ವಕ್ಫ್ ನೋಟಿಸ್‌ ಹಿಂಪಡೆವ ಆದೇಶ ಕಣ್ಣೊರೆಸುವ ತಂತ್ರ: ಪ್ರಲ್ಹಾದ್ ಜೋಶಿ ಆಕ್ರೋಶ

Published : Nov 13, 2024, 09:45 PM IST
ವಕ್ಫ್ ನೋಟಿಸ್‌ ಹಿಂಪಡೆವ ಆದೇಶ ಕಣ್ಣೊರೆಸುವ ತಂತ್ರ: ಪ್ರಲ್ಹಾದ್ ಜೋಶಿ ಆಕ್ರೋಶ

ಸಾರಾಂಶ

ರೈತರು, ಜನಸಾಮಾನ್ಯರು, ಮಠ, ಮಂದಿರಗಳ ಆಸ್ತಿ ವಕ್ಫ್ ಆಸ್ತಿಯೆಂದು ನೋಟಿಸ್ ನೀಡಿ, ಮುಟೇಷನ್ ಪ್ರಕ್ರಿಯೆ ಹಿಂಪಡೆಯುವಂತೆ ಸರ್ಕಾರ ನ.9ರಂದು ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಸರ್ಕಾರ ಕಣ್ಣೊರೆಸುವ ತಂತ್ರವನ್ನು ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.   

ದಾವಣಗೆರೆ (ನ.13): ರೈತರು, ಜನಸಾಮಾನ್ಯರು, ಮಠ, ಮಂದಿರಗಳ ಆಸ್ತಿ ವಕ್ಫ್ ಆಸ್ತಿಯೆಂದು ನೋಟಿಸ್ ನೀಡಿ, ಮುಟೇಷನ್ ಪ್ರಕ್ರಿಯೆ ಹಿಂಪಡೆಯುವಂತೆ ಸರ್ಕಾರ ನ.9ರಂದು ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಸರ್ಕಾರ ಕಣ್ಣೊರೆಸುವ ತಂತ್ರವನ್ನು ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಜಿಎಂಐಟಿ ಕಾಲೇಜಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಈಗ ಮುಟೇಷನ್‌ ಆದೇಶ ಹಿಂಪಡೆಯುವಂತೆ ಆದೇಶ ಹೊರಡಿಸಿದೆ. ಮುಂದೆ ಮತ್ತೆ ಇಂಥ ನೋಟಿಸ್ ನೀಡುವುದಿಲ್ಲ ಎಂದು ಮಾತ್ರ ಸ್ಪಷ್ಟಪಡಿಸಿಲ್ಲ ಎಂದು ಟೀಕಿಸಿದರು.

ಸಿಎಂ ನ.9ರಂದು ಹೊರಡಿಸಿದ ಆದೇಶ ಕೇವಲ ಕಣ್ಣೊರೆಸುವ ತಂತ್ರವಾಗಿದೆ. 2-3 ತಿಂಗಳಲ್ಲಿ ನೋಟಿಸ್ ಕೊಟ್ಟು, ವಕ್ಫ್ ಆಸ್ತಿಯೆಂದು ವಶಪಡಿಸಿಕೊಂಡ ಆಸ್ತಿಯನ್ನು, ಸರ್ಕಾರ ನೀಡಿದ ನೋಟಿಸ್‌ ವಾಪ್‍ಸ್‌ ಪಡೆಯುವ ಬಗ್ಗೆ ಆದೇಶದಲ್ಲಿ ಎಲ್ಲಿಯೂ ಹೇಳಿಲ್ಲ. ಮತಾಂಧ ಸಚಿವ ಜಮೀರ್ ಅಹಮದ್ ವಕ್ಫ್ ಅದಾಲತ್ ಮಾಡಿ, ಆರ್‌ಟಿಸಿಯಲ್ಲಿ ವಕ್ಫ್ ಆಸ್ತಿಯೆಂದು ದಾಖಲು ಮಾಡಿಸಿರುವ ಆಸ್ತಿಗಳ ಗತಿ ಏನು ಎಂದು ಜೋಷಿ ಪ್ರಶ್ನಿಸಿದರು. ವಕ್ಫ್ ಆಸ್ತಿ ಶೇ.31ರಷ್ಟು ಹೆಚ್ಚಾಗಿರುವುದನ್ನು ಜನ ಅರ್ಥ ಮಾಡಿಕೊಳ್ಳಬೇಕು. ಹಾನಗಲ್ ತಾಲೂಕಿನ ಹರಣಗಿ ಗ್ರಾಮದಲ್ಲಿ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಬಲದಿಂದ ಆಸ್ತಿ ಜಪ್ತಿ ಮಾಡಲಾಗಿದೆ. ರೈತನ ಹೊಲದಲ್ಲಿ ಬೆಳೆಯನ್ನೆಲ್ಲಾ ನಾಶಪಡಿಸಲಾಗಿದೆ. ಅಲ್ಲಿ ಬೆಳೆದಿದ್ದ ಹತ್ತಿ, ಮೆಕ್ಕೇಜೋಳ ಇತರೆ ಬೆಳೆಗಳನ್ನು ಅಳಿಸಿ, ಜಮೀನುಗಳನ್ನು ಜಪ್ತಿ ಮಾಡಲಾಗಿದೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

13 ವರ್ಷದ ಬಾಲಕಿಗೆ 18 ವರ್ಷಗಳ ಬಳಿಕ ಅಂತ್ಯ ಸಂಸ್ಕಾರ: ಇಲ್ಲಿದೆ ಕರುಣಾಜನಕ ಕಥೆ!

ಮತಿಗೆಟ್ಟ ಕಾಂಗ್ರೆಸ್‌ ಸರ್ಕಾರ: ನಿರ್ಲಜ್ಜ, ಮತಿಗೆಟ್ಟ ಭ್ರಷ್ಟ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿದೆ. ಬೆಳೆ ಬೆಳೆಯರು ರೈತರು ಸಾಲ ಮಾಡಿದ್ದಾರೆ. ಈಗ ಆ ರೈತರ ಗತಿ ಏನು? ಜಮೀನಿನಲ್ಲೇ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಾವಣಗೆರೆ ಸೇರಿದಂತೆ ಅನೇಕ ನಗರಗಳಲ್ಲಿ ವಕ್ಫ್‌ ಮಂಡಳಿ ಸರ್ವೇ ಕೈಗೊಂಡಿದೆ. ಈಗಾಗಲೇ ಅನೇಕ ಆಸ್ತಿಗಳು ವಕ್ಫ್ ಆಸ್ತಿಯೆಂದು ಸೇರಿವೆ. ಕಾಂಗ್ರೆಸ್ ಪಕ್ಷವು ತುಷ್ಟೀಕರಣದ ಪರಾಕಾಷ್ಟೆ ತಲುಪಿದೆ. ಗುತ್ತಿಗೆಯಲ್ಲೂ ಶೇ.4ರಷ್ಟು ಮುಸ್ಲಿಮರಿಗೆ ನೀಡಿರುವುದು ದುರಂತ. ಇದನ್ನೆಲ್ಲಾ ಹೇಳಿದರೆ, ಬಿಜೆಪಿಯವರನ್ನು ಒಡೆದು ಆಳುವ ನೀತಿ ಎನ್ನುತ್ತಾರೆ ಎಂದು ಪ್ರಹ್ಲಾದ ಜೋಷಿ ಕಿಡಿಕಾರಿದರು.

ಪತ್ರಿಕಾಗೋಷ್ಠಿಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ, ಕೇಂದ್ರದ ಮಾಜಿ ಸಚಿವ ಡಾ.ಜಿ.ಎಂ.ಸಿದ್ದೇಶ್ವರ, ವಿಪ ಸದಸ್ಯ ಎನ್.ರವಿಕುಮಾರ, ಕೆ.ಎಸ್. ನವೀನ, ಮುಖಂಡರಾದ ಗಾಯತ್ರಿ ಸಿದ್ದೇಶ್ವರ, ಮಾಜಿ ಶಾಸಕ ಎಸ್.ವಿ.ರಾಮಚಂದ್ರ, ಜಿ.ಎಸ್.ಅನಿತಕುಮಾರ, ಟಿ.ಶ್ರೀನಿವಾಸ ದಾಸಕರಿಯಪ್ಪ ಇತರರು ಇದ್ದರು. 

ಕಾಂಗ್ರೆಸ್ ಸಚಿವ್ರೆ, ನಿಮ್ಮ ಆಸ್ತಿನೂ ಹೋದೀತು!: ಸುಪ್ರೀಂ ಕೋರ್ಟ್‌ ಆದೇಶವೊಂದರಲ್ಲಿ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಯಾವುದೇ ದಾಖಲೆ ಇಲ್ಲದೇ ಇದ್ದರೆ, ದಾಖಲು ಮಾಡಿದ್ದನ್ನು ರದ್ದುಪಡಿಸಲು ಅವಕಾಶ ಇದೆ. ವಕ್ಫ್‌ಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಎಲ್ಲ ಮಂತ್ರಿಗಳು ಬಿಜೆಪಿ ಪಾಲಿಟಿಕ್ಸ್ ಎನ್ನುತ್ತಿದ್ದಾರೆ. ನಾಳೆ ನಿಮ್ಮ ಮಕ್ಕಳು, ಮೊಮ್ಮಕ್ಕಳ ಆಸ್ತಿಯೇ ಹೋಗಬಹುದು ಎಂಬುದನ್ನು ಅಂತಹ ಕಾಂಗ್ರೆಸ್ಸಿನ ಸಚಿವರೂ ಅರ್ಥ ಮಾಡಿಕೊಳ್ಳಬೇಕು ಎಂದು ಪ್ರಹ್ಲಾದ್‌ ಜೋಷಿ ತಾಕೀತು ಮಾಡಿದರು.

ಕೋಟ್ಯಂತರ ರು. ಮೌಲ್ಯದ ಆಸ್ತಿಗಳು 2013ರ ಕಾನೂನಿನಂತೆ ಮುಸ್ಲಿಮರ ಪಾಲಾಗುತ್ತಿವೆ. ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಮುಂದೊಂದು ದಿನ ಇಡೀ ದೇಶಕ್ಕೆ ದೊಡ್ಡ ಗಂಡಾಂತರ ಇದೆ. ಸರ್ಕಾರಿ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ.4 ಮೀಸಲಾತಿ ನೀಡಬೇಕೆಂಬ ಪ್ರಸ್ತಾಪ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಲಿಕ್ಕರ್ ಲಾಬಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕುತ್ತಾರೆ ಎಂದು ಅವರು ಟೀಕಿಸಿದರು.

ಕೇರಳದಿಂದ ಸ್ವರಾಜ್ಯಗಳತ್ತ ಮುಖ ಮಾಡಿದ ನಕ್ಸಲರು: ಜಾಡು ಹಿಡಿದು ಹೊರಟ ಎಎನ್ಎಫ್-ಪೊಲೀಸರು

ಮುಡಾ ನಿವೇಶನ ಹಗರಣ ಆಗುವುದಕ್ಕೆ ನಿಮ್ಮ ಪ್ರಭಾವವಿದೆ ಎಂದು ಹೈಕೋರ್ಟ್ ಹೇಳಿದೆ. ಹಾಗಿದ್ದರೂ ಸಿದ್ದರಾಮಯ್ಯನವರೇ ನೀವೇ ಇನ್ನೂ ರಾಜೀನಾಮೆ ಕೊಟ್ಟಿಲ್ಲ. ನಿಮ್ಮಂತಹವರು ಪ್ರಧಾನಿ ಮೋದಿ ಬಗ್ಗೆ ಮಾತನಾಡುತ್ತೀರಾ? ಲಿಕ್ಕರ್ ಡೀಲ್ ಬಗ್ಗೆ ಬಿಜೆಪಿಯೇನೂ ದೂರು ಕೊಟ್ಟಿಲ್ಲ. ಲಿಕ್ಕರ್ ಡೀಲರ್‌ಗಳೇ ದೂರು ಕೊಟ್ಟಿದ್ದಾರೆ. ಸಿದ್ದರಾಮಯ್ಯನವರೇ ನಿಮ್ಮ ಭಂಡತನಕ್ಕೂ ಒಂದು ಮಿತಿ ಎಂಬುದು ಇರಲಿ. ದಾಖಲೆಗಳೇ ಇಲ್ಲದೇ ವಕ್ಫ್‌ಗೆ ವಶಪಡಿಸಿಕೊಂಡ ಆಸ್ತಿಗಳನ್ನು ತಕ್ಷಣ ಅವುಗಳ ಮಾಲೀಕರಿಗೆ ಮರಳಿಸಿ ಎಂದು ಜೋಷಿ ತಾಕೀತು ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಮತ್ತೆ ಟಿಪ್ಪು ಜಯಂತಿ ವಿವಾದ ಭುಗಿಲು
ಉ.ಕ. ಚರ್ಚೆ ವೇಳೆ ವಿಪಕ್ಷಕ್ಕೆ ತಿರುಗೇಟು: ಸಿಎಲ್‌ಪಿ ನಿರ್ಧಾರ