ಪರಿಷತ್‌ ಚುನಾವಣೆ: 1224 ಕೋಟಿ ರು. ಆಸ್ತಿ ಒಡೆಯ MTB ನಾಗರಾಜ್‌!

Kannadaprabha News   | Asianet News
Published : Jun 19, 2020, 10:33 AM IST
ಪರಿಷತ್‌ ಚುನಾವಣೆ: 1224 ಕೋಟಿ ರು. ಆಸ್ತಿ ಒಡೆಯ MTB ನಾಗರಾಜ್‌!

ಸಾರಾಂಶ

ವಿಧಾನಪರಿಷತ್‌ ಅಭ್ಯರ್ಥಿಗಳಲ್ಲೇ ಅತಿ ಶ್ರೀಮಂತ ಎಂ.ಟಿ.ಬಿ.ನಾಗರಾಜ್‌| ಉಪಚುನಾವಣೆಯಲ್ಲಿ 1200 ಕೋಟಿ ಆಸ್ತಿ ಘೋಷಿಸಿದ್ದ ಮಾಜಿ ಸಚಿವ ಎಂ.ಟಿ.ಬಿ| ಇದೀದ ಆಸ್ತಿಯಲ್ಲಿ 24 ಕೋಟಿ ರೂ. ಏರಿಕೆ|  

ಬೆಂಗಳೂರು(ಜೂ.19):  ವಿಧಾನಪರಿಷತ್‌ ಚುನಾವಣೆಗೆ ನಾಮಪತ್ರ ಸಲ್ಲಿಸಿರುವವರ ಪೈಕಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಎಂ.ಟಿ.ಬಿ.ನಾಗರಾಜ್‌ ಅತಿ ಶ್ರೀಮಂತರಾಗಿದ್ದು, 1224 ಕೋಟಿ ರು. ಗಿಂತ ಹೆಚ್ಚು ಆಸ್ತಿಯ ಒಡೆಯರಾಗಿದ್ದಾರೆ. 2019ರ ವಿಧಾನಸಭೆ ಉಪ ಚುನಾವಣೆಯಲ್ಲಿ ಇವರು ಸುಮಾರು 1200 ಕೋಟಿ ರು. ಆಸ್ತಿ ಘೋಷಿಸಿಕೊಂಡಿದ್ದರು. ಈಗ ಆ ಆಸ್ತಿಯಲ್ಲಿ ಕೊಂಚ ಏರಿಕೆಯಾಗಿದೆ.

ಲಕ್ಷಾಂತರ ರು. ಮೌಲ್ಯದ ಡೈಮೆಂಡ್‌, ಪ್ಲಾಟಿನಂ ಸೇರಿದಂತೆ ಅಪಾರ ಪ್ರಮಾಣದ ಚಿನ್ನಾಭರಣಗಳನ್ನು ಹೊಂದಿರುವುದು ಚುನಾವಣಾಧಿಕಾರಿಗೆ ಸಲ್ಲಿಸಿರುವ ಆಸ್ತಿ ವಿವರದಲ್ಲಿ ಮಾಹಿತಿ ನೀಡಿದ್ದಾರೆ. ನಾಗರಾಜ್‌ ಅವರ ಹೆಸರಲ್ಲಿ 884 ಕೋಟಿ ರು. ಗಿಂತ ಹೆಚ್ಚು ಆಸ್ತಿ ಇದ್ದು, ಪತ್ನಿ ಶಾಂತಕುಮಾರಿ ಹೆಸರಲ್ಲಿ 331 ಕೋಟಿ ರು.ಗಿಂತ ಹೆಚ್ಚು ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ನಾಗರಾಜ್‌ ಹೆಸರಲ್ಲಿ 461 ಕೋಟಿ ರು. ಮೌಲ್ಯದ ಚರಾಸ್ತಿ ಮತ್ತು 416 ಕೋಟಿ ರು. ಮೌಲ್ಯದ ಸ್ಥಿರಾಸ್ತಿ ಇದೆ. ಪತ್ನಿಯ ಹೆಸರಲ್ಲಿ 160 ಕೋಟಿ ರು. ಮೌಲ್ಯದ ಚರಾಸ್ತಿ ಮತ್ತು 179 ಕೋಟಿ ರು. ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ನಾಗರಾಜ್‌ ಅವರು 52.75 ಕೋಟಿ ರು. ಸಾಲ ಹೊಂದ್ದಿದರೆ, ಪತ್ನಿ ಹೆಸರಲ್ಲಿ 1.97 ಕೋಟಿ ರು. ಸಾಲ ಇದೆ ಎಂದು ಆಸ್ತಿ ವಿವರದಲ್ಲಿ ಉಲ್ಲೇಖಿಸಲಾಗಿದೆ.

ಪರಿಷತ್‌ ಚುನಾವಣೆ: ಬಿಜೆಪಿ ಸರ್ಕಾರದ ಅಸ್ತಿತ್ವಕ್ಕೆ ಕಾರಣರಾದವರಿಗೆ ಟಿಕೆಟ್‌, ಸಚಿವ ಪಾಟೀಲ್‌

ನಾಗರಾಜ್‌ ಅವರು 2.23 ಕೋಟಿ ರು. ಮೌಲ್ಯದ ಡೈಮೆಂಡ್‌, ಪ್ಲಾಟಿನಂ ಸೇರಿದಂತೆ ಚಿನ್ನಾಭರಣಗಳನ್ನು ಹೊಂದಿದ್ದು, ಪತ್ನಿಯ ಬಳಿ 1.48 ಕೋಟಿ ರು. ಮೌಲ್ಯದ ಡೈಮೆಂಡ್‌, ಪ್ಲಾಟಿನಂ ಸೇರಿದಂತೆ ಚಿನ್ನಾಭರಣ ಇದೆ. ನಾಗರಾಜ್‌ ಬಳಿ 32.60 ಲಕ್ಷ ರು. ನಗದು ಇದ್ದರೆ, ಪತ್ನಿ ಬಳಿಕ 45.60 ಲಕ್ಷ ರು. ನಗದು ಇದೆ. 2.48 ಕೋಟಿ ರು. ಮೌಲ್ಯದ ಐದು ಕಾರ್‌ಗಳನ್ನು ಹೊಂದಿದ್ದಾರೆ. ಈ ಪೈಕಿ 51.50 ಲಕ್ಷ ರು. ಮೌಲ್ಯದ ಲ್ಯಾಂಡ್‌ ರೋವರ್‌, 96.12 ಲಕ್ಷ ರು. ಮೌಲ್ಯದ ಮರ್ಸಿಡೀಸ್‌ ಬೆನ್ಜ್‌ ಕಾರ್‌, 29 ಲಕ್ಷ ರು. ಮೌಲ್ಯದ ಫಾರ್ಚೂನರ್‌ ದುಬಾರಿ ಮೌಲ್ಯದ ಕಾರುಗಳನ್ನು ಹೊಂದಿರುವ ಮಾಹಿತಿ ನೀಡಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ