ಸಿದ್ದರಾಮಯ್ಯ ಈಗ ಕೋವಿಡ್ ಹಗರಣ ತನಿಖೆ ಮಾಡ್ತೀವಂದ್ರೆ ಏನರ್ಥ?: ಬಿ.ಸಿ.ಪಾಟೀಲ್‌ ಕಿಡಿ

Published : Sep 02, 2024, 05:35 AM IST
ಸಿದ್ದರಾಮಯ್ಯ ಈಗ ಕೋವಿಡ್ ಹಗರಣ ತನಿಖೆ ಮಾಡ್ತೀವಂದ್ರೆ ಏನರ್ಥ?: ಬಿ.ಸಿ.ಪಾಟೀಲ್‌ ಕಿಡಿ

ಸಾರಾಂಶ

ಸರ್ಕಾರ ಬದಲಾವಣೆಯಾಗಿ 14 ತಿಂಗಳಾಗುತ್ತಾ ಬಂದಿದೆ. ಈವರೆಗೂ ಸುಮ್ಮನಿದ್ದವರು ಈಗ ಕೋವಿಡ್ ಹಗರಣದ ತನಿಖೆ ಮಾಡುತ್ತೇವೆಂದರೆ ಏನರ್ಥ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು. 

ದಾವಣಗೆರೆ (ಸೆ.02): ಸರ್ಕಾರ ಬದಲಾವಣೆಯಾಗಿ 14 ತಿಂಗಳಾಗುತ್ತಾ ಬಂದಿದೆ. ಈವರೆಗೂ ಸುಮ್ಮನಿದ್ದವರು ಈಗ ಕೋವಿಡ್ ಹಗರಣದ ತನಿಖೆ ಮಾಡುತ್ತೇವೆಂದರೆ ಏನರ್ಥ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು. ನಗರದ ಅಪೂರ್ವ ಹೋಟೆಲ್ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ ಕೋವಿಡ್ ಹಗರಣವೆಂದು ಈಗ ಹೇಳುತ್ತಿರುವವರು ಹಿಂದೆ ವಿಪಕ್ಷದಲ್ಲಿದ್ದು ಸುಮ್ಮನಿದ್ದರೆಂದರೆ ಅವತ್ತು ಕೋವಿಡ್ ಹಗರಣದಲ್ಲಿ ಇವರಿಗೂ ಪಾಲು ಇತ್ತಾ? ಮತ್ತೆ ಆಗ ಯಾಕೆ ಸುಮ್ಮನಿದ್ದರು ಎಂದು ಪ್ರಶ್ನಿಸಿದರು.

ಅಧಿಕಾರಕ್ಕೆ ಬಂದು 14 ತಿಂಗಳು ಸುಮ್ಮನಿದ್ದರು. ಈ ಹಿಂದೆ ನಮ್ಮ ಸರ್ಕಾರವಿದ್ದಾಗ ವಿಪಕ್ಷದಲ್ಲಿದ್ದರು ಸುಮ್ಮನಿದ್ದರು. ಕೋವಿಡ್ ಹಗರಣದ ತನಿಖೆಗೆ ಸೂಚನೆ ನೀಡುತ್ತೇವೆನ್ನುವವರು ಆವಾಗೆಲ್ಲಾ ಏನು ಮಾಡುತ್ತಿದ್ದರು? ಅದೇನೋ ಬಿಚ್ಚಿಡ್ತೀನಿ, ಬಿಚ್ಚಿಡ್ತೀನಿ ಅಂತಾ ಹೇಳುತ್ತಾರಲ್ಲವಾ, ಬಿಚ್ಚಿಡಲಿ ನೋಡೋಣ ಎಂದು ಕಿಡಿಕಾರಿದರು.

ಬಿಜೆಪಿಯವರು ವಿನಾಕಾರಣ ಆಪರೇಷನ್ ಕಮಲ ಮಾಡುತ್ತಾರೆಂದು ಕಾಂಗ್ರೆಸ್ಸಿನವರು ಆರೋಪಿಸುತ್ತಿದ್ದಾರೆ. 136 ಶಾಸಕರಿದ್ದು, ಇದು ಹೇಗೆ ಸಾಧ್ಯ? ₹100 ಕೋಟಿಗೆ ಖರೀದಿ ಮಾಡುತ್ತಾರೆಂದು ತಮ್ಮ ತಲೆಗೆ ತಾವೇ ಹಣ ಕಟ್ಟಿಕೊಳ್ಳುತ್ತಿದ್ದಾರೆ. ಸರ್ಕಾರ ಅಸ್ಥಿರಗೊಳಿಸಬೇಕೆಂದರೆ 90 ಶಾಸಕರು ಬೇಕು. ಇದೆಲ್ಲಾ ಸಾಧ್ಯವೇ ಎಂದು ಬಿ.ಸಿ.ಪಾಟೀಲ್‌ ಪ್ರಶ್ನಿಸಿದರು.

ದಸರಾ ಗಜಪಡೆಗೆ ಭಾರ ಹೊರಿಸುವ ತಾಲೀಮು ಆರಂಭ: ಮೊದಲ ದಿನ ಅಭಿಮನ್ಯು ಮೈಮೇಲೆ 520 ಕೆ.ಜಿ ಭಾರ

ಕಾಂಗ್ರೆಸ್ಸಿನವರ ಕೈಯಲ್ಲಿ ಹೇಳುವುದಕ್ಕೆ ಯಾವುದೇ ಸರಿಯಾದ ಕೆಲಸ ಇಲ್ಲ. ಗ್ಯಾರಂಟಿ ಯೋಜನೆಗಳನ್ನೂ ಸಮರ್ಪಕವಾಗಿ ಜಾರಿಗೊಳಿಸಿಲ್ಲ. ಜನರ ಗಮನ ಬೇರೆಡೆ ಸೆಳೆಯಲು ಹೀಗೆಲ್ಲಾ ಮಾಡುತ್ತಿದ್ದಾರೆ
- ಬಿ.ಸಿ.ಪಾಟೀಲ್, ಮಾಜಿ ಸಚಿವ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್
ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ