2 ಕಡೆ ಸೋತು ಸೋಮಣ್ಣ ಮಾನಸಿಕವಾಗಿ ನೊಂದಿದ್ದಾರೆ: ಸದಾನಂದಗೌಡ

Published : Nov 26, 2023, 06:45 AM IST
2 ಕಡೆ ಸೋತು ಸೋಮಣ್ಣ ಮಾನಸಿಕವಾಗಿ ನೊಂದಿದ್ದಾರೆ: ಸದಾನಂದಗೌಡ

ಸಾರಾಂಶ

ಸೋಮಣ್ಣ ತಮ್ಮ ಕ್ಷೇತ್ರವನ್ನು ಬಿಟ್ಟು ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದಾರೆ. ಹೀಗಾಗಿ ಅಸಮಾಧಾನದ ಮಾತುಗಳನ್ನಾಡಿದ್ದಾರೆ. ಅವರ ಮಾತನ್ನು ಒಪ್ಪುತ್ತೇನೆ. ಪಕ್ಷಕ್ಕಾಗಿ ದುಡಿದಿದ್ದಾರೆ. ಸೋಲಾಗಿರುವುದಕ್ಕೆ ಅವರಿಗೆ ನೋವಾಗಿದೆ. ಒಳ್ಳೆಯ ರಾಜಕಾರಣಿಯಾಗಿ ಕೆಲಸ ನಿರ್ವಹಿಸಿದರು. ಸ್ವಕ್ಷೇತ್ರ ಬಿಟ್ಟು ಬೇರೆ ಕಡೆ ಹೋಗಿ ಸೋಲನುಭವಿಸಿದ್ದಕ್ಕೆ ನೋವು ತಂದಿದೆ: ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ 

ಬೆಂಗಳೂರು(ನ.26):  ವಿಧಾನಸಭೆ ಚುನಾವಣೆಯಲ್ಲಿ ಎರಡು ಕಡೆ ಸ್ಪರ್ಧಿಸಿ ಸೋಲನುಭವಿಸಿದ್ದಕ್ಕೆ ಮಾಜಿ ಸಚಿವ ವಿ.ಸೋಮಣ್ಣ ಮಾನಸಿಕವಾಗಿ ನೊಂದಿರುವ ಹಿನ್ನೆಲೆಯಲ್ಲಿ ಬೇಸರದ ಮಾತುಗಳನ್ನಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸೋಮಣ್ಣ ತಮ್ಮ ಕ್ಷೇತ್ರವನ್ನು ಬಿಟ್ಟು ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದಾರೆ. ಹೀಗಾಗಿ ಅಸಮಾಧಾನದ ಮಾತುಗಳನ್ನಾಡಿದ್ದಾರೆ. ಅವರ ಮಾತನ್ನು ಒಪ್ಪುತ್ತೇನೆ. ಪಕ್ಷಕ್ಕಾಗಿ ದುಡಿದಿದ್ದಾರೆ. ಸೋಲಾಗಿರುವುದಕ್ಕೆ ಅವರಿಗೆ ನೋವಾಗಿದೆ. ಒಳ್ಳೆಯ ರಾಜಕಾರಣಿಯಾಗಿ ಕೆಲಸ ನಿರ್ವಹಿಸಿದರು. ಸ್ವಕ್ಷೇತ್ರ ಬಿಟ್ಟು ಬೇರೆ ಕಡೆ ಹೋಗಿ ಸೋಲನುಭವಿಸಿದ್ದಕ್ಕೆ ನೋವು ತಂದಿದೆ ಎಂದರು.

2 ಕಡೆ ಸ್ಪರ್ಧೆ ಮಾಡಿ ಅಂತ ಪ್ರಧಾನಿ, ಶಾ ಜೀವ ಹಿಂಡುತ್ತಿದ್ದರು: ಸಿದ್ದಗಂಗಾ ಶ್ರೀ ಮುಂದೆ ಸೋಮಣ್ಣ ಅಳಲು

ಗೋವಿಂದರಾಜನಗರದಲ್ಲಿ ಸ್ಪರ್ಧಿಸಿದ್ದರೆ ಖಂಡಿತವಾಗಿಯೂ ಭಾರಿ ಅಂತರದಲ್ಲಿ ಗೆಲುವು ಸಾಧಿಸುತ್ತಿದ್ದರು. ಪಕ್ಷವು ತೀರ್ಮಾನಿಸಿ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವ ಅವಕಾಶ ನೀಡಿತ್ತು. ಸೋಮಣ್ಣ ಅವರನ್ನು ಕೇಳಿಯೇ ಕಣಕ್ಕಿಳಿಸಲಾಗಿತ್ತು ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮತ್ತು ಬೆಳಗಾವಿ ವಿಭಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ