಲ್ಲೇಖದ ಪುಸ್ತಕ ಬಿಡುಗಡೆ ಮಾಡಿದ್ದು ನಾವಲ್ಲ ದೇವೇಗೌಡರು: ಸಿಟಿ ರವಿ
ಸಚಿವ ಮುನಿರತ್ನ(Muniratna) ಅವರು ಉರಿಗೌಡ-ನಂಜೇಗೌಡ ಶೀರ್ಷಿಕೆಯಲ್ಲಿ ಸಿನಿಮಾ ನಿರ್ಮಿಸುವುದಾಗಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಶೀರ್ಷಿಕೆಯನ್ನು ನೋಂದಣಿ ಮಾಡಿಸಿದ್ದಾರೆ. ಅಷ್ಟೇ ಅಲ್ಲದೆ, ತಮ್ಮ ವೃಷಭಾದ್ರಿ ಪ್ರೊಡಕ್ಷನ್ಸ್ನಿಂದ ಈ ಸಿನಿಮಾ ಮಾಡುವುದಾಗಿ ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದಾರೆ.
ಮೇ 18ರಂದು ಬೆಳಗ್ಗೆ 10 ಗಂಟೆಗೆ ಕಂಠೀರವ ಸ್ಟುಡಿಯೋದಲ್ಲಿ ಈ ಸಿನಿಮಾ ಚಿತ್ರೀಕರಣಕ್ಕೆ ಮುಹೂರ್ತ ನಡೆಯಲಿದೆ. ಆರ್.ಅಶೋಕ್-ಸಿ.ಟಿ.ರವಿ ಈ ಸಿನಿಮಾವನ್ನು ಅರ್ಪಿಸಲಿದ್ದಾರೆ. ಈ ಸಿನಿಮಾಗೆ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ಚಿತ್ರಕಥೆ ಹಾಗೂ ಆರ್.ಎಸ್.ಗೌಡ ಅವರ ನಿರ್ದೇಶನ ಇರಲಿದೆ ಎಂದು ಜಾಹೀರಾತು ನೀಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಸಚಿವ ಅಶ್ವತ್ಥನಾರಾಯಣ ಅವರು ಈ ಸಿನಿಮಾಗೆ ನಾನು ಚಿತ್ರಕಥೆ ಬರೆಯುತ್ತಿಲ್ಲ. ನಾನು ಈ ಸಿನಿಮಾದ ಭಾಗವಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಶಿವಮೊಗ್ಗ ಡಿಸಿ ಕಚೇರಿ ಎದುರು ನಿಂತು ಅಜಾನ್ ಕೂಗಿದ ಯುವಕ: ವಿಡಿಯೋ ವೈರಲ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.