
ವಿಜಯಪುರ(ಮಾ.24): ನನಗೆ ಟಿಕೆಟ್ ತಪ್ಪಿಸಲು ಹಲವರು ಪ್ರಯತ್ನ ಮಾಡಿದರು. ಆದರೆ ಕೊನೆಗೆ ಹೈಕಮಾಂಡ್ ನನಗೆ ಟಿಕೆಟ್ ನೀಡಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ನನಗೆ ಟಿಕೆಟ್ ತಪ್ಪಿಸಲು ಪ್ರಯತ್ನಿಸದರೂ ಮತ್ತೆ ನನಗೆ ಟಿಕೆಟ್ ಸಿಕ್ಕಿದೆ ಎಂದಿದ್ದಾರೆ. ಇನ್ನು ಇದು ತಮ್ಮ ಕೊನೆಯ ಚುನಾವಣೆಯಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಜಿಗಜಿಣಗಿ, ನಾನು ಸಭೆಗಳಲ್ಲಿ ಈಗಾಗಲೇ ಇದು ನನ್ನ ಕೊನೆಯ ಚುನಾವಣೆ ಎಂದು ಹೇಳಿದ್ದೇನೆ. ಈ ಸಲವೇ ಟಿಕೆಟ್ ಬೇಡ ಎಂದು ನಾನು ಹಾಗೂ ನನ್ನ ಮಕ್ಕಳು ಸೇರಿ ಡಿಸೈಡ್ ಮಾಡಿದ್ದೆವು. ಆದರೆ ಹೈಕಮಾಂಡ್ ನನಗೆ ಟಿಕೆಟ್ ನೀಡಿದೆ, ನಾನು ಚುನಾವಣೆ ಮಾಡುತ್ತಿದ್ದೇನೆ. ನಾನು ಮುಂದಿನ ಬಾರಿ ಎಲೆಕ್ಷನ್ ನಿಲ್ಲೋದಿಲ್ಲ ಎಂದು ಹೇಳಿದ್ದೇನೆ. ಆದರೆ ನನಗೆ 90 ವರ್ಷವಾದರೂ ಪಕ್ಷ ಟಿಕೆಟ್ ಕೊಡ್ತಿನಿ ಎಂದ್ರೆ ಬೇಡಾ ಅನ್ನೋಕಾಗುತ್ತಾ? ಎಂದು ಪ್ರಶ್ನಿಸುವ ಮೂಲಕ ತಾವು ಮುಂದೆಯೂ ಇನ್ನೊಂದು ಬಾರಿ ನಿಲ್ಲುವ ಕುರಿತು ಸೂಚನೆ ನೀಡಿದ್ದಾರೆ. ಈ ಬಾರಿ ನಾನು ಟಿಕೆಟ್ ಘೋಷಣೆ ಬಳಿಕ ಜಿಲ್ಲೆಯಲ್ಲಿ ಸಂಚಾರ ಮಾಡುತ್ತಿದ್ದೇನೆ. ನೀವು ಬರಬೇಡಿ ನಾವು ಮತ ಹಾಕುತ್ತೇವೆ ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ. ಆದರೂ ಚುನಾವಣೆಗಾಗಿ ಜಿಲ್ಲೆಯಲ್ಲಿ ಪ್ರಚಾರದಲ್ಲಿ ತೊಡಗಿದ್ದೇನೆ. ಬಿಜೆಪಿ ಮುಖಂಡರು ನಡೆಸುವ ಸಭೆಗಳಲ್ಲಿ ಭಾಗವಹಿಸುತ್ತಿದ್ದೇನೆ ಎಂದರು.
ನನಗೆ ಟಿಕೆಟ್ ಸಿಕ್ಕಿದ್ದು ಕಾರ್ಯಕರ್ತರಿಗೆ ಸಿಕ್ಕಂತೆ: ವಿಜಯಪುರ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಹರ್ಷ
ಈಶ್ವರಪ್ಪ ಸಂಘ ಪರಿವಾರದಿಂದ ಬಂದವರು, ನಾನು ಸಂಘ ಪರಿವಾರದಿಂದ ಬಂದವನಲ್ಲ. ರಾಮಕೃಷ್ಣ ಹೆಗಡೆ, ಜೆ.ಹೆಚ್.ಪಟೇಲರ ಗರಡಿಯಲ್ಲಿ ಬೆಳೆದವನು. ನಾನು ಸಂಘ ಪರಿವಾರದ ಬಗ್ಗೆ ಈಶ್ವರಪ್ಪ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.