ಅಧಿವೇಶನಕ್ಕೆ ಸಚಿವರಾಗಿ ಬರ್ತೀವಿ: ಬಿಜೆಪಿಯಲ್ಲಿ ಸಂಚಲನ ಮೂಡಿಸಿದ MLCಗಳ ಹೇಳಿಕೆ

Published : Aug 24, 2020, 10:42 PM ISTUpdated : Aug 24, 2020, 10:45 PM IST
ಅಧಿವೇಶನಕ್ಕೆ ಸಚಿವರಾಗಿ  ಬರ್ತೀವಿ: ಬಿಜೆಪಿಯಲ್ಲಿ ಸಂಚಲನ ಮೂಡಿಸಿದ  MLCಗಳ ಹೇಳಿಕೆ

ಸಾರಾಂಶ

ಕಳೆದ ಒಂದು ವಾರದಿಂದ ರಾಜ್ಯ ಬಿಜೆಪಿ ರಾಜಕೀಯ ಚಟುವಟಿಕೆ ಜೋರಾಗಿದೆ. ಇದರ ಬೆನ್ನಲ್ಲೇ ಇದೀಗ ನೂತನ ವಿಧಾನಪರಿಷತ್ ಸದಸ್ಯರ ಹೇಳಿಕೆ ಮತ್ತಷ್ಟು ಸಂಚಲನ ಮೂಡಿಸಿದೆ.

ಬೆಂಗಳೂರು, (ಆ.24): ಕರ್ನಾಟಕ ಬಿಜೆಪಿಯಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ರಾಷ್ಟ್ರೀಯ ಬಿಜೆಪಿಯ ಸಂಘಟನಾ ಪ್ರಧಾನಿ ಕಾರ್ಯದರ್ಶಿ ಬಿಲ್ ಸಂತೋಷ್ ಅವರು ಒಬ್ಬ ನಾಯಕನ್ನ ಭೇಟಿ ಮಾಡಿ ಮಹತ್ವದ ಚರ್ಚೆಗಳು ನಡೆಸಿದ್ದಾರೆ.

ಇತ್ತ ಇಬ್ಬರು ನೂತನ ವಿಧಾನಪರಿಷತ್ ಸದಸ್ಯರು ಅಧಿವೇಶನಕ್ಕೆ ಸಚಿವರಾಗಿ ಹೋಗುತ್ತೇವೆ ಎಂದು ಹೇಳುವ ಮೂಲಕ ರಾಜ್ಯ ಬಿಜೆಪಿಯಲ್ಲಿ ಸಂಚಲ ಮೂಡಿಸಿದ್ದಾರೆ.

ಪ್ರಸಕ್ತ ಸಾಲಿನ 15ನೇ ವಿಧಾನಸಭೆಯ 7ನೇ ಅಧಿವೇಶನದ ಸೆಪ್ಟಂಬರ್ 21 ರಿಂದ ಆರಂಭಗೊಳಲಿದೆ. ಗುರುವಾರ ನಡೆದಿದ್ದ ಸಚಿವ ಸಂಪುಟದಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಇದರೊಳಗೆ ಸಚಿವ ಸಂಪುಟ ವಿಸ್ತರಣೆ ಮಾಡಲು ಸಿಎಂ ಪ್ಲಾನ್ ಮಾಡಿದ್ದಾರೆ. 

ಅಖಾಡಕ್ಕಿಳಿದ ಬಿಎಲ್ ಸಂತೋಷ್, ರಾಜ್ಯ ಬಿಜೆಪಿಯಲ್ಲಿ ಏನಾಗ್ತಿದೆ..?

ಹೌದು...ಎಂಎಲ್‌ಸಿಗಳಾದ ಎಂಟಿಬಿ ನಾಗರಾಜ್ ಮತ್ತು ಆರ್. ಶಂಕರ್ ಅವರು ಇಂದು (ಸೋಮವಾರ) ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಂಟಿಬಿ ನಾಗರಾಜ್,  ಸಿಎಂ ಆರೋಗ್ಯ ವಿಚಾರಿಸಲು ನಾವಿಬ್ಬರು ಬಂದಿದ್ದು, ಸಂಪುಟ ವಿಸ್ತರಣೆ ಬಗ್ಗೆಯೂ ಚರ್ಚೆ ಮಾಡಿದ್ದೇವೆ. ಆದಷ್ಟು ಬೇಗ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಹೇಳಿದ್ದಾರೆ. ಅಧಿವೇಶನಕ್ಕೂ ಮುಂಚೆಯೇ ನಮ್ಮನ್ನ ಸಚಿವರಾಗಿ ಮಾಡ್ತೀವಿ ಅಂತ ಸಿಎಂ ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಇನ್ನು ಇದೇ ವೇಳೆ ಆರ್. ಶಂಕರ್ ಮತನಾಡಿ, ಆದಷ್ಟು ಬೇಗ ಸಚಿವ ಸ್ಥಾನ ಕೊಡೋದಾಗಿ ಸಿಎಂ ಭರವಸೆ ಕೊಟ್ಟಿದ್ದಾರೆ. ಅಧಿವೇಶನಕ್ಕೆ ಸಚಿವರಾಗಿ ಬರ್ತೀವಿ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಮಗೆ ಭಿಕ್ಷುಕರಂತೆ ಭಿಕ್ಷೆ ಹಾಕ್ತಾರೆ; ₹10,000 ಕೋಟಿ ಅನುದಾನ ಕೊಡಿ, ಇಲ್ಲ ಪ್ರತ್ಯೇಕ ರಾಜ್ಯ ಮಾಡಿ-ರಾಜು ಕಾಗೆ
ಸಿದ್ದರಾಮಯ್ಯ ಹೆಲಿಕಾಪ್ಟರ್‌ ಪ್ರಯಾಣಕ್ಕೆ ರಾಜ್ಯದ ಬೊಕ್ಕಸದಿಂದ ಕೋಟ್ಯಂತರ ಖರ್ಚು!