
ಕೊಪ್ಪಳ (ಆ.12): ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ಏಕೆ ರಾಜೀನಾಮೆ ನೀಡಬೇಕು. ಅವರೇನು ಅಪರಾಧಿಗಳಲ್ಲ, ಬರಿ ಆರೋಪಿ ಅಷ್ಟೇ ಎಂದು ಸಚಿವ ಶಿವರಾಜ ತಂಗಡಗಿ ಪ್ರಶ್ನೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಯಾಕೆ ಹೋರಾಟ ಮಾಡುತ್ತಾರೆ. ಅವರಲ್ಲಿ ಎಷ್ಟು ನಾಯಕರು ಬೇಲ್ ಮೇಲೆ ಇಲ್ಲ ಎಂದು ಕುಟುಕಿದರು.
ಗಂಗಾವತಿ ಶಾಸಕ ಜನಾರ್ದನರೆಡ್ಡಿ ಅವರಿಗೆ ಈ ಕುರಿತು ಪ್ರಶ್ನೆ ಮಾಡುವ ಅಧಿಕಾರವೇ ಇಲ್ಲ. ಅವರೇ ಯಾವ ಯಾವ ಕೇಸ್ನಲ್ಲಿದ್ದಾರೆ ಎನ್ನುವುದು ಗೊತ್ತಿಲ್ಲವೇ, ಅದಿರು ಹಗರಣ ಬಗ್ಗೆ ಜನರಿಗೆ ಗೊತ್ತಿಲ್ಲವೇ ಎಂದರು.
ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ: ಈಗ ನಾನು ಏಟು ತಿಂದ ಹುಲಿ, ಬಿಜೆಪಿ ಆರೋಪಕ್ಕೆ ಉತ್ತರಿಸುವೆ -ನಾಗೇಂದ್ರ
ಬಿಜೆಪಿಯವರು ತಾವು ಮಾಡಿದ್ದೆಲ್ಲ ಒಳ್ಳೆಯದು, ಕಾಂಗ್ರೆಸ್ ನವರು ಮಾಡಿದರೆ ಕೆಟ್ಟದ್ದಾ? ಬಿಜೆಪಿಯವರು ರಾಮರಾಮ ಎಂದು ರಾಮಮಂದಿರ ನಿರ್ಮಾಣ ಮಾಡಿ ರಾಮನ ಹುಂಡಿ ಹೊಡೆದರಲ್ಲ, ಇದಕ್ಕೆ ಏನು ಹೇಳುತ್ತಾರೆ ಎಂದರು.
ಇದನ್ನೂ ಓದಿ: B Nagendra: ಕೋರ್ಟ್ ಷರತ್ತು ಮೀರಿ ನಾಗೇಂದ್ರ ದಿಲ್ಲಿ ಭೇಟಿ: ಇಡಿ ತನಿಖೆ, ಸಾಕ್ಷ್ಯ ಸಿಕ್ಕರೆ ಏನಾಗುತ್ತೆ?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.