ಬೆಳಗಾವಿ: ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ, ಜೈಲಿನಿಂದ ಹೊರಬಂದ ಆರೋಪಿಗಳಿಗೆ ಹೂ, ಹಾರ ಹಾಕಿ ಸ್ವಾಗತ..!

Published : Apr 23, 2024, 07:43 PM IST
ಬೆಳಗಾವಿ: ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ, ಜೈಲಿನಿಂದ ಹೊರಬಂದ ಆರೋಪಿಗಳಿಗೆ ಹೂ, ಹಾರ ಹಾಕಿ ಸ್ವಾಗತ..!

ಸಾರಾಂಶ

ಪ್ರಕರಣ ಸಂಬಂಧ 14 ಜನ ಆರೋಪಿಗಳನ್ನು ಹಿಂಡಲಗಾ ಕಾಗಾರೃಹದಲ್ಲಿಡಲಾಗಿತ್ತು. ಜಾಮೀನು ಸಿಗುತ್ತಿದ್ದಂತೆಯೇ ಕಾರಾಗೃಹದಿಂದ ಹೊರಬಂದ ಆರೋಪಿಗಳ ಪೈಕಿ ಬಸಪ್ಪ ನಾಯಕ್‌ ಎಂಬುವನಿಗೆ ಹೂವಿನ ಮಾಲೆ ಹಾಕಿ, ಸಿಹಿ ತಿನ್ನಿಸಿ ಕಾರಾಗೃಹದ ಎದುರೇ ಸ್ವಾಗತ ಕೋರಲಾಗಿದೆ. 

ಬೆಳಗಾವಿ(ಏ.23):  ಜಿಲ್ಲೆಯ ಹೊಸವಂಟಮೂರಿ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ, ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಅಮಾನವೀಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿದ್ದ ಆರೋಪಿಗಳು ಹಿಂಡಲಗಾ ಕಾರಾಗೃಹದಿಂದ ಬಿಡುಗಡೆ ಆಗಿದ್ದಾರೆ. ಬಿಡುಗಡೆಯಾದ ಆರೋಪಿಗಳಿಗೆ ಹೂ, ಹಾರ ಹಾಕಿ ಅದ್ಧೂರಿಯಾಗಿ ಸ್ವಾಗತಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿದೆ.

ಕಳೆದ ಡಿಸೆಂಬರ್‌ ತಿಂಗಳಲ್ಲಿ ಮಹಿಳೆಯನ್ನ ವಿವಸ್ತ್ರಗೊಳಿ, ಕಂಬಕ್ಕೆ ಕಟ್ಟಿ ಹಾಕಿ ಥಳಿಸಲಾಗಿತ್ತು. ಈ ಪ್ರಕರಣ ದೇಶದ ಗಮನ ಸೆಳೆದಿತ್ತು. ನಾಲ್ಕು ತಿಂಗಳ ಬಳಿಕ ಆರೋಪಿಗಳಿಗೆ ಕೋರ್ಟ್‌ ಜಾಮೀನು ನೀಡಿದೆ. 

ಬೆಳಗಾವಿಯಲ್ಲಿ ಮತ್ತೊಬ್ಬ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ; ಅಮಾನವೀಯ ಘಟನೆಗೆ ಕೊನೆಯೇ ಇಲ್ವಾ?

ಈ ಪ್ರಕರಣ ಸಂಬಂಧ 14 ಜನ ಆರೋಪಿಗಳನ್ನು ಹಿಂಡಲಗಾ ಕಾಗಾರೃಹದಲ್ಲಿಡಲಾಗಿತ್ತು. ಜಾಮೀನು ಸಿಗುತ್ತಿದ್ದಂತೆಯೇ ಕಾರಾಗೃಹದಿಂದ ಹೊರಬಂದ ಆರೋಪಿಗಳ ಪೈಕಿ ಬಸಪ್ಪ ನಾಯಕ್‌ ಎಂಬುವನಿಗೆ ಹೂವಿನ ಮಾಲೆ ಹಾಕಿ, ಸಿಹಿ ತಿನ್ನಿಸಿ ಕಾರಾಗೃಹದ ಎದುರೇ ಸ್ವಾಗತ ಕೋರಲಾಗಿದೆ. 

ಮಹಿಳೆಯನ್ನ ವಿವಸ್ತ್ರಗೊಳಿ, ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಪ್ರಕರಣದ ಆರೋಪಿಗಳಿಗೆ ಹೂ, ಹಾರ ಹಾಕಿ ಅದ್ಧೂರಿಯಾಗಿ ಸ್ವಾಗತಿಸಿದ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿದೆ.   

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಎಂಎಸ್ಪಿ ಅಡಿಯಲ್ಲಿ ತೊಗರಿ ಖರೀದಿ ಆರಂಭಿಸಿ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ
ಮೂರು ವರ್ಷಗಳಲ್ಲಿ 57,733 ಸೈಬರ್ ಅಪರಾಧ, ₹5,473 ಕೋಟಿ ವಂಚನೆ: ಗೃಹ ಸಚಿವ ಪರಮೇಶ್ವರ್