ಶಾಸಕ ಸ್ಥಾನಕ್ಕಿಂದು ವಲಸಿಗ ಶಾಸಕರಲ್ಲೋರ್ವರ ರಾಜೀನಾಮೆ?

Kannadaprabha News   | Asianet News
Published : Aug 15, 2021, 07:11 AM IST
ಶಾಸಕ ಸ್ಥಾನಕ್ಕಿಂದು ವಲಸಿಗ ಶಾಸಕರಲ್ಲೋರ್ವರ ರಾಜೀನಾಮೆ?

ಸಾರಾಂಶ

ಶಾಸಕ ಸ್ಥಾನಕ್ಕಿಮದು ವಲಸಿಗ ಶಾಸಕರಲ್ಲೊರ್ವರ ರಾಜೀನಾಮೆ ರಾಜೀನಾಮೆ ನೀಡುವ ಬಗ್ಗೆ ಶುರುವಾಗಿದೆ ವದಂತಿ ಸಚಿವ ಸ್ಥಾನಕ್ಕಾಗಿ ಅಸಮಾಧಾನ ಗೊಂಡ ಮುಖಂಡ

ಹೊಸಪೇಟೆ (ಆ.15): ಪ್ರಬಲ ಖಾತೆ ಮೇಲೆ ಕಣ್ಣಿಟ್ಟಿರುವ ಸಚಿವ ಆನಂದ್‌ ಸಿಂಗ್‌ ಅವರ ಮುನಿಸು ಇನ್ನೂ ತಣ್ಣಗಾದಂತೆ ಕಾಣಿಸುತ್ತಿಲ್ಲ. 

ನಗರದಲ್ಲಿ 75ನೇ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಬೆಂಗಳೂರಿಗೆ ತೆರಳಿ ಸ್ಪೀಕರ್‌ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. 

'ನಾನು ದೆಹಲಿಗೆ ಹೋಗ್ತೀನಿ ಎಂದಿಲ್ಲ. ಹೋಗೋದು ಇಲ್ಲ. ಯಾರಿಗೆ ಹೇಳಬೇಕು, ಹೇಳಿದ್ದಾಗಿದೆ'

ಈಗಾಗಲೇ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದರೂ ಮುಖ್ಯಮಂತ್ರಿಗಳು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಹೀಗಾಗಿ ಶಾಸಕ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸುವ ನಿರ್ಧಾರಕ್ಕೆ ಆನಂದ್‌ ಸಿಂಗ್‌ ಬಂದಿದ್ದಾರೆ ಎಂದು ಅವರ ಆಪ್ತಮೂಲಗಳು ಹೇಳುತ್ತಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಸತಿ ಯೋಜನೆಗಳಿಗೆ ಸಹಾಯಧನ ಹೆಚ್ಚಳಕ್ಕೆ ಚಿಂತನೆ: ಸಚಿವ ಜಮೀರ್‌ ಅಹಮದ್‌
ವಿದೇಶದಲ್ಲಿ ಇರುವವರಿಗೂ ಗ್ಯಾರಂಟಿ ಲಾಭ ಬಗ್ಗೆ ಸಿಎಲ್ಪೀಲಿ ಪ್ರಸ್ತಾಪ: ಸಚಿವ ಮಧು ಬಂಗಾರಪ್ಪ