ನನ್ನ ಮೇಲೆ ಆರೋಪ ಬಂದಾಗ ರಾಜೀನಾಮೆ ನೀಡಿದ್ದೆ; ಸಚಿವ ನಾಗೇಂದ್ರ ರಾಜೀನಾಮೆ ನೀಡಲಿ: ಈಶ್ವರಪ್ಪ

Published : May 31, 2024, 06:10 AM ISTUpdated : May 31, 2024, 08:38 AM IST
ನನ್ನ ಮೇಲೆ ಆರೋಪ ಬಂದಾಗ ರಾಜೀನಾಮೆ ನೀಡಿದ್ದೆ; ಸಚಿವ ನಾಗೇಂದ್ರ ರಾಜೀನಾಮೆ ನೀಡಲಿ: ಈಶ್ವರಪ್ಪ

ಸಾರಾಂಶ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಆತ್ಮಹತ್ಯೆಗೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಸಚಿವ ನಾಗೇಂದ್ರ ಅವರು ರಾಜೀನಾಮೆ ನೀಡಬೇಕು. ತನಿಖೆಯಲ್ಲಿ ನಿರ್ದೋಷಿ ಎಂಬುದು ಸಾಬೀತಾದರೆ ಮತ್ತೆ ಅವರನ್ನು ಸಚಿವ ಸ್ಥಾನದಲ್ಲಿ ಮುಂದುವರಿಸಬಹುದು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಹೇಳಿದರು.

ಚಿಕ್ಕಮಗಳೂರು (ಮೇ.31) :ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಆತ್ಮಹತ್ಯೆಗೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಸಚಿವ ನಾಗೇಂದ್ರ ಅವರು ರಾಜೀನಾಮೆ ನೀಡಬೇಕು. ತನಿಖೆಯಲ್ಲಿ ನಿರ್ದೋಷಿ ಎಂಬುದು ಸಾಬೀತಾದರೆ ಮತ್ತೆ ಅವರನ್ನು ಸಚಿವ ಸ್ಥಾನದಲ್ಲಿ ಮುಂದುವರಿಸಬಹುದು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಹಿಂದೆ ನನ್ನ ಮೇಲೆ ಭ್ರಷ್ಟಾಚಾರದ ಆಪಾದನೆ ಬಂದಾಗ ದೆಹಲಿಗೆ ಕರೆ ಮಾಡಿ ನಾನು ರಾಜೀನಾಮೆ ಕೊಡುತ್ತೇನೆ ಅನುಮತಿ ಕೊಡಿ ಎಂದು ಕೇಳಿದ್ದೆ. ತಕ್ಷಣ ಬೇಡ ಅಂದರು. ಇದರಿಂದ ಸಮಾಧಾನ ಆಗದಿದ್ದಾಗ ಮೋದಿ ಅವರಿಗೆ ವಾಟ್ಸಪ್‌ ಮೆಸೇಜ್‌ ಮಾಡಿ ರಾಜೀನಾಮೆ ಕೊಡಲು ಅನುಮತಿ ಕೊಡಿ ಎಂದೆ, 2 ದಿನ ತಡೆಯಿರಿ ಅಂತ ಉತ್ತರ ಬಂತು, 2 ದಿನದ ನಂತರ ಅನುಮತಿ ನೀಡಿದರು, ಆಗ ಸಿದ್ದರಾಮಯ್ಯ, ಡಿಕೆಶಿ ನನ್ನ ರಾಜೀನಾಮೆಗೆ ಹೋರಾಟ ಮಾಡಿದ್ದರು. ಈಗ ಡಬಲ್‌ ಸ್ಟ್ಯಾಂಡರ್ಡ್‌ ತೋರಿಸುತ್ತಿದ್ದಾರೆ. ಈ ವಿಷಯದಲ್ಲಿ ಭಂಡತನದ ರಾಜಕಾರಣ ಮಾಡಬಾರದು. ನೈತಿಕತೆ ಇದ್ದರೆ ಸಚಿವರಿಂದ ರಾಜೀನಾಮೆ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ನಮ್ಮ ಸರ್ಕಾರ ಬಂದಮೇಲೆ ಪರೀಕ್ಷಾ ಪಾವಿತ್ರ್ಯ ಕಾಪಾಡಿದ್ದೇವೆ: ಮಧು ಬಂಗಾರಪ್ಪ

ಇದೇ ವೇಳೆ, ಬಿಜೆಪಿ ವಿರುದ್ಧ ಹರಿಹಾಯ್ದ ಈಶ್ವರಪ್ಪ(KS Eshwarappa), ಉಚ್ಛಾಟನೆಗೆ ಬಿಜೆಪಿಯಲ್ಲಿ ಏನೂ ಬೆಲೆ ಇಲ್ಲ. ಜಗದೀಶ್‌ ಶೆಟ್ಟರ್‌(Jagdish shettar) ಅವರು ಕಾಂಗ್ರೆಸ್ ಪಕ್ಷದಿಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದಾಗ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿತ್ತು. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅವರನ್ನು ಮತ್ತೆ ಪಕ್ಷಕ್ಕೆ ಕರೆದುಕೊಂಡು ಬಂದು ಟಿಕೆಟ್‌ ಕೊಟ್ಟರು. ಕಾಂಗ್ರೆಸ್‌ ನ ಸಂಸ್ಕೃತಿ ಬಿಜೆಪಿಯಲ್ಲೂ ಪಾಲನೆ ಆಗ್ತಾ ಇದೆ. ಪಕ್ಷವನ್ನು ಶುದ್ಧೀಕರಣ ಮಾಡುವ ಉದ್ದೇಶ ಹೊಂದಿದ್ದೇವೆ. ಪರಿಷತ್‌ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್‌ ಗೆಲ್ಲಲಿದ್ದಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ