ಚುನಾವಣೆಯಲ್ಲಿ ನಮಗೆ ಸೋಲೇ ಹೊರತು ರಾಷ್ಟ್ರೀಯ ಸಿದ್ಧಾಂತದ ಸೋಲಲ್ಲ: ಸಿ.ಟಿ.ರವಿ

Published : Jul 14, 2024, 04:24 PM ISTUpdated : Jul 15, 2024, 08:51 AM IST
ಚುನಾವಣೆಯಲ್ಲಿ ನಮಗೆ ಸೋಲೇ ಹೊರತು ರಾಷ್ಟ್ರೀಯ ಸಿದ್ಧಾಂತದ ಸೋಲಲ್ಲ: ಸಿ.ಟಿ.ರವಿ

ಸಾರಾಂಶ

ಸೋಲೆಂಬುದು ನಮಗೆ ಪಾಠ ಕಲಿಸುವ ಜೊತೆಗೆ ನಮ್ಮವರು ಯಾರೆಂಬುದನ್ನೂ ಸಹ ತಿಳಿಸುತ್ತದೆ. ನಮಗೆ ಚುನಾವಣೆಯಲ್ಲಿ ಸೋಲಾಗಿದೆಯೇ ಹೊರತು ಇದು ಜೀವನದ ಸೋಲಂತೂ ಅಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.   

ದಾವಣಗೆರೆ (ಜು.14): ಸೋಲೆಂಬುದು ನಮಗೆ ಪಾಠ ಕಲಿಸುವ ಜೊತೆಗೆ ನಮ್ಮವರು ಯಾರೆಂಬುದನ್ನೂ ಸಹ ತಿಳಿಸುತ್ತದೆ. ನಮಗೆ ಚುನಾವಣೆಯಲ್ಲಿ ಸೋಲಾಗಿದೆಯೇ ಹೊರತು ಇದು ಜೀವನದ ಸೋಲಂತೂ ಅಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು. ನಗರದ ಶ್ರೀ ಅಭಿನವ ರೇಣುಕಾ ಮಂದಿರದಲ್ಲಿ ಜಿ.ಎಂ.ಸಿದ್ದೇಶ್ವರ ಅಭಿಮಾನಿ ಬಳಗದಿಂದ ಕೇಂದ್ರದ ಮಾಜಿ ಸಚಿವ ಡಾ.ಜಿ.ಎಂ.ಸಿದ್ದೇಶ್ವರರ 72ನೇ ಜನ್ಮದಿನ ಸಮಾರಂಭದಲ್ಲಿ ಮಾತನಾಡಿದ ಅವರು, ನಾವು ಒಂದು ಗುರಿ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದೇವೆ ಎಂದರು.

ನಮ್ಮದು ರಾಷ್ಟ್ರೀಯ ಸಿದ್ಧಾಂತವಾಗಿದೆ. ಅದಕ್ಕೆ ಎಂದಿಗೂ ಸೋಲೆಂಬುದೇ ಇಲ್ಲ. ನಾವು ಚುನಾವಣೆಯಲ್ಲಷ್ಟೇ ಸೋತಿರಬಹುದು. ಆದರೆ, ಇದು ಚುನಾವಣೆಯ ಸೋಲೇ ಹೊರತು, ಸಿದ್ಧಾಂತದ ಸೋಲಲ್ಲ. ರಾಷ್ಟ್ರ ನಿಷ್ಟೆ ಹಾಗೂ ಪಕ್ಷ ನಿಷ್ಟೆಗೆ ಚ್ಯುತಿ ಬಾರದಂತೆ ಇರೋಣ ಎಂದು ಅವರು ತಿಳಿಸಿದರು. ನಾವೆಲ್ಲರೂ ಒಗ್ಗಟ್ಟಾಗಿದ್ದರೆ ಕಾಂಗ್ರೆಸ್ ಎಂಬ ಕಸವನ್ನು ದೇಶದಿಂದ ಗುಡಿಸಿ ಹಾಕುವುದು ಕಷ್ಟವೇನಲ್ಲ. ಗಾಯತ್ರಿ ಸಿದ್ದೇಶ್ವರರ ಸೋಲಿಗೆ ನಾವ್ಯಾರೂ ಎದೆಗುಂದಬಾರದು. ಜಿ.ಎಂ.ಸಿದ್ದೇಶ್ವರ್ ಸಹ ಈ ಸೋಲಿಗೆ ಕುಗ್ಗಬಾರದು. ವಿರೋಧಿಗಳಿಗೆ ಸೋಲಬಾರದು. ನಮ್ಮ ಕೆಲಸವನ್ನು ನಾವು ಮಾಡೋಣ. 

ಗೂಂಡಾ ವರ್ತನೆ, ಟಾರ್ಗೆಟ್ ರಾಜಕಾರಣ ಕಾಂಗ್ರೆಸ್ ಸಂಸ್ಕೃತಿ: ನಿಖಿಲ್ ಕುಮಾರಸ್ವಾಮಿ

ನಮ್ಮನ್ನು ದ್ವೇಷ ಮಾಡುವವರನ್ನು ನಾವೂ ದ್ವೇಷ ಮಾಡಬಾರದು. ನಾವು ಶಾಂತಿಯಿಂದ ಇದ್ದರೆ ಕಾಲವೇ ಎಲ್ಲವನ್ನೂ ನಿರ್ಣಯ ಮಾಡುತ್ತದೆ ಎಂದು ಅವರು ಹೇಳಿದರು. ಶಾಸಕ, ಮಾಜಿ ಸಚಿವ ಮುರುಗೇಶ ನಿರಾಣಿ ಮಾತನಾಡಿ, ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರರದ್ದು ನೇರ ಮತ್ತು ನಿಷ್ಟುರ ಮಾತು. ಹಾಗಾಗಿ ಕೆಲವರಿಗೆ ನೋವಾಗಬಹುದು. ಆದರೂ, ಸಿದ್ದೇಶ್ವರರ ಮನಸ್ಸು ನಿಷ್ಕಲ್ಮಷವಾದುದು. ಒಳ್ಳೆಯ ಮನಸ್ಸು ಇರುವವರಿಗೆ ದೇವರು ಖಂಡಿತಾ ಒಳ್ಳೆಯದನ್ನೇ ಮಾಡುತ್ತಾನೆ. ಸದ್ಯ ತಾತ್ಕಾಲಿಕವಾಗಿ ಹಿನ್ನಡೆಯಾಗಿರಬಹುದು. ಆದರೆ, ಮುಂದಿನ ಭವಿಷ್ಯವು ಉಜ್ವವಾಗಿರಲಿ ಎಂದು ಶುಭಾರೈಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!