
ನವದೆಹಲಿ, (ಜ.21): ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ದೆಹಲಿಯಲ್ಲಿ ಇಂದು (ಗುರುವಾರ) ವಿವಿಧ ನಾಯಕರುಗಳನ್ನು ಭೇಟಿಯಾಗಿರುವುದು ಭಾರೀ ಕುತೂಹಲ ಮೂಡಿಸಿದೆ.
ಮೊದಲು ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ಸಚಿವ ಸದಾನಂದ ಗೌಡರವರನ್ನು ಭೇಟಿ ಮಾಡಿದರು. ಬಳಿಕ ಲೋಕಸಭೆಯ ಸಭಾಧ್ಯಕ್ಷ ಓಂ ಬಿರ್ಲಾ ಅವರನ್ನು ಭೇಟಿಯಾದರು.
ಇದ್ದಕ್ಕಿದ್ದಂತೆ ಡಿಲ್ಲಿ ನಾಯಕರನ್ನು ಭೇಟಿ ಮಾಡಿದ ರೇಣುಕಾ.. ಏನಂತೆ!
ನವದೆಹಲಿಯಲ್ಲಿ ಓಂಬಿ ರ್ಲಾ ಜೊತೆ ಕಾಗೇರಿ ಸಮಾಲೋಚನೆ ನಡೆಸಿದರು. ಇಬ್ಬರು ಗಣ್ಯರು ಸಂಸದೀಯ ವಿಷಯಗಳ ಬಗ್ಗೆ ಪರಸ್ಪರ ಚರ್ಚೆ ನಡೆಸಿದ್ದಾರೆ.
ಇನ್ನು ಈ ಬಗ್ಗೆ ಫೇಸ್ಬುಕ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಕಾಗೇರಿ.. ಇಂದು ನವದೆಹಲಿಯಲ್ಲಿ ಮಾನ್ಯ ಲೋಕಸಭಾ ಅಧ್ಯಕ್ಷರಾದ ಶ್ರೀ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ ಸಂಸದೀಯ ವಿಷಯಗಳ ಕುರಿತಂತೆ ಚರ್ಚಿಸಿದೆನು ಎಂದು ಬರೆದುಕೊಂಡಿದ್ದಾರೆ.
ಇನ್ನು ಸದಾನಂದಗೌಡ ಅವರನ್ನ ಭೇಟಿಯಾಗಿರುವ ಬಗ್ಗೆ ಯಾವುದೇ ರೀತಿಯಾದ ಮಾಹಿತಿ ಹಂಚಿಕೊಂಡಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.