ಲೋಕಸಭಾ ಚುನಾವಣೆ 2024: ಪ್ರಿಯಾಂಕಾ ವಿರುದ್ಧ ಸೋದರ ವರುಣ್ ಕಣಕ್ಕೆ?

Published : Apr 21, 2024, 06:54 AM IST
ಲೋಕಸಭಾ ಚುನಾವಣೆ 2024: ಪ್ರಿಯಾಂಕಾ ವಿರುದ್ಧ ಸೋದರ ವರುಣ್ ಕಣಕ್ಕೆ?

ಸಾರಾಂಶ

ಸೋನಿಯಾ ಗಾಂಧಿ ಪ್ರತಿನಿಧಿಸುತ್ತಿದ್ದ ರಾಯ್‌ಬರೇಲಿಯಿಂದ ಈ ಬಾರಿ ಪ್ರಿಯಾಂಕಾ ಕಣಕ್ಕೆ ಇಳಿಯುವುದು ಬಹುತೇಕ ಖಚಿತವಾಗಿದೆ. ಅಲ್ಲಿ ಪ್ರಿಯಾಂಕಾ ವಿರುದ್ಧ ಕಠಿಣ ಪ್ರತಿಸ್ಪರ್ಧಿ ಹಾಕಿದರೆ ಪ್ರಿಯಾಂಕನ್ನು ಹೆಚ್ಚಿನ ಕಡೆಗೆ ಪ್ರಚಾರಕ್ಕೆ ತೆರಳದಂತೆ ಕಟ್ಟಿಹಾಕಬಹುದು ಎಂಬುದು ಬಿಜೆಪಿ ಲೆಕ್ಕಾಚಾರ. 

ಲಖನೌ(ಏ.21):  ಪೀಲೀಭೀತ್‌ ಟಿಕೆಟ್‌ ವಂಚಿತರಾದ ಬಿಜೆಪಿ ಯುವನಾಯಕ ವರುಣ್‌ ಗಾಂಧಿ ಅವರನ್ನು ಉತ್ತರಪ್ರದೇಶದ ರಾಯ್‌ಬರೇಲಿಯಿಂದ ಕಣಕ್ಕೆ ಇಳಿಸುವ ಬಗ್ಗೆ ಬಿಜೆಪಿ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ.

ಸೋನಿಯಾ ಗಾಂಧಿ ಪ್ರತಿನಿಧಿಸುತ್ತಿದ್ದ ರಾಯ್‌ಬರೇಲಿಯಿಂದ ಈ ಬಾರಿ ಪ್ರಿಯಾಂಕಾ ಕಣಕ್ಕೆ ಇಳಿಯುವುದು ಬಹುತೇಕ ಖಚಿತವಾಗಿದೆ. ಅಲ್ಲಿ ಪ್ರಿಯಾಂಕಾ ವಿರುದ್ಧ ಕಠಿಣ ಪ್ರತಿಸ್ಪರ್ಧಿ ಹಾಕಿದರೆ ಪ್ರಿಯಾಂಕನ್ನು ಹೆಚ್ಚಿನ ಕಡೆಗೆ ಪ್ರಚಾರಕ್ಕೆ ತೆರಳದಂತೆ ಕಟ್ಟಿಹಾಕಬಹುದು ಎಂಬುದು ಬಿಜೆಪಿ ಲೆಕ್ಕಾಚಾರ. ಜೊತೆಗೆ ಕಳೆದ ವರ್ಷ ಅಮೇಠಿಯಲ್ಲಿ ರಾಹುಲ್‌ರನ್ನು ಸೋಲಿಸಿದಂತೆ ಈ ವರ್ಷ ಪ್ರಿಯಾಂಕಾರನ್ನು ಸೋಲಿಸಿದರೆ ಅದು ಕಾಂಗ್ರೆಸ್‌ ಮತ್ತು ಗಾಂಧೀ ಕುಟುಂಬ ಎರಡಕ್ಕೂ ದೊಡ್ಡ ಪೆಟ್ಟು ನೀಡಿದಂತೆ ಆಗಲಿದೆ. ಇದೇ ಕಾರಣಕ್ಕಾಗಿ ವರುಣ್‌ ಹೆಸರನ್ನು ಗಂಭೀರವಾಗಿ ಪರಿಶೀಲಿಸಲಾಗುತ್ತಿದೆ ಎನ್ನಲಾಗಿದೆ.

400 ಸೀಟಿನ ಭವಿಷ್ಯ ನುಡಿಯಲು ಬಿಜೆಪಿಯವರೇನು ಜ್ಯೋತಿಷಿಗಳೇ?: ಪ್ರಿಯಾಂಕಾ ಗಾಂಧಿ

ಕೇಂದ್ರ ಸರ್ಕಾರ ಮತ್ತು ಯುಪಿ ಸಿಎಂ ಯೋಗಿ ಸರ್ಕಾರವನ್ನು ಪದೇ ಪದೇ ಟೀಕಿಸಿದ ಕಾರಣಕ್ಕಾಗಿ ವರುಣ್‌ಗೆ ಪೀಲಿಭೀತ್ ಟಿಕೆಟ್‌ ತಪ್ಪಿತ್ತು ಎನ್ನಲಾಗಿತ್ತು. ಆದರೆ ಅವರ ತಾಯಿ ಮನೇಕಾ ಗಾಂಧಿಗೆ ಪಕ್ಷ ಟಿಕೆಟ್‌ ನೀಡಿತ್ತು. ಪುತ್ರನಿಗೆ ಟಿಕೆಟ್‌ ತಪ್ಪಿದ ಬಗ್ಗೆ ಆತನನ್ನೇ ಕೇಳಿ ಎಂದಷ್ಟೇ ಮನೇಕಾ ಹೇಳಿದ್ದರು. ಇನ್ನೊಂದೆಡೆ ತಮಗೆ ಟಿಕೆಟ್‌ ಕೈತಪ್ಪಿದ ಬಗ್ಗೆ ಎಲ್ಲೂ ವರುಣ್‌ ಪಕ್ಷದ ಬಗ್ಗೆ ಅಥವಾ ಪಕ್ಷದ ನಾಯಕರ ಬಗ್ಗೆ ಹೇಳಿಕೆ ನೀಡಿಲ್ಲ.

ಹೀಗಾಗಿ ಅವರನ್ನು ಪ್ರಿಯಾಂಕಾ ವಿರುದ್ಧ ಕಣಕ್ಕಿಳಿಸಲು ಪಕ್ಷ ಉದ್ದೇಶ ಹೊಂದಿರಬಹುದು ಎಂದು ಮೂಲಗಳು ತಿಳಿಸಿವೆ. ಬಿಜೆಪಿ ಟಿಕಟ್‌ ತಪ್ಪಿದ ಬಳಿಕ ವರುಣ್‌ ಕಾಂಗ್ರೆಸ್‌ ಅಥವಾ ಸಮಾಜವಾದಿ ಪಕ್ಷ ಸೇರುತ್ತಾರೆ ಎಂದು ಊಹಾಪೋಹ ಹಬ್ಬಿತ್ತಾದರೂ ಅಂಥ ಯಾವುದೇ ಬೆಳವಣಿ ನಡೆದಿಲ್ಲ. ಹೀಗಾಗಿ ರಾಯ್‌ಬರೇಲಿ ಕ್ಷೇತ್ರ ಇದೀಗ ಸಾಕಷ್ಟು ಕುತೂಕಲ ಕೆರಳಿಸಿದೆ. ಒಂದು ವೇಳೆ ಬಿಜೆಪಿ ವರುಣ್‌ಗೆ ಟಿಕೆಟ್‌ ನೀಡಿದರೆ ಅದು ಅಣ್ನ-ತಂಗಿ ನಡುವಿನ ಹೋರಾಟಕ್ಕೆ ಸಾಕ್ಷಿಯಾಗಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಲೋಕಸಭೆಯಲ್ಲಿ ಮತಚೋರಿ ಕದನ : ಕೈ ಮತಗಳವಿಂದ ಅಂಬೇಡ್ಕರ್‌ಗೆ ಸೋಲು-ಬಿಜೆಪಿ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ ಅಗತ್ಯ: ಛಲವಾದಿ ನಾರಾಯಣಸ್ವಾಮಿ