ವಕ್ಫ್ ಮಸೂದೆ ಮುಸ್ಲಿಂ ವಿರೋಧಿ: ಸಚಿವ ಬೈರತಿ ಸುರೇಶ್

Published : Apr 06, 2025, 06:49 PM ISTUpdated : Apr 06, 2025, 07:05 PM IST
ವಕ್ಫ್ ಮಸೂದೆ ಮುಸ್ಲಿಂ ವಿರೋಧಿ: ಸಚಿವ ಬೈರತಿ ಸುರೇಶ್

ಸಾರಾಂಶ

ಸಂಸತ್‌ನಲ್ಲಿ ಅಡ್ಡ ಮತ ಪಡೆದು ವಕ್ಫ್ ಮಸೂದೆಗೆ ಅಂಗೀಕಾರ ಪಡೆದುಕೊಂಡಿದ್ದಾರೆ. ಇದು ಮುಸ್ಲಿಮರ ವಿರೋಧಿ ಕಾಯ್ದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹೇಳಿದರು. 

ಕೋಲಾರ (ಏ.06): ಸಂಸತ್‌ನಲ್ಲಿ ಅಡ್ಡ ಮತ ಪಡೆದು ವಕ್ಫ್ ಮಸೂದೆಗೆ ಅಂಗೀಕಾರ ಪಡೆದುಕೊಂಡಿದ್ದಾರೆ. ಇದು ಮುಸ್ಲಿಮರ ವಿರೋಧಿ ಕಾಯ್ದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹೇಳಿದರು. ನಗರದಲ್ಲಿ ಬಾಬು ಜಗಜೀವನ್ ರಾಮ್ ಜಯಂತಿಯ ಪಲ್ಲಕ್ಕಿ ಮೆರವಣಿಗೆಗೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿ, ಮಸೂದೆ ಅಂಗೀಕಾರದ ಮೇಲೆ ಚರ್ಚೆಗೆ ವಿರೋಧ ಪಕ್ಷದವರಿಗೆ ಅವಕಾಶ ನೀಡಿಲ್ಲ, ಜತೆಗೆ ಮಹುಮತ ಸಹ ದೊರೆತಿಲ್ಲ ಎಂದರು.

ಚರ್ಚಿಸಿದೆ ಮಸೂದೆ ಅಂಗೀಕಾರ: ಸಂಸತ್ನಲ್ಲಿ ರಾತ್ರಿ 3 ಗಂಟೆ ತನಕ ಚರ್ಚೆ ನಡೆಯುತ್ತಿದ್ದಾಗ ರಾಹುಲ್ ಗಾಂಧಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು. ವಿರುದ್ಧ ಧ್ವನಿ ಎತ್ತಲು ಪ್ರಯತ್ನಿಸಿದರು ಸಹ ಚರ್ಚೆಗೆ ಅವಕಾಶವೇ ನೀಡಿಲ್ಲ. ಬಿಜೆಪಿಯವರಿಗೆ ನೈತಿಕತೆ, ಸಮಾಜದ ಬಗ್ಗೆ ಕಳಕಳಿಯಿದ್ದರೆ ಕೇಂದ್ರದ ವಿರುದ್ಧ ಹೋರಾಟ ಮಾಡಲಿ. ರಾಜ್ಯಕ್ಕೆ ಬರಬೇಕಾಗಿರುವ ತೆರಿಗೆ ಪಾಲು, ಅನುದಾನವನ್ನು ಕೇಳಲಿ ಎಂದು ಒತ್ತಾಯಿಸಿದರು. 

ವಿನಯ್‌ ಸಾವಿನಲ್ಲೂ ರಾಜಕೀಯ ಮಾಡೋದು ಸರಿಯಲ್ಲ: ಸಚಿವ ಕೆ.ಜೆ.ಜಾರ್ಜ್‌

ಹಾಲಿನ ದರ ಏರಿಕೆಗೆ ಕುರಿತು ಉತ್ತರಿಸಿ, ರೈತರಿಗೆ ಅನುಕೂಲವಾಗುವ ತೀರ್ಮಾನ ಸರ್ಕಾರ ಕೈಗೊಂಡಿದೆ. ಪ್ರತಿ ಲೀಟರ್ ಹಾಲಿ ದರ 4 ರೂ. ಏರಿಕೆಯಿಂದ ಸರ್ಕಾರಕ್ಕೇನು ಲಾಭವಿಲ್ಲ. ಅದು ರೈತರಿಗೆ, ರೈತ ದೇಶದ ಬೆನ್ನೆಲಬು, ಅವರಿಗೆ ಪ್ರೋತ್ಸಾಹ ನೀಡುವ ಕೆಲಸ ಆಬೇಕು. ರೈತರನ್ನು ಬಿಜೆಪಿ ಅವರು ವಿರೋಧ ಮಾಡುತ್ತಿದ್ದಾರೆ ಎಂದು ಛೇಡಿಸಿದರು. ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಪ್ರಕರಣ ಕುರಿತು ಪ್ರತಿಕ್ರಿಯಿಸಲು ಸಚಿವರು ನಿರಾಕರಿಸಿದರು.

ಯೋಜನೆಗಳ ಅನುಷ್ಠಾನದಲ್ಲಿ ನೌಕರರ ಪಾತ್ರ ಮುಖ್ಯ: ಸರ್ಕಾರಿ ನೌಕರರು ಹಾಗೂ ರಾಜಕಾರಣಿಗಳು ಕೈಜೋಡಿಸಿದರೆ ಮಾತ್ರ ಸರ್ಕಾರದ ಯಾವುದೇ ಯೋಜನೆ ಯಶಸ್ವಿ ಕಾಣಲು ಸಾಧ್ಯ. ನಾವು ಸೂಚಿಸಿದ್ದನ್ನು ಅನುಷ್ಠಾನಗೊಳಿಸಿ ಜನರಿಗೆ ಮುಟ್ಟಿಸುವ ಸರ್ಕಾರಿ ನೌಕರರ ಸೇವೆಗೆ ಅಭಿನಂದನೆ ಸಲ್ಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿಳಿಸಿದರು. ನಗರದ ಸರ್.ಎಂ.ವಿ ಕ್ರೀಡಾಂಗಣದಲ್ಲಿ ಎರಡು ದಿನಗಳ ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ನೀಡಿ ಮಾತನಾಡಿದರು.

ಟೀಕೆಗಳಿಗೆ ಹೆದರುವ ಅಗತ್ಯವಿಲ್ಲ: ಸಚಿವ ಎನ್.ಚಲುವರಾಯಸ್ವಾಮಿ

ಕರ್ನಾಟಕವನ್ನು ಹೊರತುಪಡಿಸಿದ ರಾಜ್ಯಗಳಾದ ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಸರ್ಕಾರದ ಕಾರ್ಯಕ್ರಮದ ವೇದಿಕೆಗಳಲ್ಲಿ ಜನಪ್ರತಿನಿಧಿಗಳು ಮಾತ್ರ ಇರುತ್ತಾರೆ. ಯಾವುದೇ ಸರ್ಕಾರಿ ಅಧಿಕಾರಿಗಳನ್ನು ಜೊತೆಯಲ್ಲಿ ಕೂರಿಸಿಕೊಳ್ಳುವುದಿಲ್ಲ. ಆದರೆ, ನಮ್ಮ ರಾಜ್ಯದಲ್ಲಿ ಎಲ್ಲರೂ ಜೊತೆಯಲ್ಲೇ ಇರುತ್ತೇವೆ. ನಮ್ಮಲ್ಲಿ ಸೌಹಾರ್ದಭಾವ ಇದೆ. ಸರ್ಕಾರವು ಅಷ್ಟೇ ಎಲ್ಲರನ್ನೂ ಸಮಾನತೆಯಿಂದ ನೋಡಿಕೊಳ್ಳುತ್ತದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ