ಲೋಕಸಭೆ ಚುನಾವಣೆ 2024: ಎಂ.ಬಿ.ಪಾಟೀಲಲ್‌ಗೆ ನನ್ನ ಟಿಕೆಟ್‌ ಬಗ್ಗೆ ಚಿಂತೆ ಬೇಡ, ಜಿಗಜಿಣಗಿ

Published : Sep 07, 2023, 03:13 PM IST
ಲೋಕಸಭೆ ಚುನಾವಣೆ 2024: ಎಂ.ಬಿ.ಪಾಟೀಲಲ್‌ಗೆ ನನ್ನ ಟಿಕೆಟ್‌ ಬಗ್ಗೆ ಚಿಂತೆ ಬೇಡ, ಜಿಗಜಿಣಗಿ

ಸಾರಾಂಶ

ನನಗೆ ಟಿಕೆಟ್ ಸಿಗುವುದು ಬಿಡುವುದು ಎಂ.ಬಿ.ಪಾಟೀಲರಿಗೆ ಸಂಬಂಧಿಸಿದ ವಿಷಯವಲ್ಲ. ಅವರು ನಮ್ಮ ಪಕ್ಷದಲ್ಲಿಲ್ಲ. ಬೇಕಿದ್ದರೆ ನಮ್ಮ ಪಕ್ಷಕ್ಕೆ ಬಂದು ಈ ಮಾತು ಹೇಳಲಿ. ಆಗ ನೋಡೋಣ. ನಾನೇನೂ ಪಾಟೀಲರಿಗೆ ಬಿಜೆಪಿಗೆ ಆಹ್ವಾನ ನೀಡುತ್ತಿಲ್ಲ. ನಮ್ಮಲ್ಲೇನೂ ನಾಯಕರ ಕೊರತೆ ಇಲ್ಲ ಎಂದ ಸಂಸದ ರಮೇಶ ಜಿಗಜಿಣಗಿ 

ವಿಜಯಪುರ(ಸೆ.05):  ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನನಗೆ ಟಿಕೆಟ್ ಸಿಗುವ ಇಲ್ಲವೆ ಬಿಡುವ ಚಿಂತೆ ಸಚಿವ ಎಂ.ಬಿ.ಪಾಟೀಲರಿಗೆ ಏಕಿರಬೇಕು? ಅವರೇನು ನಮ್ಮ ಪಕ್ಷದವರಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಕಿಡಿಕಾರಿದರು.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ರಮೇಶ ಜಿಗಜಿಣಗಿ ಅವರಿಗೆ ಟಿಕೆಟ್ ಸಿಗುವುದಿಲ್ಲ ಎಂದು ಎಂ.ಬಿ.ಪಾಟೀಲರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನನಗೆ ಟಿಕೆಟ್ ಸಿಗುವುದು ಬಿಡುವುದು ಎಂ.ಬಿ.ಪಾಟೀಲರಿಗೆ ಸಂಬಂಧಿಸಿದ ವಿಷಯವಲ್ಲ. ಅವರು ನಮ್ಮ ಪಕ್ಷದಲ್ಲಿಲ್ಲ. ಬೇಕಿದ್ದರೆ ನಮ್ಮ ಪಕ್ಷಕ್ಕೆ ಬಂದು ಈ ಮಾತು ಹೇಳಲಿ. ಆಗ ನೋಡೋಣ. ನಾನೇನೂ ಪಾಟೀಲರಿಗೆ ಬಿಜೆಪಿಗೆ ಆಹ್ವಾನ ನೀಡುತ್ತಿಲ್ಲ. ನಮ್ಮಲ್ಲೇನೂ ನಾಯಕರ ಕೊರತೆ ಇಲ್ಲ ಎಂದರು.

ವಿಜಯಪುರದಲ್ಲಿ ಹೊಟೇಲ್‌ ಉದ್ಯಮಿಯನ್ನ ಯಾಮಾರಿಸಿದ ಸೈಬರ್‌ ಕಳ್ಳರು: 8 ಅಕೌಂಟ್‌ಗೆ ಕನ್ನ!

ನಾನು ಕಾಂಗ್ರೆಸ್ ವಿರೋಧಿಯಾಗಿಯೇ ಜನ್ಮತಾಳಿದ್ದೇನೆ. ಕಳೆದ 45ವರ್ಷಗಳಿಂದ ಕಾಂಗ್ರೆಸ್ ವಿರೋಧಿಯಾಗಿಯೇ ರಾಜಕಾರಣ ಮಾಡಿದ್ದೇನೆ. ಈಗ ಪಕ್ಷ ಬದಲಾಯಿಸಿ ರಾಜಕಾರಣ ಮಾಡುವ ಔಚಿತ್ಯ ನನಗಿಲ್ಲ. ಕಾಂಗ್ರೆಸ್‌ಗೆ ಹೋಗುವ ಪ್ರಶ್ನೆಯೇ ಇಲ್ಲ. ಬಿಜೆಪಿ ಟಿಕೆಟ್ ನನಗೇ ಸಿಗುವುದು ಖಾತ್ರಿಯಾಗಿದೆ. ನನಗೂ ಸಿದ್ಧತೆ ಮಾಡಿಕೊಳ್ಳುವಂತೆ ಪಕ್ಷದಿಂದ ಸೂಚನೆ ದೊರೆತಿದೆ. ಪಕ್ಷದ ಹೈಕಮಾಂಡ್‌ ಟಿಕೆಟ್ ನೀಡಿದರೆ ನಾನು ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ. ಇಲ್ಲವಾದರೆ ಮನೆಯಲ್ಲಿಯೇ ಇರುತ್ತೇನೆ ಎಂದು ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ