ವೀರಪ್ಪನ್‌ ಪುತ್ರಿಗೆ ಬಿಜೆಪಿಯಿಂದ ಹೊಸ ಹುದ್ದೆ!

Published : Jul 16, 2020, 10:51 AM ISTUpdated : Jul 16, 2020, 11:31 AM IST
ವೀರಪ್ಪನ್‌ ಪುತ್ರಿಗೆ ಬಿಜೆಪಿಯಿಂದ ಹೊಸ ಹುದ್ದೆ!

ಸಾರಾಂಶ

ಕಾಡುಗಳ್ಳ ವೀರಪ್ಪನ್‌ನ ಪುತ್ರಿ ವಿದ್ಯಾರಾಣಿ| ವೀರಪ್ಪನ್‌ ಪುತ್ರಿಗೆ ತಮಿಳ್ನಾಡು ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷೆ ಹುದ್ದೆ| ಕಳೆದ ವರ್ಷವಷ್ಟೇ ವಿದ್ಯಾರಾಣಿ ಬಿಜೆಪಿ ಸೇರ್ಪಡೆಯಾಗಿದ್ದರು

ಚೆನ್ನೈ(ಜು.16): ಕಾಡುಗಳ್ಳ ವೀರಪ್ಪನ್‌ನ ಪುತ್ರಿ ವಿದ್ಯಾರಾಣಿಯನ್ನು ತಮಿಳುನಾಡು ರಾಜ್ಯ ಬಿಜೆಪಿ ಯುವ ಮೋರ್ಚಾದ ಉಪಾಧ್ಯಕ್ಷರಾಗಿ ನೇಮಿಸಲಾಗಿದೆ. ಕಳೆದ ವರ್ಷವಷ್ಟೇ ವಿದ್ಯಾರಾಣಿ ಬಿಜೆಪಿ ಸೇರ್ಪಡೆಯಾಗಿದ್ದರು.

ಇನ್ನು ತಮಿಳುನಾಡು ಮಾಜಿ ಸಿಎಂ ಎಂಜಿಆರ್‌ ಅವರ ದತ್ತುಪುತ್ರಿ ಗೀತಾ, ನಟ ರಜನೀಕಾಂತ್‌ರ ಅಳಿಯ ಧನುಷ್‌ ಅವರ ತಂದೆ ಕಸ್ತೂರಿ ರಾಜಾ ಅವರಿಗೂ ರಾಜ್ಯ ಕಾರ್ಯಕಾರಿಣಿಯಲ್ಲಿ ವಿವಿಧ ಹುದ್ದೆಗಳನ್ನು ನೀಡಲಾಗಿದೆ.

ದಂತಚೋರ ವೀರಪ್ಪನ್ ಪುತ್ರಿ ವಿದ್ಯಾರಾಣಿ ಬಿಜೆಪಿಗೆ ಸೇರ್ಪಡೆ!

ಇದೇ ವರ್ಷದ ಮಾರ್ಚ್‌ ತಿಂಗಳಿನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿರುವ ಎಲ್‌. ಮುರುಗನ್‌ ಅವರು ಮುಂದಿನ ವರ್ಷದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಸಜ್ಜುಗೊಳಿಸುವ ಗುರಿ ಹೊಂದಿದ್ದಾರೆ. ಇದರ ಭಾಗವಾಗಿ ಪಕ್ಷದ ಬಲವರ್ಧನೆಗಾಗಿ ಈ ನೇಮಕ ನಡೆದಿದೆ ಎಂದು ತಿಳಿದುಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಖ್ಯಮಂತ್ರಿ ಅಧಿಕಾರ ಹಸ್ತಾಂತರದ ಬಗ್ಗೆ ನಮಗೆ ಏನೂ ಗೊತ್ತಿಲ್ಲ: ಸಚಿವ ರಾಮಲಿಂಗಾರೆಡ್ಡಿ
ಡಿಕೆ ಶಿವಕುಮಾರ್‌ಗೆ ಕೇಂದ್ರ ನಾಯಕತ್ವ ಸ್ಥಾನ : ಕಾಂಗ್ರೆಸ್‌ನಲ್ಲಿ ಕೂಗು