ಐಟಿ ಇಡಿ ದಾಳಿಗೆ ಹೆದರಿ ಜಗದೀಶ ಶೆಟ್ಟರ್ ಬಿಜೆಪಿಗೆ ಸೇರಿದ್ರಾ? ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿ ಹೇಳಿದ್ದೇನು?

Published : Jan 28, 2024, 01:31 PM IST
ಐಟಿ ಇಡಿ ದಾಳಿಗೆ ಹೆದರಿ ಜಗದೀಶ ಶೆಟ್ಟರ್ ಬಿಜೆಪಿಗೆ ಸೇರಿದ್ರಾ? ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿ ಹೇಳಿದ್ದೇನು?

ಸಾರಾಂಶ

ಜಗದೀಶ ಶೆಟ್ಟರ್ ಇಡಿ ಐಟಿ ದಾಳಿಗೆ ಹೆದರಿ ಬಿಜೆಪಿಗೆ ಮರುಸೇರ್ಪಡೆಯಾಗಿದ್ದಾರೆ. ಅವರು ಬಿಜೆಪಿಗೆ ಹೋಗಿರೋದ್ರಿಂದ ನಮಗೇನೂ ಸಮಸ್ಯೆ ಆಗೊಲ್ಲ. ಯಾಕೆಂದ್ರೆ ಅವರು ವಿಧಾನಸಭಾ ಚುನಾವಣೆಯಲ್ಲೇ ಅತಿ ಹೆಚ್ಚು ಅಂತರಗಳಿಂದ ಸೋತಿದ್ರು ಎಂದು ವಿನಯ್ ಕುಲಕರ್ಣಿ ಸಹೋದರ ವಿಜಯ ಕುಲಕರ್ಣಿ ಟೀಕಿಸಿದರು.

ಹುಬ್ಬಳ್ಳಿ (ಜ.28): ಜಗದೀಶ ಶೆಟ್ಟರ್ ಇಡಿ ಐಟಿ ದಾಳಿಗೆ ಹೆದರಿ ಬಿಜೆಪಿಗೆ ಮರುಸೇರ್ಪಡೆಯಾಗಿದ್ದಾರೆ. ಅವರು ಬಿಜೆಪಿಗೆ ಹೋಗಿರೋದ್ರಿಂದ ನಮಗೇನೂ ಸಮಸ್ಯೆ ಆಗೊಲ್ಲ. ಯಾಕೆಂದ್ರೆ ಅವರು ವಿಧಾನಸಭಾ ಚುನಾವಣೆಯಲ್ಲೇ ಅತಿ ಹೆಚ್ಚು ಅಂತರಗಳಿಂದ ಸೋತಿದ್ರು ಎಂದು ವಿನಯ್ ಕುಲಕರ್ಣಿ ಸಹೋದರ ವಿಜಯ ಕುಲಕರ್ಣಿ ಟೀಕಿಸಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗದ್ದಕ್ಕೆ ಮುನಿಸಿಕೊಂಡು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಜಗದೀಶ ಶೆಟ್ಟರ್ ಇದೀಗ ಒಂಬತ್ತು ತಿಂಗಳಲ್ಲೇ ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿರೋ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಿಜಯ ಕುಲಕರ್ಣಿ. ಅವರಿಗೆ ಬಿಜೆಪಿಯಲ್ಲಿ ಗೌರವ ಸಿಗಲಿಲ್ಲ. ಕಾಂಗ್ರೆಸ್ ಕರೆತಂದು ಅವರಿಗೆ ಗೌರವಿಸಿದೆವು. ಚುನಾವಣೆಯಲ್ಲಿ ಹೀನಾಯವಾಗಿ ಸೋತರು ಅವರನ್ನು ವಿಧಾನಪರಿಷತ್‌ ಸ್ಥಾನ ಕೊಟ್ಟೆವು. ಇನ್ನೇನು ಮಾಡಬೇಕು. ಎಲ್ಲ ಅನುಭವಿಸಿ ಇದೀಗ ಬಿಜೆಪಿಗೆ ಹೋಗಿದ್ದಾರೆ. ಇದು ಹಿರಿಯರಿಗೆ ಶೋಭೆ ತರುವ ಕೆಲಸ ಅಲ್ಲ ಎಂದು ಕಿಡಿಕಾರಿದರು.

ನೀತಿಗೆಟ್ಟ ರಾಜಕಾರಣಕ್ಕೆ ಜಗದೀಶ ಶೆಟ್ಟರ್ ಉದಹಾರಣೆ; ಬಿಜೆಪಿ ಮರುಸೇರ್ಪಡೆಯಾಗಿದ್ದಕ್ಕೆ ವೀರಶೈವ ಮುಖಂಡರು ಆಕ್ರೋಶ

ವೀರಶೈವ ಮುಖಂಡರ ಆಗ್ರಹ:

ಜಗದೀಶ ಶೆಟ್ಟರ್ ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿ ಸೇರಿರುವ ಹಿನ್ನೆಲೆ ಅವರಿಗೆ ಕೊಟ್ಟಿದ್ದ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆ ಸ್ಥಾನವನ್ನು ತಮ್ಮ ಸಮುದಾಯಕ್ಕೆ ನೀಡಬೇಕು. ಲೋಕಸಭಾ ಚುನಾವಣೆಗೂ ನಮ್ಮ ಸಮುದಾಯಕ್ಕೆ ಟಿಕೆಟ್ ಕೊಡಬೇಕು. ನಿಗಮ ಮಂಡಳಿಯನ್ನು ಹಿರಿಯ ಪಕ್ಷದ ಕಾರ್ಯಕರ್ತರಿಗೆ ನೀಡಬೇಕು. ಮುಂದೆ ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆ ಭವಿಷ್ಯ ಇದೆ. ಮೋಹನ ಲಿಂಬಿಕಾಯಿ ಸೇರಿದಂತೆ ಇತರೆ ಕಾಂಗ್ರೆಸ್ ಮುಖಂಡರ ಆಗ್ರಹಿಸಿದ್ದಾರೆ

ಜಗದೀಶ್ ಶೆಟ್ಟರ್ ಮರುಸೇರ್ಪಡೆಯಾದ ಬೆನ್ನಲ್ಲೇ ಲಕ್ಷ್ಮಣ್ ಸವದಿ ಬೆನ್ನುಬಿದ್ದ ಬಿಜೆಪಿ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ