
ಕೆಂಗಲ್ ಗೇಟ್
ಕೇಂದ್ರದ ಬಿಜೆಪಿಯವರು ರಾಜ್ಯಕ್ಕೆ ಕಳಂಕ ತರಲು ಹೊರಟಿದ್ದಾರೆ. ಕಲ್ಲೇಶ್ ಅವರನ್ನ ಇಡಿ ವಿಚಾರಣೆಗೆ ಕರೆದಿದ್ದಾರೆ. ಅಧಿಕಾರಿಗಳು ಅವರಿಗೆ ಸಿಎಂ ಹೆಸರು ಹೇಳುವಂತೆ ಒತ್ತಡ ಹಾಕುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಒಂದು ಕೂದಲ್ಲನ್ನೂ ಕೇಂದ್ರದ ನಾಯಕರು ಟಚ್ ಮಾಡೋದಕ್ಕು ಸಾಧ್ಯವಿಲ್ಲ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದರು.
ಇಂದು ವಿಧಾನಸೌಧ ಕೆಂಗಲ್ ಗೇಟ್ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕರು, ಕಲ್ಲೇಶ್ ಅವರಿಗೆ 17 ಪ್ರಶ್ನೆ ತುಂಬಲು ಕೊಡ್ತಾರೆ. ಮನೋಜ್ ಮಿತ್ತಲ್, ಕಣ್ಣನ್ ಇಬ್ಬರು ಇಡಿ ಆಫೀಸರಗಳು ಒತ್ತಡ ಹಾಕಿದ್ದಾರೆ. ಇಲ್ಲದಿದ್ರೆ ಶಿಕ್ಷೆ ಆಗೋತರ ಮಾಡ್ತಿವಿ ಅಂತಾ ಧಮಕಿ ಹಾಕಿದ್ದಾರೆ. ಹೀಗಾಗಿ ಇಡಿ ಅಧಿಕಾರಿಗಳ ವಿರುದ್ಧ ವಿಲ್ಸನ್ ಗಾರ್ಡನ್ ಸ್ಟೇಷನ್ಗೆ ದೂರು ನೀಡಲಾಗಿದೆ. ಕೇಂದ್ರದ ನಾಯಕರು ಹಿಂದುಳಿದ ವರ್ಗಗಳ ನಾಯಕನಿಗೆ ಈ ರೀತಿ ಮಾಡ್ತಿದ್ದಾರೆ. ಒಂದು ತಿಳ್ಕೊಳ್ಳಿ ಸಿಎಂ ಸಿದ್ದರಾಮಯ್ಯ ಅವರ ಒಂದು ಕೂದಲನ್ನೂ ಕೀಳಲು ಸಾಧ್ಯವಿಲ್ಲ ಎಂದು ಕೇಂದ್ರದ ನಾಯಕರಿಗೆ ಸವಾಲು ಹಾಕಿದರು.
ಅಯ್ಯೋ...! ಈ ಬಾರಿಯೂ ಶಾಸಕ ಪ್ರದೀಪ್ ಈಶ್ವರ್ಗೆ ಮಾತನಾಡಲು ಅವಕಾಶ ಕೊಡದ ಸ್ಪೀಕರ್!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.