ಸ್ಪೀಕರ್‌ ಖಾದರ್‌ ಮೇಲಿನ ಆರೋಪಗಳ ಬಗ್ಗೆ ನ್ಯಾಯಾಂಗ ತನಿಖೆಯಾಗಲಿ: ಸಂಸದ ಕಾಗೇರಿ

Published : Nov 01, 2025, 06:59 AM IST
UT Khader

ಸಾರಾಂಶ

ಸ್ಪೀಕರ್‌ ಯು.ಟಿ.ಖಾದರ್‌ ಕೈಗೊಂಡಿರುವ ಕ್ರಮಗಳಲ್ಲಿ ಭ್ರಷ್ಟಾಚಾರವಾಗಿರುವ ಕುರಿತು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಈ ಕುರಿತು ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆಯಾಗಲಿ ಎಂದು ಸಂಸದ ಕಾಗೇರಿ ಪುನರುಚ್ಚರಿಸಿದ್ದಾರೆ.

ಬೆಂಗಳೂರು (ನ.01): ಸ್ಪೀಕರ್‌ ಯು.ಟಿ.ಖಾದರ್‌ ಆಡಳಿತ ಸುಧಾರಣೆ ಭಾಗವಾಗಿ ಕೈಗೊಂಡಿರುವ ಕ್ರಮಗಳಲ್ಲಿ ಭ್ರಷ್ಟಾಚಾರವಾಗಿರುವ ಕುರಿತು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಈ ಕುರಿತು ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆಯಾಗಲಿ ಎಂದು ಮಾಜಿ ಸ್ಪೀಕರ್‌, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪುನರುಚ್ಚರಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಂವಿಧಾನಬದ್ಧವಾದ ಸ್ಪೀಕರ್‌ ಸ್ಥಾನಕ್ಕೆ ವಿಶೇಷ ಗೌರವವಿದೆ. ಆದರೆ, ಕೆಲ ಪ್ರಕರಣಗಳಿಂದ ಆ ಪೀಠದ ಘನತೆ, ಗೌರವಕ್ಕೆ ಚ್ಯುತಿಯಾಗುತ್ತಿದೆ.

ಹೀಗಾಗಿ ಸ್ಪೀಕರ್ ಯು.ಟಿ.ಖಾದರ್‌ ಕೈಗೊಂಡಿರುವ ಕ್ರಮಗಳ ಕುರಿತು ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ಮಾಡಿಲಿ. ತನಿಖೆಯಲ್ಲಿ ಯು.ಟಿ.ಖಾದರ್‌ ಅವರು ಎಲ್ಲ ಆರೋಪಗಳಿಂದ ಮುಕ್ತರಾಗಲಿ. ಆ ಮೂಲಕ ಸಾರ್ವಜನಿಕ ವಲಯದಲ್ಲಿನ ಚರ್ಚೆ ಅಂತ್ಯವಾಗಲಿದೆ ಎಂದರು. ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆಗೆ ವಹಿಸಿದರೆ ತನಿಖಾ ನೇತೃತ್ವ ವಹಿಸುವ ನ್ಯಾಯಮೂರ್ತಿಗಳು ಅಪೇಕ್ಷಿಸಿದರೆ ದಾಖಲೆಗಳನ್ನು ಸಲ್ಲಿಸುವ ಬಗ್ಗೆ ಚಿಂತಿಸುತ್ತೇನೆ. ಅಭಿಪ್ರಾಯಗಳನ್ನು ಹೇಳಲು ನಮಗೆ ಸ್ವಾತಂತ್ರ್ಯವಿದೆ. ಹಾಲಿ ನ್ಯಾಯಮೂರ್ತಿಗಳಿಂದ ತನಿಖೆಯಾಗಲಿ ಎಂಬುದಷ್ಟೇ ನನ್ನ ಒತ್ತಾಯ ಎಂದು ಹೇಳಿದರು.

ಸ್ಪೀಕರ್‌ ಕಚೇರಿ ಆರ್‌ಟಿಐ ವ್ಯಾಪ್ತಿಗೆ ತನ್ನಿ

ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಅವರ ನಡೆ ದಿನದಿಂದ ದಿನಕ್ಕೆ ವಿವಾದಕ್ಕೀಡಾಗುತ್ತಿದೆ. ಸ್ಪೀಕರ್ ಕಚೇರಿ ಮೂಲಕ ನಡೆದ ಕಾಮಗಾರಿಗಳಲ್ಲಿ ಹಗರಣಗಳ ವಾಸನೆ ಬರುತ್ತಿದೆ. ಈ ಕುರಿತು ಹೈಕೋರ್ಟ್‌ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಕಾಲಮಿತಿಯಲ್ಲಿ ತನಿಖೆ ನಡೆಸಿ ವರದಿ ನೀಡಬೇಕು ಎಂದು ಮಾಜಿ ಸ್ಪೀಕರ್‌, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದರು. ಜತೆಗೆ ಸ್ಪೀಕರ್‌ ಕಚೇರಿಯನ್ನು ಆರ್‌ಟಿಐ ವ್ಯಾಪ್ತಿಗೆ ತರಲು ಒತ್ತಾಯಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಸ್ಪೀಕರ್ ಯು.ಟಿ. ಖಾದರ್ ವಿರುದ್ಧ ಹಲವಾರು ಆರೋಪಗಳು ಕೇಳಿ ಬರುತ್ತಿವೆ. ಸ್ಪೀಕರ್ ಕಚೇರಿ ಮೂಲಕ ನಡೆದ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಇದೊಂದು ಸಂವಿಧಾನ ಬದ್ಧ ಪೀಠವಾಗಿದೆ. ಆದರೆ, ಈಗ ಈ ಪೀಠಕ್ಕೆ ಅಗೌರವ ತರುವ ಕಾರ್ಯಗಳು ನಡೆಯುತ್ತಿವೆ ಎಂದರು. ಸಂವಿಧಾನದಲ್ಲಿ ಶಾಸಕಾಂಗಕ್ಕೆ ದೊಡ್ಡ ಜವಾಬ್ದಾರಿ ಇದೆ. ಸಭಾಪತಿಗಳ ಪೀಠಕ್ಕೆ ಇರುವ ಪರಮಾಧಿಕಾರ ಇನ್ಯಾವುದಕ್ಕೂ ಇಲ್ಲ. ಇಂತಹ ಪೀಠಕ್ಕೆ ಖಾದರ ಕಳಂಕ ತರುತ್ತಿದ್ದಾರೆ. ಅವರ ನಡವಳಿಕೆಯಿಂದ ಸಂವಿಧಾನ ಬದ್ಧವಾದ ಸಭಾಧ್ಯಕ್ಷ ಸ್ಥಾನ ವಿವಾದದ ಕೇಂದ್ರವಾಗುತ್ತಿದೆ ಎಂದು ಆರೋಪಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!