ಬಿಎಸ್‌ವೈ ರಾಜೀನಾಮೆ: ಕಟೀಲ್‌ಗೆ ಹೈಕಮಾಂಡ್ ಬುಲಾವ್, ರಾಜ್ಯಪಾರನ್ನ ಭೇಟಿಯಾದ ಸ್ಪೀಕರ್

Published : Jul 26, 2021, 02:41 PM ISTUpdated : Jul 26, 2021, 04:16 PM IST
ಬಿಎಸ್‌ವೈ ರಾಜೀನಾಮೆ: ಕಟೀಲ್‌ಗೆ ಹೈಕಮಾಂಡ್ ಬುಲಾವ್, ರಾಜ್ಯಪಾರನ್ನ ಭೇಟಿಯಾದ ಸ್ಪೀಕರ್

ಸಾರಾಂಶ

* ಬಿಎಸ್‌ವೈ ರಾಜೀನಾಮೆ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಗರಿಗೆದರಿದ ಚಟುವಟಿಕೆಗಳು  * ಮುಂದಿನ ಮುಖ್ಯಮಂತ್ರಿ ಯಾರು? * ಕುತೂಹಲ ಮೂಡಿಸಿದ ಬಿಜೆಪಿ ಹೈಕಮಾಂಡ್ ನಡೆ

ಬೆಂಗಳೂರು, (ಜು.26):  ಬಿ.ಎಸ್.ಯಡಿಯೂರಪ್ಪ ನಿರೀಕ್ಷೆಯಂತೆ ಇಂದು (ಸೋಮವಾರ) ಸಾಧನಾ ಸಮಾವೇಶದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದು,  ರಾಜಭವನಕ್ಕೆ ಹೋಗಿ ರಾಜೀನಾಮೆ ನೀಡಿದರು.

 ಆದರೆ, ಕರ್ನಾಟಕ ಬಿಜೆಪಿ ಪಾಳಯದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರು? ಕರ್ನಾಟಕದ ಮುಂದಿ ಸಿಎಂ ಯಾರು ಆಗ್ತಾರೆ..? ಎನ್ನುವುದನ್ನು ನೋಡಿದ್ರೆ, ಆಕಾಂಕ್ಷಿಗಳ ಪಟ್ಟಿಯೂ ದೊಡ್ಡದಿದೆ.

ಮುಖ್ಯಮಂತ್ರಿ ಸ್ಥಾನಕ್ಕೆ ಬಿ. ಎಸ್‌. ಯಡಿಯೂರಪ್ಪ ರಾಜೀನಾಮೆ, ವಿದಾಯ ಭಾಷಣ!

ಬಿಜೆಪಿ ಹೈಕಮಾಂಡ್​ ನಿರ್ಧಾರಕ್ಕೆ ಎಲ್ಲರೂ ತಲೆಬಾಗುತ್ತಾರಾ ಅಥವಾ ಮತ್ತೊಮ್ಮೆ ಅಸಮಾಧಾನದ ಸ್ಫೋಟಕಗೊಳ್ಳಲಿದ್ಯಾ? ಎನ್ನುವ ಬಗ್ಗೆ ಭಾರೀ ಚರ್ಚೆಗಳು ಶುರುವಾಗಿವೆ.  ಈ ಎಲ್ಲಾ ಬೆಳವಣಿಗೆಗಳು, ಕುತೂಹಲ ಮೂಡಿಸಿದೆ.

"

ಕುತೂಹಲ ಮೂಡಿಸಿದ ಕಾಗೇರಿ ನಡೆ
ಮುಂದಿನ ಸಿಎಂ ಯಾರಾಗಲಿದ್ದಾರೆ ಎಂಬ ಕುತೂಹಲವೂ ಹೆಚ್ಚಾಗಿದೆ. ಈ ಮಧ್ಯೆ ರಾಜಭವನಕ್ಕೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿ ರಾಜ್ಯಪಾಲ ತಾವರ್​ ಚಂದ್ ಗೆಹ್ಲೋಟ್ ಜೊತೆಗೆ ಮಾತುಕತೆ ನಡೆಸಿದ್ದು, ತೀವ್ರ ಕುತೂಹಲ ಮೂಡಿಸಿದೆ.

ಇನ್ನೂ ಮುಖ್ಯವಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮುರುಗೇಶ್ ನಿರಾಣಿ ಹೆಸರುಗಳು ಬಲವಾಗಿ ಕೇಳಿಬರುತ್ತಿವೆ. ಅಷ್ಟೇ ಅಲ್ಲದೇ ಸಿ.ಟಿ. ರವಿ ಅರವಿಂದ್ ಬೆಲ್ಲದ್ ಹೆಸರು ಸಹ ಸಿಎಂ ಪಟ್ಟಿಯಲ್ಲಿವೆ. ಆದ್ರೆ, ಅಚ್ಚರಿ ಅಂದ್ರೆ ಇವತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್  ಹೆಸರು ಸಿಎಂ ಸ್ಥಾನಕ್ಕೆ ಕೇಳಿಬಂದಿದೆ. ಇದಕ್ಕೆ ಪೂರಕವೆಂಬಂತೆ ಕಟೀಲ್‌ಗೆ ಹೈಕಮಾಂಡ್ ದಿಲ್ಲಿಗೆ ಬರುವಂತೆ ದಿಢೀರ್ ಬುಲಾವ್ ನೀಡಿದ್ದು ರಾಜ್ಯ ಬಿಜೆಪಿಯಲ್ಲಿ ಮತ್ತಷ್ಟು ಸಂಚಲನ ಮೂಡಿಸಿದೆ.

ರಾಜ್ಯಕ್ಕೆ ಹೈಕಮಾಂಡ್ ನಿಯೋಗ
ಮುಂದಿನ ಸಿಎಂ ಅಭ್ಯರ್ಥಿ ಆಯ್ಕೆ ಸಂಬಂಧ ಬಿಜೆಪಿ ಹೈಕಮಾಂಡ್‌ ನಿಯೋಗ ನಾಳೆ (ಜು.27) ಕರ್ನಾಟಕಕ್ಕೆ ಆಗಮಿಸಲಿದೆ. ಅಂದೇ ಸಿಎಂ ಅಭ್ಯರ್ಥಿ ಬಗ್ಗೆ ರಾಜ್ಯದ ನಾಯಕರುಗಳ ಬಳಿ ಚರ್ಚೆ ಮಾಡಲಿದ್ದು, ಅಂದೇ ಮುಂದಿನ ಮುಖ್ಯಮಂತ್ರಿ ಹೆಸರು ಅಂತಿಮ ಮಾಡುವ ಸಾಧ್ಯತೆಗಳಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಂಬೈ ಪಾಲಿಕೆ ಚುನಾವಣೆಯಲ್ಲಿ ಅಳಿಸದ ಇಂಕ್‌ ಅಳಿಸಿದ ವಿವಾದ
ಪ್ರಾರ್ಥನೆ ಮಾತಿನ ಬೆನ್ನಲ್ಲೇ ಡಿಕೆಶಿ ಇಂದು ದಿಲ್ಲಿ ಭೇಟಿ ಕುತೂಹಲ