ಅಹಂಕಾರ ಬಿಟ್ಟು ಕೇಂದ್ರದ ಜೊತೆ ಕೆಲಸ ಮಾಡಿ: ಸಿಎಂ ಸಿದ್ದರಾಮಯ್ಯಗೆ ಸೋಮಣ್ಣ ಕಿವಿಮಾತು

Published : Mar 07, 2026, 05:54 PM IST
siddaramaiah

ಸಾರಾಂಶ

ಅಹಂಕಾರ ಬಿಟ್ಟು ಕೇಂದ್ರ ಸರ್ಕಾರದ ಜೊತೆ ಕೈಜೋಡಿಸಿ ಎಂದು ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಿವಿಮಾತು ಹೇಳಿದ್ದಾರೆ.

ಬೆಂಗಳೂರು (ಮಾ.07): ಅಹಂಕಾರ ಬಿಟ್ಟು ಕೇಂದ್ರ ಸರ್ಕಾರದ ಜೊತೆ ಕೈಜೋಡಿಸಿ ಎಂದು ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಿವಿಮಾತು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಪಾರದರ್ಶಕ ಆಡಳಿತವನ್ನು ನೋಡಿ ಕಾಂಗ್ರೆಸ್ ಪಕ್ಷದ ಸರ್ಕಾರ ಕಲಿಯಬೇಕು. ಸಾಲದ ಪ್ರಮಾಣ ಏರಿಸುವ ಮೂಲಕ ರಾಜ್ಯವನ್ನು ಮಾರಾಟಕ್ಕೆ ಇಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಇಂತಹ ಬಜೆಟ್ ನಿರೀಕ್ಷೆ ಮಾಡಿರಲಿಲ್ಲ ಎಂದರು.

ನಾಲ್ಕು ಸಾವಿರ ಕನ್ನಡ ಶಾಲೆಗಳನ್ನು ಮುಚ್ಚಿಸಿ ಅಲ್ಪಸಂಖ್ಯಾತ ವರ್ಗದವರಿಗೆ ನಾಲ್ಕು ಸಾವಿರ ಕೋಟಿ ರು. ಅನುದಾನ ನೀಡಿದ್ದಾರೆ. ಮೌಲ್ವಿಗಳಿಗೆ ಸಹಾಯಧನ ನೀಡಿದ್ದಾರೆ. ಮುಜಾರಾಯಿ ದೇವಸ್ಥಾನ ಅರ್ಚಕರಿಗೆ ತಸ್ಥಿಕ್ ಹಣ ಏರಿಕೆ ಮಾಡಿಲ್ಲ. ದೇವಸ್ಥಾನ ಅಭಿವೃದ್ದಿ ಹಣ ನೀಡಿಲ್ಲ. ಇದೊಂದು ಅಲ್ಪಸಂಖ್ಯಾತರ ಓಲೈಕೆ ಸರ್ಕಾರ ಎಂದು ಟೀಕಿಸಿದರು. ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು, ಸರ್ಕಾರ ಮಾಡಿರುವ ಸಾಲದ ಶೇಕಡಾ 50 ರಷ್ಟು ಹಣ ಕೇವಲ ಬಡ್ಡಿ ಪಾವತಿಸಲು ಮತ್ತು ನೌಕರರ ವೇತನಕ್ಕೆ ವಿನಿಯೋಗವಾಗುತ್ತಿದೆ.

ಸಾಧನೆಗಳನ್ನು ಜನರ ಮುಂದೆ ಇಡಲಿ

ರಾಜ್ಯ ಹಣಕಾಸಿನ ಸ್ಥಿತಿ ಶೋಚನಿಯವಾಗಿದೆ. ರೈತರಿಗೆ, ಕೂಲಿ ಕಾರ್ಮಿಕರು ಮತ್ತು ಸಾರ್ವಜನಿಕರಿಗೆ ಈ ಬಜೆಟ್‌ನಿಂದ ಯಾವುದೇ ಪ್ರಯೋಜನವಿಲ್ಲ ಎಂದು ಸೋಮಣ್ಣ ಹೇಳಿದರು. ಸಿದ್ದರಾಮಯ್ಯ ಅವರು 17 ಬಜೆಟ್‌ಗಳಲ್ಲಿ ಮಾಡಿರುವ ಸಾಧನೆಗಳನ್ನು ಜನರ ಮುಂದೆ ಇಡಲಿ. ನೂರಾರು ಯೋಜನೆಗಳನ್ನು ರೂಪಿಸುತ್ತಾರೆ ಅದು ಪುಸ್ತಕದಲ್ಲಿ ಯೋಜನೆಗಳು ಇರುತ್ತದೆ. ಧ್ವನಿ ಇಲ್ಲದ, ಆಸರೆ ಇಲ್ಲದೇ ಇರುವ ಜನರಿಗೆ ಆಸರೆಯಾಗಬೇಕು ವಿಕಸಿತ ಭಾರತದ ಕೇಂದ್ರ ಸರ್ಕಾರದ ಜೊತೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಹಿಂದುಳಿದ ವರ್ಗದವರಿಗೆ, ಬಡವರಿಗೆ, ಮಧ್ಯಮ ವರ್ಗದವರಿಗೆ ಈ ಬಜೆಟ್ ಏನು ಉಪಯೋಗವಿಲ್ಲ. ಆಳವಾದ ಅನುಭವ ಇರುವ ಸಿದ್ದರಾಮಯ್ಯರವರು ಸೋತಿದ್ದಾರೆ. ಈಗಾಗಲೇ ಕಾಂಗ್ರೆಸ್ ಪಕ್ಷ ಶೇಕಡ 90ರಷ್ಟು ಜನರ ವಿಶ್ವಾಸ ಕಳೆದುಕೊಂಡಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ದಳಪತಿ ವಿಜಯ್ 'ಥಲೈವಾ' ಟ್ಯಾಗ್‌ಲೈನ್ ಹಿಂದೆ ಇತ್ತಾ ದೊಡ್ಡ ಸ್ಕೆಚ್? ಆ 'ಟೈಮ್ ಟು ಲೀಡ್' ಟ್ಯಾಗ್‌ಲೈನ್ ಸೇರಿಸಿದ್ದು ಯಾರು ?
ಅಣ್ಣಾಮಲೈ 'ಕಿಂಗ್‌ ಮೇಕರ್' ಗೇಮ್‌ಪ್ಲ್ಯಾನ್; AIDMK ಪಾಳಯದಲ್ಲಿ ನಡುಕ! BJP ಹೇಳಿದ್ದೇನು?