
ಮಂಡಿ (ಹಿಮಾಚಲ ಪ್ರದೇಶ): ಬಾಲಿವುಡ್ ನಟಿ ಕಂಗನಾ ರಾಣಾವತ್ ಅವರು ಸ್ಪರ್ಧಿಸಿರುವ ಮಂಡಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್, ಹಿಮಾಚಲ ಪ್ರದೇಶದ ಯುವ ಸಚಿವರಾಗಿ ಹೆಸರು ಗಳಿಸಿರುವ ವಿಕ್ರಮಾದಿತ್ಯ ಸಿಂಗ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ದಟ್ಟವಾಗಿದೆ.
ಈ ಕುರಿತು ಅವರ ತಾಯಿ ಪ್ರತಿಭಾ ಸಿಂಗ್ ಸುಳಿವು ನೀಡಿದ್ದು, ಪಕ್ಷದ ಹಿರಿಯ ನಾಯಕರಲ್ಲಿ ವಿಕ್ರಮಾದಿತ್ಯ ಸಿಂಗ್ ಸ್ಪರ್ಧೆ ಕುರಿತು ಚರ್ಚಿಸಲಾಗಿದೆ. ಶೀಘ್ರದಲ್ಲಿ ಈ ಕುರಿತು ಪಕ್ಷದಿಂದ ಅಧಿಕೃತ ಘೋಷಣೆ ಹೊರಬೀಳಲಿದೆ ಎಂಬುದಾಗಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ. ಈವರೆಗೆ ಕ್ಷೇತ್ರವನ್ನು ಪ್ರತಿಭಾ ಪ್ರತಿನಿಧಿಸುತ್ತಿದ್ದರು.
ಇದಕ್ಕೂ ಮೊದಲು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನೇತ್ ಅವರು ಮಂಡಿಯಲ್ಲಿ ಕಂಗನಾರ ರೇಟ್ ಎಷ್ಟು ಎಂದು ಕೀಳಾಗಿ ಕೇಳುವ ಮೂಲಕ ವಿವಾದ ಸೃಷ್ಟಿಸಿದ್ದರು. ಮಂಡಿ ಲೋಕಸಭಾ ಕ್ಷೇತ್ರದಲ್ಲಿ ಜೂ.1ರಂದು ಚುನಾವಣೆ ನಡೆಯಲಿದೆ.
ಕಂಗನಾ ವಿರುದ್ಧ ಮಾತನಾಡಿ ನಾಯಕಿ 'ಕೈ'ಸುಟ್ಟುಕೊಂಡ ಬೆನ್ನಲ್ಲೇ ನಾಯಕನಿಂದ ಗೋಮಾಂಸದ ಪೋಸ್ಟ್: ನಟಿ ತಿರುಗೇಟು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.