MLC Election: ಕೊಳವೆ ಬಾವಿ ತೊಡಿಸಿಕೊಡಿ ಎಂದು ಮತ ಪೆಟ್ಟಿಗೆಯಲ್ಲಿ ಪತ್ರ ಹಾಕಿರುವ ಯುವಕ

Published : Jun 16, 2022, 02:04 PM IST
MLC Election: ಕೊಳವೆ ಬಾವಿ ತೊಡಿಸಿಕೊಡಿ ಎಂದು ಮತ ಪೆಟ್ಟಿಗೆಯಲ್ಲಿ ಪತ್ರ ಹಾಕಿರುವ ಯುವಕ

ಸಾರಾಂಶ

ವಿಧಾನ ಪರಿಷತ್ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಕೊಳವೆ ಬಾವಿ ತೋಡಿಸಿಕೊಡಿ ಎಂದು ಮತ ಪೆಟ್ಟಿಗೆಯಲ್ಲಿ ಯುವಕನೊಬ್ಬ ಮನವಿ ಪತ್ರವನ್ನು ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. 

ಚಾಮರಾಜನಗರ (ಜೂ.16): ವಿಧಾನ ಪರಿಷತ್ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಕೊಳವೆ ಬಾವಿ ತೋಡಿಸಿಕೊಡಿ ಎಂದು ಮತ ಪೆಟ್ಟಿಗೆಯಲ್ಲಿ ಯುವಕನೊಬ್ಬ ಮನವಿ ಪತ್ರವನ್ನು ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. 

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಗಣಿಗನೂರು ಗ್ರಾಮದ ರಾಜೇಂದ್ರ ಎಂಬ ಮತದಾರ ಕೊಳವೆ ಬಾವಿ ತೋಡಿಸಿಕೊಡಿ ಎಂದು ಪತ್ರ ಪೆಟ್ಟಿಗೆಗೆ ಪತ್ರ ಹಾಕಿದ್ದಾನೆ. ನಾನು ಎಂ.ಎ ಬಿ.ಎಡ್ ಮಾಡಿದ್ದೇನೆ. ಆದರೆ ನನಗೆ ಕೆಲಸ ಇಲ್ಲಾ. ನಮ್ಮಪ್ಪನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದೇನೆ. ಜಮೀನಿಗೆ ಕೊಳವೆ ಬಾವಿ ಅವಶ್ಯಕತೆ ಇದೆ. ನನಗೆ ಸರ್ಕಾರಿ ಕೆಲಸ ಕೊಡಿ ಇಲ್ಲ. ಹಾಗಾಗಿ ಜಮೀನಿನಲ್ಲಿ‌ ಕೊಳವೆ ಬಾವಿ ತೊಡಿಸಿಕೊಡಿ ಎಂದು ಮನವಿ ಪತ್ರದಲ್ಲಿ ಹೇಳಿದ್ದಾನೆ. ಜೊತೆಗೆ ಪೆಟ್ರೋಲ್ ಬೆಲೆ ಇಳಿಸಿ ಎಂದು ಮನವಿಯನ್ನು ಮಾಡಿದ್ದಾನೆ. 

ರಸಗೊಬ್ಬರ ಬೆಲೆ ಕಡಿಮೆ ಮಾಡಿ ಎಂದು ಪತ್ರ ಬರೆದು ಬ್ಯಾಲೆಟ್ ಪೇಪರ್ ಜೊತೆಗೆ ತನ್ನ ಪತ್ರ ಹಾಕಿದ್ದಾನೆ. ಇನ್ನು ಮತ್ತೊಂದು ಕಡೆ ಮತದಾರರು ಮತ ಪೆಟ್ಟಿಯೊಳಗಡೆ ವಿಭಿನ್ನ ಕೋರಿಕೆಯ ಪತ್ರಗಳನ್ನು ಹಾಕಿದ್ದಾರೆ. ಬ್ಯಾಲೆಟ್ ಪತ್ರ ಮೇಲೆಯೇ ಅಭ್ಯರ್ಥಿಗಳ ವಿರುದ್ಧ ಅವಾಚ್ಯ ಪದಗಳನ್ನ ಮತದಾರರು‌ ಬರೆದಿದ್ದು, ಯಾವ ಅಭ್ಯರ್ಥಿಗಳು ಹಣ ಕೊಟ್ಟಿಲ್ಲ ಎಂದು ಬ್ಯಾಲೆಟ್ ಪೇಪರ್ ಮೇಲೆ ಮತದಾರನೊಬ್ಬ ಬರೆದಿದ್ದಾನೆ.

'ಬಿಜೆಪಿ ಸರ್ಕಾರದ ದುರಾಡಳಿದಿಂದ ಬೇಸತ್ತ ಜನರು ಹುಕ್ಕೇರಿ ಗೆಲ್ಲಿಸಿದ್ದಾರೆ'

ಇಲ್ಲ ಸಲ್ಲದ ಆರೋಪ ಮಾಡಿದವರಿಗೆ ತಕ್ಕ ಪ್ರತ್ಯುತ್ತರ: ವಾಯವ್ಯ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಕಾಂಗ್ರೆಸ್‌ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಅವರ ಆಯ್ಕೆಗೆ ಸಂತಸ ವ್ಯಕ್ತಪಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಇಲ್ಲ ಸಲ್ಲದ ಆರೋಪಗಳನ್ನು ಮಾಡಿದವರಿಗೆ ಶಿಕ್ಷಕ ಮತದಾರರು ತಕ್ಕ ಪ್ರತ್ಯುತ್ತರ ನೀಡಿದ್ದಾರೆ ಎಂದಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಬಿಜೆಪಿಯವರು ಅನಗತ್ಯವಾಗಿ ಶಿಕ್ಷಕರಲ್ಲಿ ಗೊಂದಲ ಸೃಷ್ಟಿಸಲು ಪ್ರಯತ್ನಿಸಿದ್ದರು. ಪ್ರಕಾಶ ಹುಕ್ಕೇರಿ ಮುದಿ ಎತ್ತು, ಅವರು ಎಸ್‌ಎಸ್‌ಎಲ್‌ಸಿ ಪಾಸಾಗಲಿಲ್ಲ, ಹಣ ಹಂಚಿದ್ದಾರೆ ಎಂದೆಲ್ಲ ಹೇಳುವ ಮೂಲಕ ಶಿಕ್ಷಕರ ದಾರಿ ತಪ್ಪಿಸುವ ಯತ್ನ ಮಾಡಿದ್ದರು. ಆದರೆ ಇದಕ್ಕೆಲ್ಲ ಮತದಾರರು ಕಿವಿಗೊಡದೆ ಮತ ಚಲಾಯಿಸುವ ಮೂಲಕ ಪ್ರಕಾಶ ಹುಕ್ಕೇರಿಯವರನ್ನು ಗೆಲ್ಲಿಸಿದ್ದಾರೆ ಎಂದಿದ್ದಾರೆ.

MLC Election: ಪಶ್ಚಿಮ ಶಿಕ್ಷಕರ ಮತಕ್ಷೇತ್ರಕ್ಕೆ ಹೊರಟ್ಟಿ ಬಾದಶಾ!

ಕಾಂಗ್ರೆಸ್‌ ಪಕ್ಷದ ಎಲ್ಲ ಕಾರ್ಯಕರ್ತರು, ಮುಖಂಡರು ಒಟ್ಟಾಗಿ ನಿಂತು ಕೆಲಸ ಮಾಡಿದ್ದು, ಪ್ರಕಾಶ ಹುಕ್ಕೇರಿಯವರ ಹಿಂದಿನ ಸಾಧನೆ ಹಾಗೂ ಕಾಂಗ್ರೆಸ್‌ ಪಕ್ಷದ ಇತಿಹಾಸ ಮತ್ತು ಜನಪರ ಕೆಲಸಗಳಿಗೆ ಸಂದ ಜಯ ಇದಾಗಿದೆ. ಮತದಾರರಿಗೆ ಪಕ್ಷದ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ