ಚಾಮರಾಜನಗರ ಕ್ಷೇತ್ರದಿಂದ ಯಾರೇ ಕಾಂಗ್ರೆಸ್ ಅಭ್ಯರ್ಥಿಯಾದರೂ ಗೆಲ್ಲಿಸುತ್ತೇವೆ: ಶಾಸಕ ಅನಿಲ್ ಚಿಕ್ಕಮಾದು

Published : Jan 13, 2024, 10:23 PM IST
ಚಾಮರಾಜನಗರ ಕ್ಷೇತ್ರದಿಂದ ಯಾರೇ ಕಾಂಗ್ರೆಸ್ ಅಭ್ಯರ್ಥಿಯಾದರೂ ಗೆಲ್ಲಿಸುತ್ತೇವೆ:  ಶಾಸಕ ಅನಿಲ್ ಚಿಕ್ಕಮಾದು

ಸಾರಾಂಶ

ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾರೇ ಸ್ಪರ್ಧೆ ಮಾಡಿದರೂ ಅವರನ್ನು ಗೆಲ್ಲಿಸಿಕೊಂಡು ಬರುವ ನಿಟ್ಟಿನಲ್ಲಿ ನಾವು ಸಿದ್ದರಿದ್ದೇವೆ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು. 

ಮೈಸೂರು (ಜ.12): ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾರೇ ಸ್ಪರ್ಧೆ ಮಾಡಿದರೂ ಅವರನ್ನು ಗೆಲ್ಲಿಸಿಕೊಂಡು ಬರುವ ನಿಟ್ಟಿನಲ್ಲಿ ನಾವು ಸಿದ್ದರಿದ್ದೇವೆ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಮ್ಮ ಸರ್ಕಾರದ ಉತ್ತಮವಾಗಿ ಅಧಿಕಾರ ನಡೆಸುತ್ತಿದೆ. ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ನಮ್ಮ ಮುಖ್ಯಮಂತ್ರಿಗಳು ನುಡಿದಂತೆ ನಡೆದುಕೊಂಡು ಈಗಾಗಲೇ ಪಂಚ ಗ್ಯಾರಂಟಿಗಳ ಸೌಲಭ್ಯಗಳನ್ನು ಜನ‌ರು ಪಡೆಯುತ್ತಿದ್ದಾರೆ. ಜನ ಮುಂದಿನ ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಕೈ ಹಿಡಿಯುತ್ತಾರೆ ಎಂಬ ವಿಶ್ವಾಸ ಇದೆ ಎಂದರು.

ಯತೀಂದ್ರಗೆ ಅವಕಾಶ ಸಿಕ್ಕರೇ ಸಂತೋಷ: ಮೈಸೂರು- ಕೊಡುಗು ಲೋಕಸಭಾ ಚುನಾವಣೆಗೆ ಡಾ. ಯತೀಂದ್ರ ಸಿದ್ದರಾಮಯ್ಯ ಸ್ಪರ್ಧೆ ಸಂಬಂಧ ಪ್ರತಿಕ್ರಿಯಿಸಿದ ಅವರು, ತಮ್ಮ ತಂದೆಗಾಗಿ ಕ್ಷೇತ್ರ ತ್ಯಾಗ ಮಾಡಿದ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಈ ಬಾರಿ ಅಂತಹ ಅವಕಾಶ ಸಿಕ್ಕಿದರೆ ಬಹಳ ಸಂತೋಷ ಎಂದರು. ಈಗಾಗಲೇ ಸಾಕಷ್ಟು ಜನರು ಆಕಾಂಕ್ಷಿಗಳಿದ್ದಾರೆ. 

ಸಂಸದ ಪ್ರಜ್ವಲ್‌ರ ವಿಡಿಯೋ ಇದೆ, ಸಮಯ ಬಂದಾಗ ಬಿಡುಗಡೆ: ಬಿಜೆಪಿ ವಕ್ತಾರ ದೇವರಾಜೇಗೌಡ

ಡಾ. ಯತೀಂದ್ರ ಅವರನ್ನು ಹೈಕಮಾಂಡ್ ಪರಿಗಣಿಸಿ ಅವಕಾಶ ನೀಡಿದರೆ ಬಿಜೆಪಿ ಪಾಲಾಗಿರುವ ಮೈಸೂರು- ಕೊಡುಗು ಲೋಕಸಭಾ ಕ್ಷೇತ್ರವನ್ನು ನಾವು ಸುಲಭವಾಗಿ ಗೆಲ್ಲಬಹುದು. ಬಿಜೆಪಿಗೆ ಸೆಡ್ಡು ಹೊಡೆದು ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಒಂದು ವೇಳೆ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಟಿಕೆಟ್ ಕೊಟ್ಟರೆ ನಾನು ಅವರ ಗೆಲುವಿಗೆ ಹಗಲಿರುಳು ಶ್ರಮಿಸುತ್ತೇನೆ. ಅವರು ನಮ್ಮ ಆಪ್ತರು, ಅವರಿಗೆ ಈ ಬಾರಿ ಒಂದು ಸೂಕ್ತ ಸ್ಥಾನಮಾನ ಅಧಿಕಾರ ಸಿಗಬೇಕು ಎಂಬುದು ನಮ್ಮ‌ ಆಶಯ ಎಂದು ಅವರು ಹೇಳಿದರು.

ಶ್ರೀರಾಮ ಬಿಜೆಪಿ ಅವರಿಗೊಬ್ಬರಿಗೇ ಅಲ್ಲ: ಶ್ರೀರಾಮ ಬಿಜೆಪಿ ಅವರಿಗೊಬ್ಬರಿಗೇ ಅಲ್ಲ. ಸಮಸ್ತ ಹಿಂದೂಗಳ ಆರಾಧ್ಯ ದೈವ ಶ್ರೀರಾಮ. ಶ್ರೀರಾಮ ಕೇವಲ ಬಿಜೆಪಿಯವರಿಗೆ ಮಾತ್ರವಲ್ಲ. ರಾಮಮಂದಿರದ ವಿಚಾರ ಮುಂದಿಟ್ಟು ರಾಜಕೀಯ ಮಾಡುವುದು ಸರಿಯಲ್ಲ ಎಂದು ಕಾಂಗ್ರೆಸ್ ಶಾಸಕ ಅನಿಲ್ ಚಿಕ್ಕಮಾದು ಕಿಡಿಕಾರಿದರು.

ಅಕ್ರಮ ಆಸ್ತಿ ಇದ್ದರೆ ಸರ್ಕಾರ ವಶಕ್ಕೆ ಪಡೆಯಲಿ: ಎಚ್‌.ಡಿ.ರೇವಣ್ಣ

ಬಿಜೆಪಿಯವರು ಧಾರ್ಮಿಕ ಭಾವನೆಗಳನ್ನು ಮುಂದಿಟ್ಟುಕೊಂಡು ಈ ರೀತಿಯ ಮಾಡುತ್ತಿದ್ದಾರೆ. ಬಿಜೆಪಿ ಅವರು ರಾಮಾಯಣ ಬರೆದ ವಾಲ್ಮೀಕಿ ಅವರನ್ನೇ ಕಡೆಗಣಿದ್ದಾರೆ. ವಾಲ್ಮೀಕಿ ಅವರ ಮೇಲೆ ಗೌರವ ಇದ್ದರೆ ಶ್ರೀರಾಮ ಮಂದಿರದ ಬಳಿ ವಾಲ್ಮೀಕಿ ಅವರ ಪುತ್ಥಳಿ, ಪ್ರತಿಮೆಯನ್ನಾದರೂ ಮಾಡಬಹುದಿತ್ತು. ಈ ಮೂಲಕ ರಾಮಾಯಣದ ನಿರ್ಮಾತೃ ವಾಲ್ಮೀಕಿ ಅವರಿಗೆ ಅಗೌರವ ತೋರಿದ್ದಾರೆ ಎಂದು ಅವರು ಆರೋಪಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌