ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಕೋಟ ಶ್ರೀನಿವಾಸ ಪೂಜಾರಿಗೆ ಸಮನ್ಸ್

Published : Apr 06, 2024, 12:48 PM IST
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಕೋಟ ಶ್ರೀನಿವಾಸ ಪೂಜಾರಿಗೆ ಸಮನ್ಸ್

ಸಾರಾಂಶ

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿದೆ.   

ಬೆಂಗಳೂರು (ಏ.06): ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿದೆ. ಚುನಾವಣಾ ಸಿಬ್ಬಂದಿ ದಾಖಲಿಸಿದ ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯವು ಕೋಟ ಶ್ರೀನಿವಾಸ ಪೂಜಾರಿ ಜತೆಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಪಕ್ಷದ ಮುಖಂಡ ಲಾಲಾಜಿ ಆರ್.ಮೆಂಡನ್ ಅವರಿಗೂ ಸಮನ್ಸ್‌ ಜಾರಿ ಮಾಡಲಾಗಿದ್ದು, ಬರುವ ಮೇ 27ರಂದು ಹಾಜರಾಗಿ ವಿವರಣೆ ನೀಡುವಂತೆ ನಿರ್ದೇಶನ ನೀಡಿದೆ. ಮಾ. 30ರಂದು ಕಟಪಾಡಿ ಖಾಸಗಿ ಕಾಲೇಜು ಆವರಣದಲ್ಲಿ ಚುನಾವಣಾ ಅಧಿಕಾರಿಗಳ ಅನುಮತಿ ಇಲ್ಲದೇ ಪ್ರಚಾರ ಸಭೆ ಮಾಡಿದ್ದರು. ಚುನಾವಣೆ ಸಿಬ್ಬಂದಿ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಿಸಿದ್ದರು.

ಚುನಾವಣೆ ಇಲ್ಲಿ, ಮತಯಾಚನೆ ಅಲ್ಲಿ: ಉಡುಪಿ ಮತ್ತು ದ.ಕ. ಜಿಲ್ಲೆಗಳಲ್ಲಿ ವಿಧಾನಸಭೆ ಅಥವಾ ಲೋಕಸಭಾ ಚುನಾವಣೆಯೇ ಇರಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಮತಯಾಚನೆಗೆ ಬೆಂಗಳೂರು, ಮುಂಬೈ, ಸಾಂಗ್ಲಿ ಇತ್ಯಾದಿ ಕಡೆಗೆ ಹೋಗುತ್ತಾರೆ. ಚುನಾವಣೆ ಇಲ್ಲಿ, ಮತಯಾಚನೆ ಅಲ್ಲಿ, ಇದು ಅಚ್ಚರಿಯಾದರೂ ನಿಜ. ಕಾರಣ ಉಡುಪಿ ಮತ್ತು ದ.ಕ. ಜಿಲ್ಲೆಯ ಗಣನೀಯ ಸಂಖ್ಯೆಯ ಜನರು ಈ ಮಹಾನಗರಗಳಲ್ಲಿ ಉದ್ಯೋಗಿಗಳಾಗಿದ್ದಾರೆ. ಅವರು ವರ್ಷಗಳಿಂದ ಅಲ್ಲಿದ್ದರೂ ಅವರ ಮತದಾನ ಹಕ್ಕು ಇನ್ನೂ ಊರಿನಲ್ಲಿಯೇ ಇದೆ. 

ಕಾಂಗ್ರೆಸ್‌ ಗೆಲ್ಲಿಸಿ ಸಿದ್ದರಾಮಯ್ಯ ಕೈ ಬಲಪಡಿಸಿ: ಮಾಜಿ ಸಚಿವ ಎಚ್‌.ಆಂಜನೇಯ

ಆದ್ದರಿಂದ ಚುನಾವಣೆಯ ಸಂದರ್ಭದಲ್ಲಿ ಒಂದು ದಿನದ ಮಟ್ಟಿಗಾದರೂ ಅವರು ಊರಿಗೆ ಬಂದು ತಮ್ಮ ಪರವಾಗಿ ಮತ ಚಲಾಯಿಸಿ ಎಂದು ಅಭ್ಯರ್ಥಿಗಳು ಅಲ್ಲಿಗೆ ಹೋಗಿ ಯಾಚಿಸುವುದು ಅನೇಕ ವರ್ಷಗಳಿಂದ ನಡೆದುಕೊಂಡು ಬಂದಿರುವ ಸಂಪ್ರದಾಯವಾಗಿಬಿಟ್ಟಿದೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಂತೂ ಲೋಕಸಭಾ ಅಭ್ಯರ್ಥಿಗಳ ಜೊತೆಗೆ ಉಭಯ ಜಿಲ್ಲೆಗಳು ಶಾಸಕರೂ ಕೂಡ ಮುಂಬೈ, ಬೆಂಗಳೂರಿನಲ್ಲಿರುವ ಕರಾವಳಿಗರನ್ನು ಭೇಟಿಯಾಗಿ ಮತಯಾಚಿಸುತ್ತಿದ್ದಾರೆ. ಕಾರಣ ಉಭಯ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಮತ್ತು ಬಿಜೆಪಿ ಟಫ್ ಫೈಟ್ ನಡೆಸುತ್ತಿರುವುದರಿಂದ ಒಂದೊಂದು ಮತವೂ ಗೆಲ್ಲುವ ಲೆಕ್ಕಕ್ಕೆ ಬರುತ್ತದೆ.

ಕೋರ್ಟ್‌ ಕಲಾಪ ಅಕ್ರಮ ವಿಡಿಯೋ ಪ್ರಸಾರ: ಕೇಜ್ರಿವಾಲ್‌ ಪತ್ನಿ ವಿರುದ್ಧ ದೂರು ದಾಖಲು!

ಇಂದು ಬೆಂಗಳೂರಿಗೆ ಕೋಟ-ಚೌಟ: ಉಡುಪಿ-ಚಿಕ್ಕಮಗಳೂರಿನ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮತ್ತು ದ.ಕ. ಕ್ಷೇತ್ರದ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು ಮಾ.6ರಂದು ಬೆಂಗಳೂರಿಗೆ ತೆರಳಿ ಕರಾವಳಿಗರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮಾ.7ರಂದು ಮುಂಬೈಗೆ ತೆರಳಿ ಅಲ್ಲಿ ಕರಾವಳಿಗರು ಹೆಚ್ಚಿರುವ ಕಡೆಗಳಲ್ಲಿ ಬೆಂಬಲಯಾಚಿಸಲಿದ್ದಾರೆ. ಅವರಿಗೆ ಎರಡೂ ಜಿಲ್ಲೆಗಳ ಶಾಸಕರೂ ಸಾಥ್ ನೀಡಲಿದ್ದಾರೆ. ಕಾಂಗ್ರೇಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಈಗಾಗಲೇ ಬೆಂಗಳೂರಿಗೆ ಭೇಟಿ ನೀಡಿದ್ದಾರೆ. ಮುಂಬೈಯ ಕರಾವಳಿ ನಾಯಕರ ಜೊತೆ ಮಾತುಕತೆ ನಡೆಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ