ರಾಜೀವ್‌ ಚಂದ್ರಶೇಖ‌ರ್ ಯಾರು, ಅವರು ಕರ್ನಾಟಕಕ್ಕೆ ಕೊಡುಗೆ ಏನು?: ಪ್ರಿಯಾಂಕ್ ಖರ್ಗೆ

Published : Oct 15, 2024, 12:40 PM IST
ರಾಜೀವ್‌ ಚಂದ್ರಶೇಖ‌ರ್ ಯಾರು, ಅವರು ಕರ್ನಾಟಕಕ್ಕೆ ಕೊಡುಗೆ ಏನು?: ಪ್ರಿಯಾಂಕ್ ಖರ್ಗೆ

ಸಾರಾಂಶ

ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅಲ್ಲದೆ ಕೇಂದ್ರದ ಮಾಜಿ ಸಚಿವ ರಾಜೀವ್ ಚಂದ್ರಶೇಖರ್ ಅವರೂ ಸಹ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಮಾತನಾಡಿದ್ದಾರೆ. ರಾಜೀವ್ ಚಂದ್ರಶೇಖರ್ ಯಾರು? ಕೇಂದ್ರದಲ್ಲಿ ಸಚಿವರಾಗಿದ್ದಾಗ ಕರ್ನಾಟಕಕ್ಕೆ ಅವರು ಕೊಟ್ಟ ಕೊಡುಗೆ ಏನಿದೆ. ಅವರೆಲ್ಲಾ ಮಾತನಾಡಬಹುದು, ಪ್ರಿಯಾಂಕ್ ಖರ್ಗೆ ಮಾತನಾಡಬಾರದಾ? ಎಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ   

ಬೆಂಗಳೂರು(ಅ.15): ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಮಾತನಾಡಿರುವ ಬಿಜೆಪಿ ನಾಯಕ ರಾಜೀವ್‌ ಚಂದ್ರಶೇಖ‌ರ್ ಅವರು ಕರ್ನಾಟಕಕ್ಕೆ ಕೊಟ್ಟಿರುವ ಕೊಡುಗೆ ಏನಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. 

ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅಲ್ಲದೆ ಕೇಂದ್ರದ ಮಾಜಿ ಸಚಿವ ರಾಜೀವ್ ಚಂದ್ರಶೇಖರ್ ಅವರೂ ಸಹ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಮಾತನಾಡಿದ್ದಾರೆ. 

ಸೆಮಿಕಾನ್ ಬಿಡಿ, ಕರ್ನಾಟಕದಲ್ಲಿ ಅಭಿವೃದ್ದಿಗೂ ಹಣವಿಲ್ಲ: ಪ್ರಿಯಾಂಕ್ ಖರ್ಗೆ ವಿರುದ್ಧ ರಾಜೀವ್ ಚಂದ್ರಶೇಖರ್‌ ಕಿಡಿ

ರಾಜೀವ್ ಚಂದ್ರಶೇಖರ್ ಯಾರು? ಕೇಂದ್ರದಲ್ಲಿ ಸಚಿವರಾಗಿದ್ದಾಗ ಕರ್ನಾಟಕಕ್ಕೆ ಅವರು ಕೊಟ್ಟ ಕೊಡುಗೆ ಏನಿದೆ. ಅವರೆಲ್ಲಾ ಮಾತನಾಡಬಹುದು, ಪ್ರಿಯಾಂಕ್ ಖರ್ಗೆ ಮಾತನಾಡಬಾರದಾ? ಎಂದರು. 

ಭೂಮಿ ವಾಪಸ್‌ ಮಾಡಿ ಮಲ್ಲಿಕಾರ್ಜುನ ಖರ್ಗೆ ತಪ್ಪೊಪ್ಪಿಗೆ: ರಾಜೀವ್ ಚಂದ್ರಶೇಖರ್

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬವು ಬೆಂಗಳೂರಿನಲ್ಲಿ ಹಂಚಿಕೆ ಮಾಡಲಾಗಿದ್ದ ಭೂಮಿಯನ್ನು ಸರ್ಕಾರಕ್ಕೆ ಮರಳಿಸುವ ನಿರ್ಣಯ ಕೈಗೊಂಡಿದ್ದನ್ನು ಬಿಜೆಪಿ ಮುಖಂಡ ರಾಜೀವ್ ಚಂದ್ರಶೇಖರ್ ಪ್ರಶ್ನಿಸಿದ್ದಾರೆ. ಭಾನುವಾರ ಟ್ವೀಟ್‌ ಮಾಡಿರುವ ಅವರು, ‘ಖರ್ಗೆ ಸಾಹೇಬರು 11 ಬಾರಿ ಚುನಾಯಿತರಾಗಿದ್ದಾರೆ. ಇದು ಅವರ ಕುಟುಂಬಕ್ಕೆ ಸಾರ್ವಜನಿಕ ಭೂಮಿಯನ್ನು ಅತಿಕ್ರಮಿಸುವ ಹಕ್ಕನ್ನು ನೀಡುತ್ತದೆ ಹಾಗೂ ಇದು ಕಾಂಗ್ರೆಸ್ ಪಕ್ಷದ ಕೆಲವು ರಾಜವಂಶಗಳಿಗೆ ಸರಿ ಎಂದು ತೋರುತ್ತದೆ. ನಾವು ಇದನ್ನು ಹರ್ಯಾಣದಲ್ಲಿಯೂ ನೋಡಿದ್ದೇವೆ. ಆದರೆ ಈ ದೇಶದ ಜನರು ರಾಜಕೀಯ ಕುಟುಂಬಗಳು ಭೂಮಿಯನ್ನು ಕಬಳಿಸುವುದು ಒಂದು ಅಪರಾಧ ಎಂದು ನೋಡುತ್ತಾರೆ’ ಎಂದು ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಲಿ: ರಾಜೀವ್‌ ಚಂದ್ರಶೇಖರ್‌ ಒತ್ತಾಯ

‘ಇಂದು 5 ಎಕರೆ ಭೂಮಿಯನ್ನು ಹಸ್ತಾಂತರಿಸಿದ್ದೀರಿ. ಇದಕ್ಕೂ ಮುನ್ನ ನಿಮ್ಮ ವಿರುದ್ಧದ ಭೂಕಬಳಿಕೆ ಆರೋಪವನ್ನು‘ಆಧಾರ ರಹಿತ’ ಎಂದು ಹೇಳಿದ್ದಿರಿ. ಆದರೆ ಇಂದು ಭೂಮಿ ಹಸ್ತಾಂತರಿಸುವ ಮೂಲಕ ನಿಮ್ಮ ಹೇಳಿಕೆ ಸರಿಯಾಗಿಲ್ಲ. ಆರೋಪ ನಿಜ ಎಂಬುದನ್ನು ನಿರೂಪಿಸಿದ್ದೀರಿ’ ಎಂದು ರಾಜೀವ್‌ ಚಾಟಿ ಬೀಸಿದ್ದಾರೆ. ಇನ್ನು ಖರ್ಗೆ ಅವರ ಪುತ್ರ ಪ್ರಿಯಾಂಕ್‌ ಖರ್ಗೆ ಅವರಿಗೆ ಚಾಟಿ ಬೀಸಿರುವ ರಾಜೀವ್‌, ‘ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿಯನ್ನು ಉಗ್ರರ ಪಕ್ಷ ಎಂದಿದ್ದರು. ಅದಕ್ಕೆ ನೀವು ಪ್ರತಿಕ್ರಿಯಿಸಿಲ್ಲ’ ಎಂದೂ ಕುಟುಕಿದ್ದಾರೆ.

ಖರ್ಗೆ ವಿರುದ್ಧ ರಾಜೀವ್‌, ಬಿಜೆಪಿ ನಾಯಕರ ಕಿಡಿ: 

ಬಿಜೆಪಿ ಉಗ್ರರ ಪಕ್ಷ ಎಂದಿರುವ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ನಾಯಕರಾದ ರಾಜೀವ್‌ ಚಂದ್ರಶೇಖರ್ ಹಾಗೂ ಸುಧಾಂಶು ತ್ರಿವೇದಿ ಕಿಡಿಕಾರಿದ್ದಾರೆ. ಟ್ವೀಟ್ ಮಾಡಿರುವ ರಾಜೀವ್‌ ಚಂದ್ರಶೇಖರ್‌, ‘ಖರ್ಗೆ ಅವರು ತಮ್ಮ ಕುಟುಂಬಕ್ಕೆ ಸರ್ಕಾರಿ ಭೂಮಿಯನ್ನು ಉಡುಗೊರೆಯಾಗಿ ನೀಡಿದವರು. ಇಂಥವರು 26/11 ಉಗ್ರ ದಾಳಿಯನ್ನು ಪಾಕ್ ಉಗ್ರರಿಂದ ದೂರವಿಡಲು ಅವರ ಪಕ್ಷ ಯಾವ ರೀತಿ ಪ್ರಯತ್ನಿಸಿತು ಎಂಬುದನ್ನು ಮತ್ತು ಅವರ ಇಟಾಲಿಯನ್‌ ಮುಖ್ಯಸ್ಥೆ ಬಾಟ್ಲಾ ಹೌಸ್‌ನಲ್ಲಿ ಉಗ್ರರು ಕೊಲ್ಲಲ್ಪಟ್ಟಾಗ ಯಾವ ರೀತಿ ಅತ್ತರು ಎಂಬುದನ್ನು ನೆನಪಿಸಿಕೊಳ್ಳಬೇಕು’ ಎಂದು ಚಾಟಿ ಬೀಸಿದ್ದಾರೆ. ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ ಮಾತನಾಡಿ, ‘ಉಗ್ರರನ್ನು ಯಾವತ್ತೂ ಬೆಂಬಲಿಸಿದ ಕಾಂಗ್ರೆಸ್‌ ಪಕ್ಷ ಈಗ ನಮ್ಮ ಮೇಲೆ ಆರೋಪ ಮಾಡುತ್ತಿದೆ’ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ
ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!