ಸೋಮಣ್ಣ-ವಿಜಯೇಂದ್ರ ಮುನಿಸು ಶಮನವಾಯ್ತಾ?: ಕುತೂಹಲ ಮೂಡಿಸಿದ ಉಭಯ ನಾಯಕರ ಭೇಟಿ..!

Published : Feb 27, 2024, 06:58 AM IST
ಸೋಮಣ್ಣ-ವಿಜಯೇಂದ್ರ ಮುನಿಸು ಶಮನವಾಯ್ತಾ?: ಕುತೂಹಲ ಮೂಡಿಸಿದ ಉಭಯ ನಾಯಕರ ಭೇಟಿ..!

ಸಾರಾಂಶ

ಸೋಮಣ್ಣ ಪರಸ್ಪರ ಕುಶಲೋಪರಿ ಉಭಯ ನಾಯಕರನ್ನು ಭೇಟಿ ಮಾಡಿಸಲು ವಿವಿಧ ನಾಯಕರು ಪ್ರಯತ್ನ ನಡೆಸಿದರೂ ಸೋಮಣ್ಣ ಅವರು ಒಪ್ಪಿರಲಿಲ್ಲ. ಇದೀಗ ಮೊದಲ ಬಾರಿಗೆ ವಿಜಯೇಂದ್ರ ಅವರ ಭೇಟಿ ಬಗ್ಗೆ ಸೋಮಣ್ಣ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವುದು ಕುತೂಹಲ ಮೂಡಿಸಿದೆ.

ಬೆಂಗಳೂರು(ಫೆ.27):  ಮಾಜಿ ಸಚಿವ ವಿ.ಸೋಮಣ್ಣ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನಡುವಿನ ಮುನಿಸು ಶಮನಗೊಂಡಂತಿದೆ. ನಗರದಲ್ಲಿ ನಡೆದ ಶಾಸಕ ಕೆ. ಗೋಪಾಲಯ್ಯ ಅವರ ಪುತ್ರನ ವಿವಾಹ ನಿಶ್ಚಯ ಕಾರ್ಯಕ್ರಮದಲ್ಲಿ ಉಭಯ ನಾಯಕರು ಮುಖಾಮುಖಿಯಾಗಿ ಕೆಲಹೊತ್ತು ಸಮಾಲೋಚನೆ ನಡೆಸಿದರು.

ಈ ಬಗ್ಗೆ ಸೋಮಣ್ಣ ಅವರು ಸ್ವತಃ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಸಹಿತ ವಿವರ ಹಂಚಿಕೊಂಡಿದ್ದು, ಸಮಾರಂಭವೊಂದರಲ್ಲಿ ವಿಜಯೇಂದ್ರ ಅವರೊಂದಿಗೆ ಉಭಯ ಕುಶಲೋಪರಿ ವಿಚಾರಿಸಲಾಯಿತು. ಈ ಸಂದರ್ಭ ಮಾಜಿ ಸಚಿವ ಸಿ.ಟಿ.ರವಿ ಅವರೂ ಉಪಸ್ಥಿತರಿದ್ದರು ಎಂದು ತಿಳಿಸಿದ್ದಾರೆ.

ತುಮಕೂರಿನಲ್ಲಿ ಯಾರಾಗುತ್ತಾರೆ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ: ಸೋಮಣ್ಣನಾ! ಕುಮಾರಣ್ಣನಾ

ಕಳೆದ ವಿಧಾನಸಭಾ ಚುನಾವಣೆಯಲ್ಲಿನ ಸೋಲಿನ ಹಿನ್ನೆಲೆಯಲ್ಲಿ ಸೋಮಣ್ಣ ಅವರು ಪರೋಕ್ಷವಾಗಿ ಮಾಜಿ ವಿಜಯೇಂದ್ರ ಮತ್ತು ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಪುತ್ರರಾಗಿರುವ ವಿಜಯೇಂದ್ರ ವಿರುದ್ಧ ಪದೇ ಪದೇ ಹರಿಹಾಯುತ್ತಿದ್ದರು. ನಂತರದ ದಿನಗಳಲ್ಲಿ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದ ಬಳಿಕವೂ ಅವರೊಂದಿಗೆ ಸೋಮಣ್ಣ ದೂರ ಉಳಿದಿದ್ದರು. ಅವರೊಂದಿಗೆ ಮುಖಾಮುಖಿಯೇ ಆಗಿರಲಿಲ್ಲ.

ಸೋಮಣ್ಣ ಪರಸ್ಪರ ಕುಶಲೋಪರಿ ಉಭಯ ನಾಯಕರನ್ನು ಭೇಟಿ ಮಾಡಿಸಲು ವಿವಿಧ ನಾಯಕರು ಪ್ರಯತ್ನ ನಡೆಸಿದರೂ ಸೋಮಣ್ಣ ಅವರು ಒಪ್ಪಿರಲಿಲ್ಲ. ಇದೀಗ ಮೊದಲ ಬಾರಿಗೆ ವಿಜಯೇಂದ್ರ ಅವರ ಭೇಟಿ ಬಗ್ಗೆ ಸೋಮಣ್ಣ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವುದು ಕುತೂಹಲ ಮೂಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ದ್ವೇಷ ಭಾಷಣ ತಡೆಗೆ ಕಾನೂನು ಯತ್ನ: ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ
ದ್ವೇಷ ಭಾಷಣ ಶಾಸನ ಕಾಂಗ್ರೆಸ್ ಕ್ರೂರ ಸಂಪ್ರದಾಯದ ಪ್ರತಿಬಿಂಬ: ಪ್ರಲ್ಹಾದ್ ಜೋಶಿ ಕಿಡಿ