ಜ.21ರಿಂದ ಬಿಜೆಪಿಯಿಂದ ವಿಜಯ ಸಂಕಲ್ಪ ಅಭಿಯಾನ

Published : Jan 17, 2023, 11:38 AM ISTUpdated : Jan 17, 2023, 11:43 AM IST
ಜ.21ರಿಂದ ಬಿಜೆಪಿಯಿಂದ ವಿಜಯ ಸಂಕಲ್ಪ ಅಭಿಯಾನ

ಸಾರಾಂಶ

ಜ.21ರಿಂದ ಬಿಜೆಪಿಯಿಂದ ವಿಜಯ ಸಂಕಲ್ಪ ಅಭಿಯಾನ ಸಿಂದಗಿಯಲ್ಲಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಚಾಲನೆ ವಿಧಾನಸಭೆ ಚುನಾವಣೆಗೆ ಆಡಳಿತ ಪಕ್ಷ ತಯಾರಿ

ಬೆಂಗಳೂರು (ಜ.17) : ಮುಂಬರುವ ವಿಧಾನಸಭಾ ಚುನಾವಣೆಗೆ ತಾಲೀಮು ಆರಂಭಿಸಿರುವ ಆಡಳಿತಾರೂಢ ಬಿಜೆಪಿ, ಜ.21ರಿಂದ 29ರವರೆಗೆ ವಿಜಯ ಸಂಕಲ್ಪ ಅಭಿಯಾನ ಹಮ್ಮಿಕೊಳ್ಳಲು ನಿರ್ಧರಿಸಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿಜಯಪುರದ ಸಿಂದಗಿಯಲ್ಲಿ ಈ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ… ಮತ್ತಿತರ ರಾಜ್ಯ ನಾಯಕರು ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಭಿಯಾನದ ರಾಜ್ಯ ಸಂಚಾಲಕ ಮತ್ತು ರಾಜ್ಯದ ಉನ್ನತ ಶಿಕ್ಷಣ ಸಚಿವ ಸಿ.ಎನ್‌.ಅಶ್ವತ್ಥನಾರಾಯಣ ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಬಿಜೆಪಿಯಿಂದ ವಿಜಯ್ ಸಂಕಲ್ಪ ಯಾತ್ರೆ: ಸಂಘಟನೆ ಬಲಗೊಳಿಸಲು ಕಸರತ್ತು

ಸಾಧನೆ ಮಾಹಿತಿ:

ಅಭಿಯಾನದ ಅಂಗವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆ, ಕೊಡುಗೆ, ಕಾರ್ಯಕ್ರಮಗಳ ಕುರಿತು ಕರಪತ್ರಗಳನ್ನು ಹಂಚಿಕೆ ಮಾಡಲಾಗುವುದು. ಎರಡು ಕೋಟಿಗಿಂತ ಹೆಚ್ಚು ಮತದಾರರ ಸಂಪರ್ಕ ಮಾಡಿ, ಅವರ ಮನೆಮನೆಗೆ ತೆರಳಿ ಕರಪತ್ರ ಹಂಚಲಿದ್ದೇವೆ. ಫಲಾನುಭವಿಗಳನ್ನು ಮಾತನಾಡಿಸಿ ಒಂದು ಕೋಟಿಗಿಂತ ಹೆಚ್ಚು ಕುಟುಂಬಗಳನ್ನು ಸಂಪರ್ಕಿಸಲಿದ್ದೇವೆ. ಬಿಜೆಪಿ ಸರಕಾರಗಳ ಯೋಜನೆಗಳಿಂದ ಈ ಕುಟುಂಬಗಳ ಸಬಲೀಕರಣ ಆದುದನ್ನು ತಿಳಿಸಲಿದ್ದೇವೆ. ವಾಹನಗಳ ಮೇಲೆ ಸ್ಟಿಕರ್‌ ಅಂಟಿಸುವ ಕೆಲಸವೂ ನಡೆಯಲಿದೆ. ಕನಿಷ್ಠ ಮೂರು ಕೋಟಿ ಸ್ಟಿಕರ್‌ಗಳನ್ನು ಹಂಚಲಾಗುವುದು. ಕಿಸಾನ್‌ ಸಮ್ಮಾನ್‌, ಉಜ್ವಲ, ಮುದ್ರಾ ಸೇರಿದಂತೆ ನಾವು ಜಾರಿಗೊಳಿಸಿದ ಹತ್ತಾರು ಕಾರ್ಯಕ್ರಮಗಳ ಬಗ್ಗೆ ಜನಜಾಗೃತಿ ಮೂಡಿಸಲಾಗುವುದು ಎಂದು ವಿವರಿಸಿದರು.

ಇದಕ್ಕಾಗಿ ಪೂರ್ವಭಾವಿ ಸಭೆಗಳನ್ನು ಈಗಾಗಲೇ 10 ವಿಭಾಗ ಮಟ್ಟದಲ್ಲಿ ನಡೆಸಲಾಗಿದೆ. 39 ಸಂಘಟನಾತ್ಮಕ ಜಿಲ್ಲೆಗಳು, 312 ಮಂಡಲಗಳಲ್ಲಿ ಸಭೆಗಳನ್ನು ಏರ್ಪಡಿಸಿ ಸಮಿತಿಗಳನ್ನೂ ರಚಿಸಲಾಗಿದೆ. ಏಕಕಾಲದಲ್ಲಿ ಎಲ್ಲ ಬೂತ್‌ಗಳಲ್ಲೂ, ಮಂಡಲಗಳಲ್ಲೂ ಅಭಿಯಾನ ಮುಂದುವರಿಯಲಿದೆ ಎಂದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಅಭಿಯಾನದ ಸಹ ಸಂಚಾಲಕ ಸಿದ್ದರಾಜು, ರಾಜ್ಯ ಕಾರ್ಯದರ್ಶಿ ಜಗದೀಶ್‌ ಹಿರೇಮನಿ ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ದಮ್‌ ಇದ್ದರೆ ಬಿಜೆಪಿ ವಿಜಯ ಯಾತ್ರೆ ತಡೀರಿ: ಸಿಎಂ ಬೊಮ್ಮಾಯಿ

ಮಿಸ್ಡ್‌ ಕಾಲ್‌ ಅಭಿಯಾನ

ಇದೇ ವೇಳೆ ಮಿÓ್ಡ… ಕಾಲ… ಕೊಡುವ ಮೂಲಕ ಸದಸ್ಯತ್ವ ನೋಂದಣಿ ಅಭಿಯಾನವೂ ನಡೆಯಲಿದೆ. ಒಂದು ಕೋಟಿಗೂ ಹೆಚ್ಚು ಸದಸ್ಯರನ್ನು ನೋಂದಾಯಿಸುವ ಗುರಿ ಹೊಂದಿದ್ದೇವೆ. ಸಮಾಜದ ಸಮಸ್ತರನ್ನು ಪಕ್ಷದ ಜೊತೆ ಸೇರ್ಪಡೆ ಮಾಡಿ, ದೇಶ ಕಟ್ಟುವ ಕಾರ್ಯದಲ್ಲಿ ಎಲ್ಲರನ್ನೂ ಜೊತೆಗೂಡಿಸಲಾಗುವುದು. ಬಿಜೆಪಿ ನೇತೃತ್ವದ ಸರಕಾರವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲಾಗುವುದು ಎಂದು ಸಚಿವ ಅಶ್ವತ್ಥನಾರಾಯಣ ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ