ಕಾಂಗ್ರೆಸ್‌ ಮಾಡಿದ ರಾಡಿ ನಮಗೆ ಸರಿಪಡಿಸಲು ಆಗುತ್ತಿಲ್ಲ; ಜಗದೀಶ್ ಶೆಟ್ಟರ್

Published : Jan 27, 2023, 07:10 AM IST
ಕಾಂಗ್ರೆಸ್‌ ಮಾಡಿದ ರಾಡಿ ನಮಗೆ ಸರಿಪಡಿಸಲು ಆಗುತ್ತಿಲ್ಲ; ಜಗದೀಶ್ ಶೆಟ್ಟರ್

ಸಾರಾಂಶ

ಕಾಂಗ್ರೆಸ್‌ ವಿಧಾನಸೌಧವನ್ನು ಸಂಪೂರ್ಣ ರಾಡಿ ಮಾಡಿದೆ. ಅದನ್ನೇ ಸರಿಪಡಿಸಲು ನಮಗೆ ಆಗುತ್ತಿಲ್ಲ. ಇನ್ನು ಅವರು ಸರಿಪಡಿಸುತ್ತಾರೆ ಎಂದರೆ ಹಾಸ್ಯಾಸ್ಪದ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಹೇಳಿದರು.

ಹುಬ್ಬಳ್ಳಿ (ಜ.27) : ಕಾಂಗ್ರೆಸ್‌ ವಿಧಾನಸೌಧವನ್ನು ಸಂಪೂರ್ಣ ರಾಡಿ ಮಾಡಿದೆ. ಅದನ್ನೇ ಸರಿಪಡಿಸಲು ನಮಗೆ ಆಗುತ್ತಿಲ್ಲ. ಇನ್ನು ಅವರು ಸರಿಪಡಿಸುತ್ತಾರೆ ಎಂದರೆ ಹಾಸ್ಯಾಸ್ಪದ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಹೇಳಿದರು.

ವಿಧಾನಸೌಧ(Vidhanasoudha)ಕ್ಕೆ ಬಿಜೆಪಿಯಿಂದ ಕಳಂಕ ಅಂಟಿಕೊಂಡಿದೆ. ಗಂಜಲು ಹಾಕಿ ಶುದ್ಧಗೊಳಿಸುತ್ತೇವೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ(KD Shivakumar) ಹೇಳಿಕೆಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ಸಿನವರು ಈ ಹಿಂದೆ ಇಡೀ ದೇಶದಲ್ಲಿ ಅಷ್ಟೆಅಲ್ಲದೆ, ನಮ್ಮ ರಾಜ್ಯದಲ್ಲೂ ರಾಡಿ ಮಾಡಿ ಹೋಗಿದ್ದಾರೆ. ಆ ರಾಡಿಯನ್ನು ತೊಳೆಯಲು ನಮ್ಮಿಂದಲೇ ಆಗುತ್ತಿಲ್ಲ. ಇನ್ನು ಅವರು ತೊಳೆಯುತ್ತಾರೆ ಎಂಬುದು ಹಾಸ್ಯಾಸ್ಪದ. ಅವರಿಗೆ ಯಾವ ನೈತಿಕತೆಯೂ ಇಲ್ಲ ಎಂದು ತಿರುಗೇಟು ನೀಡಿದರು.

ಬೆಳಗಾವಿ, ಹುಬ್ಬಳ್ಳಿ, ಬೀದರ್‌ನಲ್ಲಿ ಸಂಭ್ರಮದ 74 ನೇ ಗಣರಾಜ್ಯೋತ್ಸವ ಆಚರಣೆ

ಅರ್ಕಾವತಿ ಹಗರಣದಲ್ಲಿ 900 ಎಕರೆ ಜಮೀನು ಡಿನೋಟಿಫಿಕೇಶನ್‌ ಮಾಡಿದ್ದಾರೆ. ಅದರಲ್ಲಿ ಏನು ರಾಡಿಯಾಗಿದೆ ಎಂಬುದನ್ನು ವಿರೋಧ ಪಕ್ಷದ ನಾಯಕನಾಗಿದ್ದಾಗ ನಾನೇ ಹೊರ ಹಾಕಿದ್ದೇನೆ. ಈಗ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ ಅವರು ರಾಡಿ ತೊಳೆಯುತ್ತೇವೆ ಎನ್ನುತ್ತಿದ್ದಾರೆ. ಈ ಮೊದಲು ರಾಡಿ ಮಾಡಿ ಹೋದವರು ಅವರೇ ಎಂದು ಹರಿಹಾಯ್ದರು.

ಚುನಾವಣೆ ಸಮೀಪಿಸುತ್ತಿರುವುದರಿಂದ ಕಾಂಗ್ರೆಸ್‌ ಗಿಮಿಕ್‌ ಮಾಡುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ ಹಾಗೂ ರಮೇಶ ಜಾರಕಿಹೊಳಿ ವಿರುದ್ಧ ಬೆಂಗಳೂರಿನ ಹೈಗ್ರೌಂಡ್‌ ಪೊಲೀಸ್‌ ಠಾಣೆಯಲ್ಲಿ ಚುನಾವಣೆ ಅಕ್ರಮದ ದೂರು ದಾಖಲಿಸಿರುವುದು ಅದರಲ್ಲಿ ಒಂದಾಗಿದೆ. ಜನನಾಯಕರ ವಿರುದ್ಧ ಪ್ರಕರಣ ದಾಖಲಿಸುವ ಮೂಲಕ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ. ಹಿಂದೆ ಅವರು ಯಾವ ರೀತಿ ಚುನಾವಣೆ ಮಾಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಈಗಾಗಲೇ ಅವರು ಬಹಿರಂಗವಾಗಿ ಕುಕ್ಕರ್‌ ಹಂಚುವ ಮೂಲಕ ಚುನಾವಣೆಗೆ ತಯಾರಿ ಮಾಡುತ್ತಿದ್ದಾರೆ. ಚುನಾವಣೆ ಬಗ್ಗೆ ಮಾತನಾಡುವ ನೈತಿಕತೆ ಅವರಿಗೆ ಇಲ್ಲ ಎಂದು ಆರೋಪಿಸಿದರು. ಗಣತಂತ್ರದ ದಿನ ಕರ್ನಾಟಕ ಸ್ತಬ್ಧ ಚಿತ್ರ ಪ್ರದರ್ಶನ: ನಾರಿಶಕ್ತಿಯನ್ನು ಅಭಿನಂದಿಸಿದ ಜೋಶಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ
ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!