
ಬೆಂಗಳೂರು, (ಮಾ.02): ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಹಿರಿಯ ಸಾಮಾಜಿಕ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ ನಡುವಿನ ಆರೋಪ-ಪ್ರತ್ಯಾರೋಪಗಳ ಪರ ವಿರೋಧಗಳು ಜೋರಾಗಿ ನಡೆಯುತ್ತಿವೆ.
"
ಅಲ್ಲದೇ ಸೋಮವಾರ ಶುರುವಾದ ವಿಧಾನ ಮಂಡಲ ಅಧಿವೇಶನದಲ್ಲೂ ಸಹ ಇದು ಆಡಳಿತ ಮತ್ತು ವಿಪಕ್ಷ ನಡುವಿನ ಗದ್ದಲಕ್ಕೆ ಕಾರಣವಾಗಿದೆ. ಪ್ರತಿಪಕ್ಷ ನಾಯಕರು ಹಿರಿಯ ಸಾಮಾಜಿಕ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರ ವಿಷಯ ಪ್ರಸ್ತಾಪಿಸಿ ಮಾತಿಗೆ ಅವಕಾಶ ಕೋರಿದರು.
ಸಾವರ್ಕರ್ ಧೂಳಿಗೂ ದೊರೆಸ್ವಾಮಿ ಸಮವಲ್ಲ; ನಾಲಿಗೆ ಹರಿಬಿಟ್ಟ ಯತ್ನಾಳ್
"
ಇದೇ ವೇಳೆ, ಯಾವ ನಿಯಮದ ಅಡಿ ಎಂಬುದನ್ನು ಉಲ್ಲೇಖಿಸಿ ಚರ್ಚೆಗೆ ಅವಕಾಶ ಕೋರುವಂತೆ ಆಡಳಿತ ಪಕ್ಷದ ಸದಸ್ಯರು ವಿಪಕ್ಷ ಸದಸ್ಯರನ್ನು ಆಗ್ರಹಿಸಿದರು. ಇದು ಗದ್ದಲಕ್ಕೆ ಕಾರಣವಾಯ್ತು.
ಪಾಕ್ ಏಜೆಂಟ್ ಮಾತು ಸಮರ್ಥಿಸಿಕೊಂಡು ಮತ್ತೆ ದೊರೆಸ್ವಾಮಿ ವಿರುದ್ಧ ಯತ್ನಾಳ್ ಕಿಡಿ
"
ರಾಜ್ಯದ ಅಭಿವೃದ್ಧಿ, ಜನರ ಕಷ್ಟ-ದುಃಖಗಳ ಬಗ್ಗೆ ಸದನದಲ್ಲಿ ಚರ್ಚೆ ಮಾಡೋ ಬದಲು ದೊರೆಸ್ವಾಮಿ ಹಾಗೂ ಯತ್ನಾಳ್ ವಿಷಯ ಜನರಿಗೆ ಬೇಕಿಲ್ಲ.ವಹಾಗಾದ್ರೆ ಸದನದಲ್ಲಿ ಏನೆಲ್ಲಾ ಆಯ್ತು ಎನ್ನುವುದನ್ನ ವಿಡಿಯೋಗಳಲ್ಲಿ ನೋಡಿ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.