ಡಿಕೆಶಿ ಮುಖ್ಯಮಂತ್ರಿಯಾಗಲಿ ಎಂಬ ವಿಚಾರವೇ ಅಪ್ರಸ್ತುತ: ಉಗ್ರಪ್ಪ

Published : Sep 24, 2023, 04:33 AM IST
ಡಿಕೆಶಿ ಮುಖ್ಯಮಂತ್ರಿಯಾಗಲಿ ಎಂಬ ವಿಚಾರವೇ ಅಪ್ರಸ್ತುತ: ಉಗ್ರಪ್ಪ

ಸಾರಾಂಶ

ಸದ್ಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಲ್ಲಿದ್ದಾರೆ. ಸಿಎಂ ಸ್ಥಾನ ಖಾಲಿ ಇಲ್ಲ. ಈ ವಿಚಾರವೇ ಸದ್ಯಕ್ಕೀಗ ಅಪ್ರಸ್ತುತವಾಗಿದೆ. ಡಿಸಿಎಂ ಹುದ್ದೆ ಅಸಂವಿಧಾನಿಕ ಎಂದ ಮಾಜಿ ಸಂಸದ ವಿ.ಎಸ್. ಉಗ್ರಪ್ಪ 

ಹೊಸಪೇಟೆ(ಸೆ.24):  ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿ ಎಂಬ ವಿಚಾರವೇ ಅಪ್ರಸ್ತುತ ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಹೇಳಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಲ್ಲಿದ್ದಾರೆ. ಸಿಎಂ ಸ್ಥಾನ ಖಾಲಿ ಇಲ್ಲ. ಈ ವಿಚಾರವೇ ಸದ್ಯಕ್ಕೀಗ ಅಪ್ರಸ್ತುತವಾಗಿದೆ. ಡಿಸಿಎಂ ಹುದ್ದೆ ಅಸಂವಿಧಾನಿಕ ಎಂದರು.
ಸಚಿವ ಕೆ.ಎನ್‌. ರಾಜಣ್ಣ ಮತ್ತೆ ಮೂರು ಡಿಸಿಎಂ ಹುದ್ದೆ ಸೃಷ್ಟಿಸಬೇಕೆಂದು ಒತ್ತಾಯಿಸಿರುವ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅಂತಿಮವಾಗಿ ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರದ ಕುರಿತು ಹೈಕಮಾಂಡ್ ನಿರ್ಣಯ ಮಾಡುತ್ತದೆ ಎಂದರು.

ಭಾರತ ನಾಮಕರಣದಿಂದ ಆಗುವ ಪ್ರಯೋಜನವೇನು?: ಉಗ್ರಪ್ಪ

ನಾಡಿನ ನೆಲ, ಜಲ, ಭಾಷೆ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಈ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ರಾಜಕೀಯ ಮಾಡುತ್ತಿದ್ದಾರೆ. ತಮಿಳುನಾಡಿಗೆ ನೀರು ಬಿಟ್ಟು ಬರ್ತಿರಿ ಎಂದು ಉಡಾಫೆಯಾಗಿ ಮಾತನಾಡಿದ್ದಾರೆ. ರಾಜ್ಯದ ೨೫ ಬಿಜೆಪಿ ಸಂಸದರು ಕಾವೇರಿ ಬಗ್ಗೆ ಮಾತನಾಡಲಿ ಎಂದು ಒತ್ತಾಯಿಸಿದರು.

ಬಿಜೆಪಿ, ಜೆಡಿಎಸ್ ಮೈತ್ರಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಜೆಡಿಎಸ್‌ನಲ್ಲಿ ಎಸ್ ಎಂಬ ಪದವನ್ನು ತೆಗೆದು ಹಾಕಲಿ. ಮೊದಲಿನಿಂದಲೂ ಜೆಡಿಎಸ್ ಮತ್ತು ಬಿಜೆಪಿಯವರು ಒಳೊಗೊಳಗೆ ದೋಸ್ತಿ ಮಾಡಿಕೊಂಡಿದ್ದರು. ಇದೀಗ ಅದು ಬಹಿರಂಗವಾಗಿದೆ. ಅವರ ದೋಸ್ತಿಯಿಂದ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಅತಿ ಹೆಚ್ಚು ಸ್ಥಾನಗಳು ಬರಲಿವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ