ಲೋಕಸಭಾ ಚುನಾವಣೆ: ಸುಮಲತಾರಿಗೆ ಟಿಕೆಟ್ ಕೇಳಿದ್ದರಲ್ಲಿ ತಪ್ಪೇನು? ಮಾಜಿ ಸಚಿವ ಕೆ.ಸಿ. ನಾರಾಯಣಗೌಡ

Published : Feb 05, 2024, 09:34 AM IST
ಲೋಕಸಭಾ ಚುನಾವಣೆ: ಸುಮಲತಾರಿಗೆ ಟಿಕೆಟ್ ಕೇಳಿದ್ದರಲ್ಲಿ ತಪ್ಪೇನು? ಮಾಜಿ ಸಚಿವ ಕೆ.ಸಿ. ನಾರಾಯಣಗೌಡ

ಸಾರಾಂಶ

ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅವರಿಗೆ ಟಿಕೆಟ್ ನೀಡುವಂತೆ ನಾನು ಕೇಳಿರುವುದರಲ್ಲಿ ತಪ್ಪೇನು ಕಾಣಿಸುತ್ತಿಲ್ಲ ಎಂದು ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಅವರು ಸಮರ್ಥಿಸಿಕೊಂಡರು.

 ಪಾಂಡವಪುರ (ಫೆ.5) :  ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅವರಿಗೆ ಟಿಕೆಟ್ ನೀಡುವಂತೆ ನಾನು ಕೇಳಿರುವುದರಲ್ಲಿ ತಪ್ಪೇನು ಕಾಣಿಸುತ್ತಿಲ್ಲ ಎಂದು ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಅವರು ಸಮರ್ಥಿಸಿಕೊಂಡರು.

ಪಟ್ಟಣದಲ್ಲಿ ನಡೆದ ಬಿಜೆಪಿ ಕಾರ್‍ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಂಸದೆ ಸುಮಲತಾ ಅವರು ನಮ್ಮ ಕ್ಷೇತ್ರಕ್ಕೆ ಬಂದು ನನ್ನ ಪರವಾಗಿ ಚುನಾವಣಾ ಪ್ರಚಾರ ಮಾಡಿದ್ದಾರೆ. ಅವರಿಗೆ ಟಿಕೆಟ್ ನೀಡಿದರೆ ತಪ್ಪೇನು ಎಂದು ಕೇಳಿದ್ದೇನೆ. ಮಂಡ್ಯ ಬಿಜೆಪಿ ಟಿಕೆಟ್ ಅವರಿಗೇ ಕೊಡಬೇಕು. ಈ ಬಗ್ಗೆ ಹೈಕಮಾಂಡ್ ಅವರಿಗೂ ಹೇಳಿದ್ದೇನೆ ಎಂದರು.

 

ಎನ್‌ಡಿಎ ಒಕ್ಕೂಟದಲ್ಲಿರೋ ಸುಮಲತಾ ಅವರಿಗೆ ಟಿಕೆಟ್ ಕೇಳೋಕೆ ಆಗುತ್ತಾ: ಪ್ರೀತಮ್ ಗೌಡ ಅಚ್ಚರಿಯ ನಡೆ

ಮಂಡ್ಯದಲ್ಲಿ ಬಿಜೆಪಿಗೆ ಕ್ಷೇತ್ರವನ್ನು ಬಿಟ್ಟುಕೊಟ್ಟು ಜೆಡಿಎಸ್ ಬೇರೆ ಕ್ಷೇತ್ರಗಳಿಗೆ ಹೋಗಲಿ, ನಾನು ಬಿಜೆಪಿ ಬಿಟ್ಟುಹೋಗುವ ಮಾತೇ ಇಲ್ಲ. ನನ್ನ ತೀರ್ಮಾನ ಏನೇ ಇದ್ದರೂ ಹೇಳುತ್ತೇನೆಂದು ದೃಢವಾಗಿ ಹೇಳಿದರು.

ಮಾಜಿ ಸಚಿವ ರಾಮ್‌ದಾಸ್ ಮಾತನಾಡಿ, ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಅವರು ದೇಶ ವಿಭಜನೆ ಮಾತನಾಡಿದ್ದಾರೆ. ಇದು ನಾಚಿಗೇಡಿನ ವಿಚಾರವಾಗಿದ್ದು, ಇದನ್ನು ಖಂಡಿಸಬೇಕು ಎಂದರು.

ಯುಪಿಎ ಸರ್ಕಾರ ಇದ್ದಾಗ ರಾಜ್ಯಕ್ಕೆ ಎಷ್ಟು ಹಣವನ್ನು ಕೊಟ್ಟಿದ್ದರು ಎಂಬುದನ್ನು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯೇ ಹೇಳಬೇಕು. ನಿಮಗೆ ಮಾತನಾಡಲು ಬೇರೆ ವಿಚಾರವೇ ಇಲ್ಲವೇ ಎಂದು ಛೇಡಿಸಿದರು.

ನನಗೆ ಮಂಡ್ಯದ ಮೊದಲ ಬಿಜೆಪಿ ಸಂಸದೆಯಾಗೋ ಆಸೆ: ಸುಮಲತಾ

ಈ ಬಾರಿಯ ಚುನಾವಣೆ ಭಾರತ ದೇಶ ಉಳಿಸುವ ಚುನಾವಣೆಯೇ ಹೊರತು ಯಾವುದೇ ಜಾತಿ, ಧರ್ಮದ ಮೇಲೆ ನಡೆಯಲ್ಲ. ತಾಕತ್ತಿದ್ದರೆ ಈ ಹಿಂದೆ ಯಾವ ಯೋಜನೆಗಳನ್ನು ಜಾರಿ ಮಾಡಿದ್ದೀರಿ ಹೇಳಿ ಎಂದು ಕಾಂಗ್ರೆಸ್‌ಗೆ ಸವಾಲು ಹಾಕಿದರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ