ರಾಜಕಾರಣ ಶುದ್ಧಿ ಮಾಡಲಿಕ್ಕೆ ಪರಮಪೂಜ್ಯರು ಬಹಳ ಯೋಗ್ಯರು: ದಿಂಗಾಲೇಶ್ವರ ಶ್ರೀಗಳ ಸ್ಪರ್ಧೆ ಸ್ವಾಗತಿಸಿದ ವಚನಾನಂದ ಶ್ರೀ!

Published : Apr 09, 2024, 05:05 PM IST
ರಾಜಕಾರಣ ಶುದ್ಧಿ ಮಾಡಲಿಕ್ಕೆ ಪರಮಪೂಜ್ಯರು ಬಹಳ ಯೋಗ್ಯರು: ದಿಂಗಾಲೇಶ್ವರ ಶ್ರೀಗಳ ಸ್ಪರ್ಧೆ ಸ್ವಾಗತಿಸಿದ ವಚನಾನಂದ ಶ್ರೀ!

ಸಾರಾಂಶ

ಉತ್ತರ ಭಾರತದಂತೆ ಕರ್ನಾಟಕದಲ್ಲೂ ಮಠಾಧೀಶರು ರಾಜಕಾರಣಕ್ಕೆ ಬರಬೇಕು. ಹೀಗಾಗಿ ಅವರು(ದಿಂಗಾಲೇಶ್ವರ ಶ್ರೀ) ರಾಜಕೀಯ ಶುದ್ಧೀಕರಣಕ್ಕೆ ಬಂದಿದ್ದಾರೆ ಎಂದು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವುದಕ್ಕೆ ವಚನಾನಂದ ಶ್ರೀ ಸ್ವಾಗತಿಸಿದರು.

ದಾವಣಗೆರೆ (ಏ.9): ಉತ್ತರ ಭಾರತದಂತೆ ಕರ್ನಾಟಕದಲ್ಲೂ ಮಠಾಧೀಶರು ರಾಜಕಾರಣಕ್ಕೆ ಬರಬೇಕು. ಹೀಗಾಗಿ ಅವರು(ದಿಂಗಾಲೇಶ್ವರ ಶ್ರೀ) ರಾಜಕೀಯ ಶುದ್ಧೀಕರಣಕ್ಕೆ ಬಂದಿದ್ದಾರೆ ಎಂದು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವುದಕ್ಕೆ ವಚನಾನಂದ ಶ್ರೀ ಸ್ವಾಗತಿಸಿದರು.

ಇಂದು ದಿಂಗಾಲೇಶ್ವರ ಸ್ವಾಮೀಜಿ ದಾವಣಗೆರೆಯ ಹರಿಹರಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಚನಾನಂದ ಶ್ರೀಗಳು, ರಾಜಕಾರಣದಲ್ಲಿ ಅಶುದ್ಧಿಯನ್ನ ಶುದ್ಧಿ ಮಾಡಲಿಕ್ಕೆ ಪರಮ ಪೂಜ್ಯರು ಬಹಳ ಯೋಗ್ಯರು ಅಂತ ನನಗೆ ಅನಿಸುತ್ತಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಆ ಭಾಗದ ಲಿಂಗಾಯತ ನಾಯಕರನ್ನ ತುಳಿಯುವಂತಹ ಕೆಲಸ ಮಾಡಿದ್ದಾರೆ. ಈ ವಿಚಾರವೂ ನಮ್ಮ ಗಮನಕ್ಕೆ ಬಂದಿದೆ. ಈ ವಿಚಾರವಾಗಿ ನಾವು ಸದ್ಯದಲ್ಲೇ ಸಭೆ ನಡೆಸಿ ನಮ್ಮ ನಿರ್ಧಾರ ತಿಳಿಸುತ್ತೇವೆ ಎಂದರು.

ದಿಂಗಾಲೇಶ್ವರ ಶ್ರೀಗೆ ಕಾಂಗ್ರೆಸ್ ಟಿಕೆಟ್‌ ಬಗ್ಗೆ ಚರ್ಚಿಸಿ ನಿರ್ಧಾರ: ಡಿ.ಕೆ. ಶಿವಕುಮಾರ್‌

ಪರಮ ಪೂಜ್ಯರು ಬಹಳ ವರ್ಷದಿಂದ ನಮಗೆ ಪರಿಚಿತರು. ನಾವು ಪಂಚಮಸಾಲಿ ಮಠಕ್ಕೆ ಬರೋದಕ್ಕೆ ಅವರು ಕೂಡ ಕಾರಣರಾಗಿದ್ದಾರೆ. ಅವರ ಭಕ್ತರ ಎಲ್ಲರ ಅಭಿಪ್ರಾಯ ಕೇಳಿಕೊಂಡೇ ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ. ಚುನಾವಣೆಗೆ ಸ್ಪರ್ಧಿಸುತ್ತಿರುವುದು ಅವರ ವೈಯಕ್ತಿಕ ನಿರ್ಧಾರವಲ್ಲ ಪಂಚಮಸಾಲಿ ಸಮುದಾಯ ದಿಂಗಾಲೇಶ್ವರ ಶ್ರೀಗಳಿಗೆ ಸಂಪೂರ್ಣ ಬೆಂಬಲ ನೀಡುವ ಬಗ್ಗೆ ಸದ್ಯದಲ್ಲೇ ಅಲ್ಲೊಂದು ಸಭೆ ಮಾಡಿ ನಮ್ಮ ನಿರ್ಧಾರ ತಿಳಿಸುತ್ತೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ
ಸಿಸೇರಿಯನ್‌ ಹೆರಿಗೆ ಹೆಚ್ಚಳ ಏಕೆ ಎಂದು ತಿಳಿಯಲು ಆಡಿಟ್‌: ಸಚಿವ ದಿನೇಶ್‌ ಗುಂಡೂರಾವ್