
ವಿಜಯಪುರ(ಸೆ.17): ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಣ ಪಡೆದು ವಂಚಿಸಿರುವ ಆರೋಪ ಹೊತ್ತಿರುವ ಚೈತ್ರಾ ಕುಂದಾಪುರ ಅವರಿಂದ ತಾವು ಹಣ ಕೇಳಿರುವ ಆರೋಪಗಳ ಕುರಿತು ಸಂಸದ ರಮೇಶ್ ಜಿಗಜಿಣಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಕೆ ಯಾಕೆಂಬುದೇ ನನಗೆ ಗೊತ್ತಿಲ್ಲ ಎಂದು ಜಿಗಜಿಣಗಿ ಹೇಳಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಚೈತ್ರಾ ಕುಂದಾಪುರ ಯಾರು, ಆಕೆಯ ಊರು ಯಾವುದೆಂದೇ ಗೊತ್ತಿಲ್ಲ. ಟಿವಿಯಲ್ಲಿ ನೋಡಿದ ಬಳಿಕ ಆಕೆ ಬಗ್ಗೆ ಗೊತ್ತಾಗಿದೆ. ಹೀಗಾಗಿ ನಾನ್ಯಾಕೆ ಆಕೆ ಬಳಿ ಕೋಟಿ ರುಪಾಯಿ ಕೇಳಲಿ? ಆಕೆ ಬರೇ ಸುಳ್ಳು ಹೇಳುತ್ತಿದ್ದಾಳೆ. ಸಾಮಾಜಿಕ ಜಾಲತಾಣದಲ್ಲಿ ಚೈತ್ರಾ ಕುಂದಾಪುರ ಬಳಿ ನಾನು ಹಣ ಕೇಳಿದ್ದೇನೆಂಬ ಸುದ್ದಿ ಹರಿದಾಡುತ್ತಿದೆ ಎಂದು ಕಿಡಿಕಾರಿದರು.
ಚೈತ್ರಾ ಕುಂದಾಪುರ ಡೀಲ್ ಕೇಸ್: ಟಿಕೆಟ್ ವಂಚನೆ ಬಹಿರಂಗಕ್ಕೂ ಮೊದಲೇ ದೂರು ನೀಡಿದ್ದ ಹಾಲಶ್ರೀ
ಚೈತ್ರಾ ಕುಂದಾಪುರ ಅವರು ಹಿಂದೊಮ್ಮೆ ಮಾತನಾಡಿದ್ದ ವಿಡಿಯೋವೊಂದರಲ್ಲಿ ರಮೇಶ್ ಜಿಗಜಿಣಗಿ ಹೆಸರು ಪ್ರಸ್ತಾಪಿಸಿದ್ದರು ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಅವರ ಮೇಲೆ ಆರೋಪ ಕೇಳಿಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.